ಹಾರೋಹಳ್ಳಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ರೌಡಿಶೀಟರ್ಗಳ ಪರೇಡ್ ನಡೆಸಲಾಯಿತು.
‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರೇಡ್ ನಡೆಸಿ, ಎಚ್ಚರಿಕೆ ನೀಡಲಾಗಿದೆ. ರೌಡಿಶೀಟರ್ಗಳ ಮೇಲೆ ನಿಗಾ ವಹಿಸಲಾಗಿದೆ’ ಎಂದು ಹಾರೋಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ತಿಳಿಸಿದರು.
‘ನಡವಳಿಕೆ ಸರಿಯಾಗಿದ್ದರೆ ಒಳ್ಳೆಯದು. ಹಿಂದಿನಂತೆಯೇ ನಡೆದುಕೊಂಡರೆ ಪರಿಣಾಮ ನೆಟ್ಟಗಿರುವುದಿಲ್ಲ. ಶಾಂತಿ ಸೌಹಾರ್ದಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ’ ಎಂದು ರೌಡಿಗಳಿಗೆ ಎಚ್ಚರಿಕೆ ನೀಡಲಾಯಿತು.
ಸಬ್ ಇನ್ಸ್ಪೆಕ್ಟರ್ ಉಷಾನಂದಿನಿ, ಶಿವರಾಜು, ಶ್ರೀಕಾಂತ್ ಸೇರಿದಂತೆ ಇತರ ಸಿಬ್ಬಂದಿ ಹಾಜರಿದ್ದರು.