ರಾಮನಗರ: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಹೊಟ್ಟೆನೋವಿನ ಕಾರಣಕ್ಕೆ ಗುರುವಾರ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರು ಸದ್ಯ ಹಾಸನದ ಬೇಲೂರಿನಲ್ಲಿರುವ ಸಾಕುಮಗ ಉಮೇಶ್ ಮನೆಯಲ್ಲಿ ತಂಗಿದ್ದರು. ಬುಧವಾರ ಸಂಜೆ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿತು. ಗುರುವಾರ ಬೆಳಗ್ಗೆ ಹಾಸನದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಮ್ಮಕ್ಕ ಸದ್ಯ ಆರೋಗ್ಯದಿಂದ ಇದ್ದಾರೆ ಎಂದು ಅವರ ಪುತ್ರ ಉಮೇಶ್ ತಿಳಿಸಿದ್ದಾರೆ.