ಚನ್ನಪಟ್ಟಣ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ಚಂದ್ರಶೇಖರ್ ಎಂಬುವರ ಪುತ್ರಿ ನಿವೇದಿತಾ ಉಕ್ರೇನ್ನ ಜಫೋರಿಜಾಹಿಯ ಸ್ಟೇಟ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಎಂಬಿಬಿಎಸ್ ಮೂರನೇ ಸೆಮಿಸ್ಟರ್ ಅಧ್ಯಯನ ಮಾಡುತ್ತಿದ್ದಾರೆ. ಪೋಷಕರ ಜೊತೆ ವಿದ್ಯಾರ್ಥಿನಿ ಮಾತನಾಡಿದ್ದು, ‘ ಸದ್ಯ ಸುರಕ್ಷಿತವಾಗಿದ್ದೇನೆ. ಉಕ್ರೇನ್ನ ಎಲ್ಲ ವಿಮಾನ ನಿಲ್ದಾಣಗಳು ಮುಚ್ಚಿರುವ ಕಾರಣ ಸ್ವದೇಶಕ್ಕೆ ಬರಲು ಆಗುತ್ತಿಲ್ಲ’ ಎಂದು ಮಾಹಿತಿ ನೀಡಿದ್ದಾರೆ.