ಜಾತ್ರಾ ಮಹೋತ್ಸವ ಮತ್ತು ರಥೋತ್ಸವಕ್ಕೆ ಬಂದಿದ್ದ ಭಕ್ತರಿಗೆ ರೇವಣಸಿದ್ದೇಶ್ವರ ಸ್ವಾಮಿ ಅಭಿವೃಧ್ಧಿ ಸೇವಾ ಟ್ರಸ್ಟ್ ಮತ್ತು ರೇವಣಸಿದ್ದೇಶ್ವರ ಬೆಟ್ಟದ ದಾಸೋಹ ಮಠದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಅವರೆಕಾಳು ಸಾರು ಮುದ್ದೆ ಅನ್ನ ಪಲ್ಯ ಒಳಗೊಂಡ ಪ್ರಸಾದವನ್ನು ನೀಡಲಾಯಿತು. ಜೊತೆಗೆ ಸ್ಥಳೀಯರು ಬಿಸಿಲಿನಿಂದ ಬಾಯಾರಿದವರಿಗೆ ಮಜ್ಜಿಗೆ ಪಾನಕ ಹಾಗೂ ಕೋಸಂಬರಿ ವಿತರಿಸಿದರು. ಹುಲಿಕೆರೆ-ಗುನ್ನೂರು ಗ್ರಾಮ ಪಂಚಾಯಿತಿ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು.