‘ಕಳೆದ ವರ್ಷ ಆಗಸ್ಟ್ ನಲ್ಲಿ ರೇಷ್ಮೆ ಉತ್ಪಾದನಾ ಕ್ಷೇತ್ರಗಳಲ್ಲಿ ಈ ಸೋಂಕು ಪತ್ತೆಯಾಗಿತ್ತು. ನವೆಂಬರ್, ಡಿಸೆಂಬರ್ನಲ್ಲಿ ಸೋಂಕು ಹೆಚ್ಚು ವ್ಯಾಪಿಸಿತ್ತು. ಬಿತ್ತನೆ ಪ್ರದೇಶಗಳಲ್ಲಿ ಚಿಟ್ಟೆ ಪರೀಕ್ಷೆ, ಸೋಂಕು ನಿವಾರಣಾ ಕ್ರಮಗಳನ್ನು ಅನುಸರಿಸುವುದು, ನೂಲು ಬಿಚ್ಚಾಣಿಕೆಗೆ ಹೋಗುವ ಗೂಡಿಗೆ ಹಬೆ ನೀಡುವ ಕ್ರಮ, ಸೋಂಕು ಹತ್ತಿರುವ ಮೊಟ್ಟೆಗಳ ನಿರ್ಮೂಲನೆ ಕ್ರಮಗಳನ್ನು ಅನುಸರಿಸಬೇಕಾಗಿತ್ತು. ವಿಜ್ಞಾನಿಗಳು ಮತ್ತು ತಜ್ಞರ ನೇತೃತ್ವದಲ್ಲಿ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಾಗಿತ್ತು. ಆದರೆ ಅಧಿಕಾರಿಗಳು ಇದ್ಯಾವುದರ ಬಗ್ಗೆ ಗಂಭೀರವಾಗಿ ಚಿಂತಿಸಲೇ ಇಲ್ಲ’ ಎಂದು ಅವರುಆರೋಪಿಸಿದರು.