<p><strong>ರಾಮನಗರ</strong>: ಸದ್ಯ ದೇಶದ ಶೇ 90ರಷ್ಟು ಜನರಿಗೆ ಈಗಾಗಲೇ ಮೀಸಲಾತಿ ಸಿಕ್ಕಿದ್ದು, ಅದು ಕಾಲಕ್ರಮೇಣ ತನ್ನ ಅರ್ಥವನ್ನೇ ಕಳೆದುಕೊಳ್ಳುತ್ತಿದೆ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.</p>.<p>ರಾಮನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು ‘ ಇತ್ತೀಚಿನ ದಿನಗಳಲ್ಲಿ ಅನೇಕ ಸ್ವಾಮೀಜಿಗಳನ್ನೂ ಒಳಗೊಂಡು ಕೆಲವರು ಮೀಸಲಾತಿ ಎಂಬ ಪದದ ಅರ್ಥಕ್ಕೆ ಮಸಿ ಬಳಿಯುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ ಅಂದು ಸಂವಿಧಾನವನ್ನು ಬರೆದಂತಹ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ರಚನಾ ಸಮಿತಿಗೆ ಒಂದು ದೃಷ್ಟಿಕೋನ ಇತ್ತು. ಭೌಗೋಳಿಕವಾಗಿ ಯಾವ ವರ್ಗಗಳು ಮುಖ್ಯವಾಹಿನಿಗೆ ಬಂದಿರಲಿಲ್ಲವೋ, ಎಲ್ಲಿ ಅಸ್ಪೃಶ್ಯತೆ ಆಚರಣೆಯಲ್ಲಿ ಇತ್ತೋ ಆ ಸಮುದಾಯಗಳಿಗೆ ಮೀಸಲಾತಿ ಕೊಟ್ಟಿದ್ದರು. ಅದನ್ನು ಧಿಕ್ಕರಿಸಿ ಇಂದು ಎಲ್ಲ ವರ್ಗದವರೂ ಮೀಸಲಾತಿ ಬೇಕು ಎನ್ನುತ್ತಿದ್ದಾರೆ. ಈಗಾಗಲೇ ದೇಶದ ಶೇ 90ರಷ್ಟು ವರ್ಗಗಳು ಮೀಸಲಾತಿ ಅಡಿ ಬಂದಿವೆ’ ಎಂದರು.</p>.<p>‘ ಯಾವುದೇ ರಾಜ್ಯದ ಸರ್ಕಾರ ಅಥವಾ ಮುಖ್ಯಮಂತ್ರಿಗಳಿಗೆ ಗೆರೆ ಹಾಕಿ ಮೀಸಲಾತಿ ನೀಡಬೇಕು ಎನ್ನುವುದು ಶೋಭೆ ತರುವುದಿಲ್ಲ. ಮೀಸಲಾತಿ ಯಾವುದಕ್ಕಾಗಿ ನೀಡಲಾಗಿತ್ತು ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು’ ಎಂದರು.</p>.<p>ಚೀನಾದಲ್ಲಿ ಕೋವಿಡ್ ಸೋಂಕು ಹೆಚ್ಚಳದಿಂದ ಭಾರತದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿ ‘ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸಭೆ ನಡೆಸಿ ಮುನ್ನೆಚ್ಚರಿಕೆ ವಹಿಸುವಂತೆ ಎಲ್ಲ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ಕೊರೊನಾ ಬಗ್ಗೆ ಯಾವ ರಾಜಕೀಯ ನಾಯಕರೂ ಉಡಾಫೆಯ ಮಾತುಗಳನ್ನು ಆಡಬಾರದು. ಭಾರತ್ ಜೋಡೊ, ಪಂಚರತ್ನ ಯಾತ್ರೆಗಳಿಂದ ಬಿಜೆಪಿಗೆ ಯಾವುದೇ ಹಿನ್ನಡೆ ಆಗುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಸದ್ಯ ದೇಶದ ಶೇ 90ರಷ್ಟು ಜನರಿಗೆ ಈಗಾಗಲೇ ಮೀಸಲಾತಿ ಸಿಕ್ಕಿದ್ದು, ಅದು ಕಾಲಕ್ರಮೇಣ ತನ್ನ ಅರ್ಥವನ್ನೇ ಕಳೆದುಕೊಳ್ಳುತ್ತಿದೆ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.</p>.<p>ರಾಮನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು ‘ ಇತ್ತೀಚಿನ ದಿನಗಳಲ್ಲಿ ಅನೇಕ ಸ್ವಾಮೀಜಿಗಳನ್ನೂ ಒಳಗೊಂಡು ಕೆಲವರು ಮೀಸಲಾತಿ ಎಂಬ ಪದದ ಅರ್ಥಕ್ಕೆ ಮಸಿ ಬಳಿಯುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ ಅಂದು ಸಂವಿಧಾನವನ್ನು ಬರೆದಂತಹ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ರಚನಾ ಸಮಿತಿಗೆ ಒಂದು ದೃಷ್ಟಿಕೋನ ಇತ್ತು. ಭೌಗೋಳಿಕವಾಗಿ ಯಾವ ವರ್ಗಗಳು ಮುಖ್ಯವಾಹಿನಿಗೆ ಬಂದಿರಲಿಲ್ಲವೋ, ಎಲ್ಲಿ ಅಸ್ಪೃಶ್ಯತೆ ಆಚರಣೆಯಲ್ಲಿ ಇತ್ತೋ ಆ ಸಮುದಾಯಗಳಿಗೆ ಮೀಸಲಾತಿ ಕೊಟ್ಟಿದ್ದರು. ಅದನ್ನು ಧಿಕ್ಕರಿಸಿ ಇಂದು ಎಲ್ಲ ವರ್ಗದವರೂ ಮೀಸಲಾತಿ ಬೇಕು ಎನ್ನುತ್ತಿದ್ದಾರೆ. ಈಗಾಗಲೇ ದೇಶದ ಶೇ 90ರಷ್ಟು ವರ್ಗಗಳು ಮೀಸಲಾತಿ ಅಡಿ ಬಂದಿವೆ’ ಎಂದರು.</p>.<p>‘ ಯಾವುದೇ ರಾಜ್ಯದ ಸರ್ಕಾರ ಅಥವಾ ಮುಖ್ಯಮಂತ್ರಿಗಳಿಗೆ ಗೆರೆ ಹಾಕಿ ಮೀಸಲಾತಿ ನೀಡಬೇಕು ಎನ್ನುವುದು ಶೋಭೆ ತರುವುದಿಲ್ಲ. ಮೀಸಲಾತಿ ಯಾವುದಕ್ಕಾಗಿ ನೀಡಲಾಗಿತ್ತು ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು’ ಎಂದರು.</p>.<p>ಚೀನಾದಲ್ಲಿ ಕೋವಿಡ್ ಸೋಂಕು ಹೆಚ್ಚಳದಿಂದ ಭಾರತದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿ ‘ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸಭೆ ನಡೆಸಿ ಮುನ್ನೆಚ್ಚರಿಕೆ ವಹಿಸುವಂತೆ ಎಲ್ಲ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ಕೊರೊನಾ ಬಗ್ಗೆ ಯಾವ ರಾಜಕೀಯ ನಾಯಕರೂ ಉಡಾಫೆಯ ಮಾತುಗಳನ್ನು ಆಡಬಾರದು. ಭಾರತ್ ಜೋಡೊ, ಪಂಚರತ್ನ ಯಾತ್ರೆಗಳಿಂದ ಬಿಜೆಪಿಗೆ ಯಾವುದೇ ಹಿನ್ನಡೆ ಆಗುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>