ಜಿಲ್ಲೆಯಲ್ಲಿ ಮದುವೆ ಮತ್ತು ಸಾರ್ವಜನಿಕ ಸಮಾರಂಭ, ಆಚರಣೆ, ಮನರಂಜನಾ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಂಭವವಿರುತ್ತದೆ. ಹೀಗಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮುನ್ನ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್ರಿಂದ ಪೂರ್ವಾನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಸರ್ಕಾರ ನಿಗದಿಪಡಿಸಿದ ಸಂಖ್ಯೆಯ ಮಿತಿಯೊಳಗೆ ಜನರು ಪಾಲ್ಗೊಳ್ಳಬೇಕಿದೆ. ಕಾರ್ಯಕ್ರಮದಲ್ಲಿ ಸರ್ಕಾರ ಸೂಚಿಸಿರುವ ಜನರ ಸಂಖ್ಯೆ ಮಿತಿ ಮೀರದಂತೆ ಸಂಬಂಧಿಸಿದ ಸಮುದಾಯ ಭವನ, ಕಲ್ಯಾಣ ಮಂಟಪ, ಸಭಾಂಗಣ ಸ್ಥಳಗಳ ಮಾಲೀಕರಿಂದ ದೃಢೀಕರಣ ಪತ್ರ ಪಡೆಯಬೇಕು ಎಂದು ಜಿಲ್ಲಾಧಿಕಾರಿ ತಹಶೀಲ್ದಾರ್ಗಳಿಗೆ
ಸೂಚಿಸಿದ್ದಾರೆ.