ರಸ್ತೆಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಗೇಶ್ ಮಾತನಾಡಿ, ‘ರಸ್ತೆ ಬದಿ ವ್ಯಾಪಾರಿಗಳು ಅತ್ಯಂತ ಕಡುಬಡವರು. ಅದನ್ನೇ ನಂಬಿ ಜೀವನ ಸಾಗಿಸುತ್ತಿರುವವರು. ಸಾಲ ಮಾಡಿಕೊಂಡು ಪಟ್ಟಣದಲ್ಲಿ ಹಣ್ಣು, ತರಕಾರಿ, ಸೊಪ್ಪು ಇತರ ಜನ ಬಳಕೆಯ ವಸ್ತುಗಳನ್ನು ಮಾರಾಟ ಮಾಡಿಕೊಂಡು ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ನಗರಸಭಾ ಅಧಿಕಾರಿಗಳು ಪೊಲೀಸರ ಸಹಕಾರ ಪಡೆದುಕೊಂಡು ಸ್ವಚ್ಛತೆ ನೆಪದಲ್ಲಿ ರಸ್ತೆ ಬದಿ ವ್ಯಾಪಾರವನ್ನು ಮತ್ತು ತಳ್ಳುಗಾಡಿ ವ್ಯಾಪಾರಿಗಳನ್ನು ತೆರವುಗೊಳಿಸಿ, ಮಾಲು ಸಮೇತ ಗಾಡಿಗಳನ್ನು ಮುಟ್ಟುಗೋಲು ಹಾಕಿಕೊಂಡು ತೊಂದರೆ ಕೊಡುತ್ತಿದ್ದಾರೆ’ ಎಂದು ದೂರಿದರು.