<p><strong>ರಾಮನಗರ: </strong>ಕೋವಿಡ್ ನಿಯಂತ್ರಿಸುವ ಕೆಲಸಗಳಿಗೆ ತಾಲ್ಲೂಕು ಆಡಳಿತ ಮೊದಲ ಆದ್ಯತೆ ನೀಡಬೇಕು. ಅಗತ್ಯ ಸಿಬ್ಬಂದಿ ನಿಯೋಜಿಸಿಕೊಂಡು ಕೆಲಸವನ್ನು ಕ್ಷಿಪ್ರವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ತಿಳಿಸಿದರು.</p>.<p>ಶನಿವಾರ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿ ಅವರು ಮಾತನಾಡಿದರು.</p>.<p>ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಸೋಂಕು ಪರೀಕ್ಷೆಯನ್ನು ಹೆಚ್ಚಳಗೊಳಿಸಬೇಕು. ಸ್ವ್ಯಾಬ್ ಕಲೆಕ್ಟ್ ಮಾಡಲು ಸಿಬ್ಬಂದಿ ಕೊರತೆ ಇದ್ದಲ್ಲಿ ನಿಯಮಾವಳಿಗಳಂತೆ ನಿಯೋಜಿಸಿಕೊಳ್ಳಿ, ವಾಹನದ ವ್ಯವಸ್ಥೆ ಮಾಡಿಕೊಳ್ಳಿ. ಜಿಲ್ಲೆಯಲ್ಲಿ ಅನುದಾನದ ಕೊರತೆ ಇಲ್ಲ. ಪ್ರತಿ ತಾಲ್ಲೂಕಿಗೆ ₹ 25 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದರು.</p>.<p>ಜನಸಂದಣಿ ಇರುವ ಪ್ರದೇಶಗಳಲ್ಲಿ ಮೊಬೈಲ್ ಪರೀಕ್ಷಾ ಕೇಂದ್ರ ಆರಂಭಿಸಿ ಸ್ವ್ಯಾಬ್ ಸಂಗ್ರಹಿಸಿ. ಶೀಘ್ರ ಪತ್ತೆಯಿಂದ ರೋಗ ಹರಡುವುದನ್ನು ನಿಯಂತ್ರಿಸಬಹುದು. ಖಾಸಗಿ ಆಸ್ಪತ್ರೆ, ಕ್ಲಿನಿಕ್ ಅವರಿಗೆ ಸೂಚನೆ ನೀಡಿ ಐಎಲ್ ಐ ಹಾಗೂ ಎಸ್ಎಆರ್ಐ ಪ್ರಕರಣಗಳ ಪಟ್ಟಿ ಪಡೆದು ಪರೀಕ್ಷೆಗೆ ಒಳಪಡಿಸಿ. ಅಂತಹವರು ಸಹಕರಿಸದೇ ಇದ್ದರೆ ನೋಟಿಸ್ ಜಾರಿ ಮಾಡಿ ಎಂದರು.</p>.<p>ಕೋವಿಡ್ ಸೋಂಕು ಪರೀಕ್ಷೆಯ ನಂತರ ವರದಿಯನ್ನು ಶೀಘ್ರವಾಗಿ ನೀಡಲು ವ್ಯವಸ್ಥೆ ಮಾಡಿಕೊಳ್ಳಿ. ಎರಡು ಪಾಳಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ಗಳನ್ನು ನೇಮಕ ಮಾಡಿಕೊಳ್ಳಿ, ಪರೀಕ್ಷಾ ವರದಿಯನ್ನು ಶೀಘ್ರವಾಗಿ ನೀಡಬಹುದು ಎಂದರು.</p>.<p>ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಟ್ರೇಸಿಂಗ್ ತಂಡಗಳನ್ನು ವಾರ್ಡ್, ಗ್ರಾಮವಾರು ನಿಯೋಜಿಸಿಕೊಂಡು ಕೋವಿಡ್ ಸೋಂಕಿತರು, ಸಂಪರ್ಕಿತರ ಪತ್ತೆ ಕೆಲಸ ಚುರುಕುಗೊಳಿಸಬೇಕು. ಕೋವಿಡ್ ವಾರ್ ರೂಂನಲ್ಲಿ ಕ್ರಮಬದ್ಧವಾಗಿ ಉತ್ತಮ ರೀತಿಯಲ್ಲಿ ಕೆಲಸವಾಗಬೇಕು. ಪರಿಶೀಲನೆಯ ವೇಳೆ ಯಾವುದೇ ಲೋಪ ಇರಬಾರದು ಎಂದು ಎಚ್ಚರಿಕೆ ನೀಡಿದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರವಾರು ಲಸಿಕೆ ಸಾಧನೆ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಕಡಿಮೆ ಸಾಧನೆಯಾಗಿರುವ ಕೇಂದ್ರಗಳ ವ್ಯಾಪ್ತಿಯಲ್ಲಿ ಇಲಾಖೆ ಗಳು ಸಮನ್ವಯವಾಗಿ ಕಾರ್ಯ ನಿರ್ವಹಿಸಬೇಕು ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್, ಆರ್.ಸಿ.ಎಚ್ ಅಧಿಕಾರಿ ಡಾ.ಪದ್ಮಾ, ಡಿಎಸ್ಒ ಡಾ.ಕಿರಣ್ ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಕೋವಿಡ್ ನಿಯಂತ್ರಿಸುವ ಕೆಲಸಗಳಿಗೆ ತಾಲ್ಲೂಕು ಆಡಳಿತ ಮೊದಲ ಆದ್ಯತೆ ನೀಡಬೇಕು. ಅಗತ್ಯ ಸಿಬ್ಬಂದಿ ನಿಯೋಜಿಸಿಕೊಂಡು ಕೆಲಸವನ್ನು ಕ್ಷಿಪ್ರವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ತಿಳಿಸಿದರು.</p>.<p>ಶನಿವಾರ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿ ಅವರು ಮಾತನಾಡಿದರು.</p>.<p>ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಸೋಂಕು ಪರೀಕ್ಷೆಯನ್ನು ಹೆಚ್ಚಳಗೊಳಿಸಬೇಕು. ಸ್ವ್ಯಾಬ್ ಕಲೆಕ್ಟ್ ಮಾಡಲು ಸಿಬ್ಬಂದಿ ಕೊರತೆ ಇದ್ದಲ್ಲಿ ನಿಯಮಾವಳಿಗಳಂತೆ ನಿಯೋಜಿಸಿಕೊಳ್ಳಿ, ವಾಹನದ ವ್ಯವಸ್ಥೆ ಮಾಡಿಕೊಳ್ಳಿ. ಜಿಲ್ಲೆಯಲ್ಲಿ ಅನುದಾನದ ಕೊರತೆ ಇಲ್ಲ. ಪ್ರತಿ ತಾಲ್ಲೂಕಿಗೆ ₹ 25 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದರು.</p>.<p>ಜನಸಂದಣಿ ಇರುವ ಪ್ರದೇಶಗಳಲ್ಲಿ ಮೊಬೈಲ್ ಪರೀಕ್ಷಾ ಕೇಂದ್ರ ಆರಂಭಿಸಿ ಸ್ವ್ಯಾಬ್ ಸಂಗ್ರಹಿಸಿ. ಶೀಘ್ರ ಪತ್ತೆಯಿಂದ ರೋಗ ಹರಡುವುದನ್ನು ನಿಯಂತ್ರಿಸಬಹುದು. ಖಾಸಗಿ ಆಸ್ಪತ್ರೆ, ಕ್ಲಿನಿಕ್ ಅವರಿಗೆ ಸೂಚನೆ ನೀಡಿ ಐಎಲ್ ಐ ಹಾಗೂ ಎಸ್ಎಆರ್ಐ ಪ್ರಕರಣಗಳ ಪಟ್ಟಿ ಪಡೆದು ಪರೀಕ್ಷೆಗೆ ಒಳಪಡಿಸಿ. ಅಂತಹವರು ಸಹಕರಿಸದೇ ಇದ್ದರೆ ನೋಟಿಸ್ ಜಾರಿ ಮಾಡಿ ಎಂದರು.</p>.<p>ಕೋವಿಡ್ ಸೋಂಕು ಪರೀಕ್ಷೆಯ ನಂತರ ವರದಿಯನ್ನು ಶೀಘ್ರವಾಗಿ ನೀಡಲು ವ್ಯವಸ್ಥೆ ಮಾಡಿಕೊಳ್ಳಿ. ಎರಡು ಪಾಳಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ಗಳನ್ನು ನೇಮಕ ಮಾಡಿಕೊಳ್ಳಿ, ಪರೀಕ್ಷಾ ವರದಿಯನ್ನು ಶೀಘ್ರವಾಗಿ ನೀಡಬಹುದು ಎಂದರು.</p>.<p>ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಟ್ರೇಸಿಂಗ್ ತಂಡಗಳನ್ನು ವಾರ್ಡ್, ಗ್ರಾಮವಾರು ನಿಯೋಜಿಸಿಕೊಂಡು ಕೋವಿಡ್ ಸೋಂಕಿತರು, ಸಂಪರ್ಕಿತರ ಪತ್ತೆ ಕೆಲಸ ಚುರುಕುಗೊಳಿಸಬೇಕು. ಕೋವಿಡ್ ವಾರ್ ರೂಂನಲ್ಲಿ ಕ್ರಮಬದ್ಧವಾಗಿ ಉತ್ತಮ ರೀತಿಯಲ್ಲಿ ಕೆಲಸವಾಗಬೇಕು. ಪರಿಶೀಲನೆಯ ವೇಳೆ ಯಾವುದೇ ಲೋಪ ಇರಬಾರದು ಎಂದು ಎಚ್ಚರಿಕೆ ನೀಡಿದರು.</p>.<p>ಪ್ರಾಥಮಿಕ ಆರೋಗ್ಯ ಕೇಂದ್ರವಾರು ಲಸಿಕೆ ಸಾಧನೆ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಕಡಿಮೆ ಸಾಧನೆಯಾಗಿರುವ ಕೇಂದ್ರಗಳ ವ್ಯಾಪ್ತಿಯಲ್ಲಿ ಇಲಾಖೆ ಗಳು ಸಮನ್ವಯವಾಗಿ ಕಾರ್ಯ ನಿರ್ವಹಿಸಬೇಕು ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್, ಆರ್.ಸಿ.ಎಚ್ ಅಧಿಕಾರಿ ಡಾ.ಪದ್ಮಾ, ಡಿಎಸ್ಒ ಡಾ.ಕಿರಣ್ ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>