<p><strong>ರಾಮನಗರ</strong>: ಕೋವಿಡ್ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ ರಾಜ್ಯ ಸರ್ಕಾರ ₹ 3 ಸಾವಿರ ಸಹಾಯಧನ ನೀಡುತ್ತಿರುವುದು ಸ್ವಾಗತ. ಆದರೆ, ಇದಕ್ಕೆ ವಿಧಿಸಿರುವ ವಯಸ್ಸಿನ ಮಿತಿಯನ್ನು ತೆಗೆಯಬೇಕು ಎಂದು ರಾಮನಗರ ಜಿಲ್ಲಾ ಜಾನಪದ ಕಲಾವಿದರ ಸಂಘದ ಅಧ್ಯಕ್ಷ ಕೂಟಗಲ್ ಆಗ್ರಹಿಸಿದರು.</p>.<p>ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಸರ್ಕಾರದ ಸಹಾಯಧನ ಪಡೆಯಲು ಕೆಲವೊಂದು ಮಾನದಂಡಗಳನ್ನು ಸರ್ಕಾರ ಜಾರಿಗೆ ತರಲಾಗಿದೆ. ಅದರಲ್ಲಿ 35 ವರ್ಷ ಮೇಲ್ಪಟ್ಟ ಕಲಾವಿದರು ಈ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ. ಈ ಆದೇಶದಿಂದಾಗಿ 18 ವರ್ಷದಿಂದ 34 ವಯಸ್ಸಿನ ಯುವ ಕಲಾವಿದರಿಗೆ ಸಹಾಯಧನ ಕೈ ತಪ್ಪಲಿದೆ’ ಎಂಬ ಆತಂಕ<br />ವ್ಯಕ್ತಪಡಿಸಿದರು.</p>.<p>ಸಹಾಯಧನ ಪಡೆಯವ ಕಲಾವಿದರು ಕಡ್ಡಾಯವಾಗಿ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಆದೇಶ ಹೊರಡಿಸಲಾಗಿದೆ. ಆದರೆ, 45 ವರ್ಷ ಮೇಲ್ಪಟ್ಟ ಕಲಾವಿದರಿಗೇ ಲಸಿಕೆ ಸಿಕ್ಕಿಲ್ಲ. ಈ ನಿಯಮ ಕೈಬಿಡಬೇಕು ಎಂದರು.</p>.<p>ಗ್ರಾಮೀಣ ಯುವ ಕಲಾವಿದರು ಯಾವುದೇ ಪ್ರದರ್ಶನ ಸಿಗದೇ ಸಂಕಷ್ಟದಲ್ಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಧ್ಯಪ್ರವೇಶಿಸಿ 18 ವರ್ಷ ಮೇಲ್ಪಟ್ಟ ಎಲ್ಲಾ ಕಲಾವಿದರಿಗೂ ಸಹಾಯಧನ ತಲುಪುವಂತೆ ಮಾಡಬೇಕು ಎಂದು<br />ಕೋರಿದರು.</p>.<p>ಸಂಘದ ಗೌರವಾಧ್ಯಕ್ಷ ಪೂಜೆ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಎಚ್. ಪುಟ್ಟರಾಜು, ಖಜಾಂಚಿ ಜಗದೀಶ್ ಕುಮಾರ್, ನಿರ್ದೇಶಕ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಕೋವಿಡ್ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ ರಾಜ್ಯ ಸರ್ಕಾರ ₹ 3 ಸಾವಿರ ಸಹಾಯಧನ ನೀಡುತ್ತಿರುವುದು ಸ್ವಾಗತ. ಆದರೆ, ಇದಕ್ಕೆ ವಿಧಿಸಿರುವ ವಯಸ್ಸಿನ ಮಿತಿಯನ್ನು ತೆಗೆಯಬೇಕು ಎಂದು ರಾಮನಗರ ಜಿಲ್ಲಾ ಜಾನಪದ ಕಲಾವಿದರ ಸಂಘದ ಅಧ್ಯಕ್ಷ ಕೂಟಗಲ್ ಆಗ್ರಹಿಸಿದರು.</p>.<p>ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಸರ್ಕಾರದ ಸಹಾಯಧನ ಪಡೆಯಲು ಕೆಲವೊಂದು ಮಾನದಂಡಗಳನ್ನು ಸರ್ಕಾರ ಜಾರಿಗೆ ತರಲಾಗಿದೆ. ಅದರಲ್ಲಿ 35 ವರ್ಷ ಮೇಲ್ಪಟ್ಟ ಕಲಾವಿದರು ಈ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ. ಈ ಆದೇಶದಿಂದಾಗಿ 18 ವರ್ಷದಿಂದ 34 ವಯಸ್ಸಿನ ಯುವ ಕಲಾವಿದರಿಗೆ ಸಹಾಯಧನ ಕೈ ತಪ್ಪಲಿದೆ’ ಎಂಬ ಆತಂಕ<br />ವ್ಯಕ್ತಪಡಿಸಿದರು.</p>.<p>ಸಹಾಯಧನ ಪಡೆಯವ ಕಲಾವಿದರು ಕಡ್ಡಾಯವಾಗಿ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಆದೇಶ ಹೊರಡಿಸಲಾಗಿದೆ. ಆದರೆ, 45 ವರ್ಷ ಮೇಲ್ಪಟ್ಟ ಕಲಾವಿದರಿಗೇ ಲಸಿಕೆ ಸಿಕ್ಕಿಲ್ಲ. ಈ ನಿಯಮ ಕೈಬಿಡಬೇಕು ಎಂದರು.</p>.<p>ಗ್ರಾಮೀಣ ಯುವ ಕಲಾವಿದರು ಯಾವುದೇ ಪ್ರದರ್ಶನ ಸಿಗದೇ ಸಂಕಷ್ಟದಲ್ಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಧ್ಯಪ್ರವೇಶಿಸಿ 18 ವರ್ಷ ಮೇಲ್ಪಟ್ಟ ಎಲ್ಲಾ ಕಲಾವಿದರಿಗೂ ಸಹಾಯಧನ ತಲುಪುವಂತೆ ಮಾಡಬೇಕು ಎಂದು<br />ಕೋರಿದರು.</p>.<p>ಸಂಘದ ಗೌರವಾಧ್ಯಕ್ಷ ಪೂಜೆ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಎಚ್. ಪುಟ್ಟರಾಜು, ಖಜಾಂಚಿ ಜಗದೀಶ್ ಕುಮಾರ್, ನಿರ್ದೇಶಕ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>