<p><strong>ಬಿಡದಿ: </strong>ಇಲ್ಲಿನ ರೇಷ್ಮೆ ಅಭಿವೃದ್ಧಿ ಮತ್ತು ತಳಿ ವಿಜ್ಞಾನ ಕೇಂದ್ರದ ಕಟ್ಟಡ ಪಾಳುಬಿದ್ದಿದೆ.</p>.<p>ಹಿಪ್ಪುನೇರಳೆ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ರೇಷ್ಮೆ ಅಭಿವೃದ್ಧಿಗಾಗಿಯೇ ಸರ್ಕಾರ ಬಿಡದಿಯ ಹೃದಯ ಭಾಗದಲ್ಲಿ ವಿಶಾಲವಾದ ರೇಷ್ಮೆ ತಳಿ ಅಭಿವೃದ್ಧಿ ಮತ್ತು ತಳಿ ವಿಜ್ಞಾನ ಕೇಂದ್ರ ನಿರ್ಮಿಸಿದೆ.</p>.<p>ಇಲ್ಲಿ ವಿವಿಧ ಬಗೆಯ ರೇಷ್ಮೆ ತಳಿಗಳ ತೋಟವಿದೆ. ರಾಮನಗರ ‘ರೇಷ್ಮೆ ನಾಡು’ ಎಂದೇ ಪ್ರಸಿದ್ಧವಾಗಿದೆ. ಆದರೆ, ಈ ಕೇಂದ್ರದಲ್ಲಿ ಯಾವುದೇ ಸಂಶೋಧನೆಗಳು ನಡೆಯದೆ ನಿಷ್ಕ್ರಿಯವಾಗಿರುವುದು ಎದ್ದುಕಾಣುತ್ತಿದೆ.</p>.<p>ಅಲ್ಪಪ್ರಮಾಣದಲ್ಲಿ ರೇಷ್ಮೆ ಸಸಿ ಬೆಳೆಸಿರುವುದನ್ನು ಮಾತ್ರ ನೋಡಬಹುದು. ಆದರೆ, ಕಚೇರಿ ಆವರಣ ಸಾರ್ವಜನಿಕರ ವಾಹನಗಳ ತಂಗುದಾಣವಾಗಿ ಮಾರ್ಪಟ್ಟಿದೆ. ಇಲ್ಲಿ ರೇಷ್ಮೆ ಕೃಷಿಯ ಅಭಿವೃದ್ಧಿಗೆ ಅವಕಾಶವಿದೆ. ಆದರೆ, ರೇಷ್ಮೆ ತೋಟ ಹೊರತುಪಡಿಸಿ ಇನ್ನಾವುದೇ ಅಭಿವೃದ್ಧಿಯು ಈ ಕೇಂದ್ರದಿಂದ ಕಾಣುತ್ತಿಲ್ಲ ಎಂದು ರೈತ ಸಿದ್ದಲಿಂಗಪ್ಪ ದೂರುತ್ತಾರೆ.</p>.<p>ಕೂಡಲೇ ಸರ್ಕಾರ ಇದರ ಬಗ್ಗೆ ಎತ್ತೆಚ್ಚುಕೊಂಡು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕೇಂದ್ರವನ್ನು ರೂಪಿಸಬೇಕು ಎಂಬುದು ರೈತರ ಒತ್ತಾಯ.</p>.<p>ರೇಷ್ಮೆ ಇಲಾಖೆ ಅಧಿಕಾರಿಗಳು ಕೂಡ ತ್ವರಿತವಾಗಿ ಅನುಕೂಲ ಕಲ್ಪಿಸಲು ಮುಂದಾಗಬೇಕು ಎಂಬುದು ಬೆಳೆಗಾರರ ಆಗ್ರಹ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ: </strong>ಇಲ್ಲಿನ ರೇಷ್ಮೆ ಅಭಿವೃದ್ಧಿ ಮತ್ತು ತಳಿ ವಿಜ್ಞಾನ ಕೇಂದ್ರದ ಕಟ್ಟಡ ಪಾಳುಬಿದ್ದಿದೆ.</p>.<p>ಹಿಪ್ಪುನೇರಳೆ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ರೇಷ್ಮೆ ಅಭಿವೃದ್ಧಿಗಾಗಿಯೇ ಸರ್ಕಾರ ಬಿಡದಿಯ ಹೃದಯ ಭಾಗದಲ್ಲಿ ವಿಶಾಲವಾದ ರೇಷ್ಮೆ ತಳಿ ಅಭಿವೃದ್ಧಿ ಮತ್ತು ತಳಿ ವಿಜ್ಞಾನ ಕೇಂದ್ರ ನಿರ್ಮಿಸಿದೆ.</p>.<p>ಇಲ್ಲಿ ವಿವಿಧ ಬಗೆಯ ರೇಷ್ಮೆ ತಳಿಗಳ ತೋಟವಿದೆ. ರಾಮನಗರ ‘ರೇಷ್ಮೆ ನಾಡು’ ಎಂದೇ ಪ್ರಸಿದ್ಧವಾಗಿದೆ. ಆದರೆ, ಈ ಕೇಂದ್ರದಲ್ಲಿ ಯಾವುದೇ ಸಂಶೋಧನೆಗಳು ನಡೆಯದೆ ನಿಷ್ಕ್ರಿಯವಾಗಿರುವುದು ಎದ್ದುಕಾಣುತ್ತಿದೆ.</p>.<p>ಅಲ್ಪಪ್ರಮಾಣದಲ್ಲಿ ರೇಷ್ಮೆ ಸಸಿ ಬೆಳೆಸಿರುವುದನ್ನು ಮಾತ್ರ ನೋಡಬಹುದು. ಆದರೆ, ಕಚೇರಿ ಆವರಣ ಸಾರ್ವಜನಿಕರ ವಾಹನಗಳ ತಂಗುದಾಣವಾಗಿ ಮಾರ್ಪಟ್ಟಿದೆ. ಇಲ್ಲಿ ರೇಷ್ಮೆ ಕೃಷಿಯ ಅಭಿವೃದ್ಧಿಗೆ ಅವಕಾಶವಿದೆ. ಆದರೆ, ರೇಷ್ಮೆ ತೋಟ ಹೊರತುಪಡಿಸಿ ಇನ್ನಾವುದೇ ಅಭಿವೃದ್ಧಿಯು ಈ ಕೇಂದ್ರದಿಂದ ಕಾಣುತ್ತಿಲ್ಲ ಎಂದು ರೈತ ಸಿದ್ದಲಿಂಗಪ್ಪ ದೂರುತ್ತಾರೆ.</p>.<p>ಕೂಡಲೇ ಸರ್ಕಾರ ಇದರ ಬಗ್ಗೆ ಎತ್ತೆಚ್ಚುಕೊಂಡು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕೇಂದ್ರವನ್ನು ರೂಪಿಸಬೇಕು ಎಂಬುದು ರೈತರ ಒತ್ತಾಯ.</p>.<p>ರೇಷ್ಮೆ ಇಲಾಖೆ ಅಧಿಕಾರಿಗಳು ಕೂಡ ತ್ವರಿತವಾಗಿ ಅನುಕೂಲ ಕಲ್ಪಿಸಲು ಮುಂದಾಗಬೇಕು ಎಂಬುದು ಬೆಳೆಗಾರರ ಆಗ್ರಹ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>