ಕುದೂರು: ರಾಷ್ಟ್ರೀಯ ಹೆದ್ದಾರಿ 75ರ ನಾರಸಂದ್ರ ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಬಸ್ಗೆ ಕಾಯುತ್ತಿದ್ದ ನಿಂತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ತಿಪ್ಪಸಂದ್ರ ಗ್ರಾಮದ ಮಂಗಳಾ (45) ಮೃತಪಟ್ಟ ಮಹಿಳೆ. ಇವರು ನಾಗರಸಂದ್ರದ ಎಸ್ಬಿಐ ಬ್ಯಾಂಕ್ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಇದೇ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಮಂಗಳಾ ಅವರ ಪತಿ ಆರು ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು.
ಬೆಂಗಳೂರು ಕಡೆಯಿಂದ ಕುಣಿಗಲ್ ಕಡೆಗೆ ಹೊರಟಿದ್ದ ಕಾರು ಅತಿ ವೇಗದಿಂದ ಪ್ಯಾಸೆಂಜರ್ ಆಟೋ ಮತ್ತು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದು ಬಳಿಕ ಮಂಗಳಾ ಅವರಿಗೆ ಹೊಡೆದಿದೆ. ಘಟನೆಯಲ್ಲಿ ಪ್ಯಾಸೆಂಜರ್ ಆಟೋ ಚಾಲಕ ಕೂಡ ಗಾಯಗೊಂಡಿದ್ದಾನೆ.
ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ನಾರಸಂದ್ರ ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ನಡೆದ ಭೀಕರ ಸರಣಿ ರಸ್ತೆ ಅಪಘಾತ