<p><strong>ಚನ್ನಪಟ್ಟಣ:</strong> ತಾಲ್ಲೂಕಿನಲ್ಲಿ ಬುಧವಾರ ಸಂಕ್ರಾಂತಿಗೆ ಸಾಮಗ್ರಿ ಖರೀದಿ ಜೋರಾಗಿತ್ತು.</p>.<p>ಜನರಲ್ಲಿ ಉತ್ಸಾಹ ಕಂಡು ಬಂದಂತೆಯೆ ವಸ್ತುಗಳ ಬೆಲೆಯೂ ಗಗನಕ್ಕೇರಿದ್ದು, ಗ್ರಾಹಕರಿಗೆ ಹಬ್ಬ ಕಹಿಯಾಗಿ ಪರಿಣಮಿಸಿದೆ. ಹೂವು, ಎಳ್ಳು, ಬೆಲ್ಲ, ಕಡಲೆಕಾಯಿ, ಸಕ್ಕರೆ ಅಚ್ಚು, ಅವರೆಕಾಯಿ, ಕಬ್ಬು ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿತ್ತು.</p>.<p>ಎಳ್ಳು ಕೆ.ಜಿ.ಗೆ ₹150, ಸಕ್ಕರೆ ಅಚ್ಚು ಕೆ.ಜಿ.ಗೆ ₹100ರಿಂದ ₹150, ಬೆಲ್ಲ ₹60, ಸೇವಂತಿಗೆ ಮಾರು ₹50, ಬಾಳೆ ಹಣ್ಣು ಕೆ.ಜಿ.ಗೆ ₹60, ಕಡಲೆಕಾಯಿ ಸೇರಿಗೆ ₹30ರಿಂದ 35, ಗೆಣಸು ಕೆ.ಜಿ.ಗೆ ₹25 ರಿಂದ ₹30, ಕಬ್ಬು ಎರಡಕ್ಕೆ ₹80 ರಿಂದ 100, ಅವರೆಕಾಯಿ ಕೆ.ಜಿ.ಗೆ ₹50ರಂತೆ ಬಿಕರಿಯಾಯಿತು.</p>.<p>ಮಾರುಕಟ್ಟೆಯಲ್ಲಿ ರಾಶಿ ರಾಶಿ ಅವರೆಕಾಯಿ, ಗೆಣಸು, ಕಬ್ಬು ಬಂದು ಬಿದ್ದಿವೆ. ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದ ತುಂಬೆಲ್ಲ ಜನವೋ ಜನ. ಬೆಲೆ ಏರಿಕೆಯ ನಡುವೆಯೂ ವ್ಯಾಪಾರಸ್ಥರಿಗೆ ಭರ್ಜರಿ ವ್ಯಾಪಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನಲ್ಲಿ ಬುಧವಾರ ಸಂಕ್ರಾಂತಿಗೆ ಸಾಮಗ್ರಿ ಖರೀದಿ ಜೋರಾಗಿತ್ತು.</p>.<p>ಜನರಲ್ಲಿ ಉತ್ಸಾಹ ಕಂಡು ಬಂದಂತೆಯೆ ವಸ್ತುಗಳ ಬೆಲೆಯೂ ಗಗನಕ್ಕೇರಿದ್ದು, ಗ್ರಾಹಕರಿಗೆ ಹಬ್ಬ ಕಹಿಯಾಗಿ ಪರಿಣಮಿಸಿದೆ. ಹೂವು, ಎಳ್ಳು, ಬೆಲ್ಲ, ಕಡಲೆಕಾಯಿ, ಸಕ್ಕರೆ ಅಚ್ಚು, ಅವರೆಕಾಯಿ, ಕಬ್ಬು ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿತ್ತು.</p>.<p>ಎಳ್ಳು ಕೆ.ಜಿ.ಗೆ ₹150, ಸಕ್ಕರೆ ಅಚ್ಚು ಕೆ.ಜಿ.ಗೆ ₹100ರಿಂದ ₹150, ಬೆಲ್ಲ ₹60, ಸೇವಂತಿಗೆ ಮಾರು ₹50, ಬಾಳೆ ಹಣ್ಣು ಕೆ.ಜಿ.ಗೆ ₹60, ಕಡಲೆಕಾಯಿ ಸೇರಿಗೆ ₹30ರಿಂದ 35, ಗೆಣಸು ಕೆ.ಜಿ.ಗೆ ₹25 ರಿಂದ ₹30, ಕಬ್ಬು ಎರಡಕ್ಕೆ ₹80 ರಿಂದ 100, ಅವರೆಕಾಯಿ ಕೆ.ಜಿ.ಗೆ ₹50ರಂತೆ ಬಿಕರಿಯಾಯಿತು.</p>.<p>ಮಾರುಕಟ್ಟೆಯಲ್ಲಿ ರಾಶಿ ರಾಶಿ ಅವರೆಕಾಯಿ, ಗೆಣಸು, ಕಬ್ಬು ಬಂದು ಬಿದ್ದಿವೆ. ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದ ತುಂಬೆಲ್ಲ ಜನವೋ ಜನ. ಬೆಲೆ ಏರಿಕೆಯ ನಡುವೆಯೂ ವ್ಯಾಪಾರಸ್ಥರಿಗೆ ಭರ್ಜರಿ ವ್ಯಾಪಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>