<p>ಆನೇಕಲ್:ಗಡಿ ಭಾಗಗಳಲ್ಲಿ ಜನರು ಸಂಸ್ಕೃತಿ ಮತ್ತು ಭಾಷೆಯ ಜೊತೆಗೆ ಹೋರಾಟ ಮಾಡಿ ತಮ್ಮ ಅಸ್ಮಿತೆ ಉಳಿಸಿಕೊಳ್ಳಬೇಕಾದ ಪರಿಸ್ಥಿತಿಯಿದೆ. ಹಾಗಾಗಿ, ಕನ್ನಡ ಭಾಷೆಯ ಅಸ್ಮಿತೆ ಉಳಿಸಲು ಕನ್ನಡ ವಾತಾವರಣವನ್ನು ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಸಾಹಿತಿ ಶೂದ್ರ ಶ್ರೀನಿವಾಸ್ ತಿಳಿಸಿದರು.</p>.<p>ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿಯ ಐಎಸ್ಬಿಆರ್ ಕಾಲೇಜಿನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಭಾಷಾವಾರು ಪ್ರಾಂತ್ಯಗಳು ರಚನೆಯ ಸಂದರ್ಭದಲ್ಲಿ ಅಚ್ಚ ಕನ್ನಡದ ಪ್ರದೇಶಗಳು ತಮಿಳುನಾಡು, ಕೇರಳ, ಆಂಧ್ರಪ್ರದೇಶ ರಾಜ್ಯಗಳಿಗೆ ಸೇರ್ಪಡೆಯಾದವು. ಬೇರೆ ರಾಜ್ಯಗಳ ಆಡಳಿತವಿದ್ದರೂ ಈ ಭಾಗಗಳಲ್ಲಿ ಕನ್ನಡ ವಾತಾವರಣ, ಸಂಸ್ಕೃತಿ ಉಳಿದಿತ್ತು ಎಂದರು.</p>.<p>ಹೊಸೂರು, ಡೆಂಕಣಿಕೋಟೆ, ಬಾಗಲೂರು, ಸೂಳಗಿರಿ, ಗುಮ್ಮಳಾಪುರ, ಮದಗೊಂಡನ<br />ಹಳ್ಳಿ ತಮಿಳುನಾಡಿನಲ್ಲಿದ್ದರೂ ಕನ್ನಡ ಶಾಲೆಗಳಿದ್ದವು. ಕನ್ನಡ ಭಾಷೆಯೇ ಮಾತೃಭಾಷೆಯಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ತಮಿಳು ಪ್ರಭಾವ ಹೆಚ್ಚಾಗಿದ್ದು ಕನ್ನಡ ಭಾಷೆ, ಸಂಸ್ಕೃತಿಗೆ ತೊಡಕಾಗಿದೆ. ಇದೇ ಪರಿಸ್ಥಿತಿ ಕೇರಳದ ಕಾಸರಗೋಡಿನಲ್ಲೂ ನಿರ್ಮಾಣವಾಗಿದೆ. ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಐಎಸ್ಬಿಆರ್ ಪದವಿ ಕಾಲೇಜಿನ ಪ್ರಾಚಾರ್ಯ ತಪನ್ನಾಯಕ್ ಮಾತನಾಡಿ, ಕನ್ನಡ ಭಾಷೆ ಶ್ರೀಮಂತವಾಗಿದೆ. ಈ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ನಿವೃತ್ತ ಯೋಧ ಸಿ. ವೇಣು, ಐಎಸ್ಬಿಆರ್ ಕಾನೂನು ಕಾಲೇಜಿನ ಪ್ರಾಚಾರ್ಯ ಡಾ.ಬಲವಂತ್ ಎಸ್. ಕಳಸ್ಕರ್, ಆಡಳಿತ ಮಂಡಳಿಯ ಲಕ್ಷ್ಮೀನಾರಾಯಣ್ ಇದ್ದರು. ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್:ಗಡಿ ಭಾಗಗಳಲ್ಲಿ ಜನರು ಸಂಸ್ಕೃತಿ ಮತ್ತು ಭಾಷೆಯ ಜೊತೆಗೆ ಹೋರಾಟ ಮಾಡಿ ತಮ್ಮ ಅಸ್ಮಿತೆ ಉಳಿಸಿಕೊಳ್ಳಬೇಕಾದ ಪರಿಸ್ಥಿತಿಯಿದೆ. ಹಾಗಾಗಿ, ಕನ್ನಡ ಭಾಷೆಯ ಅಸ್ಮಿತೆ ಉಳಿಸಲು ಕನ್ನಡ ವಾತಾವರಣವನ್ನು ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಸಾಹಿತಿ ಶೂದ್ರ ಶ್ರೀನಿವಾಸ್ ತಿಳಿಸಿದರು.</p>.<p>ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿಯ ಐಎಸ್ಬಿಆರ್ ಕಾಲೇಜಿನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಭಾಷಾವಾರು ಪ್ರಾಂತ್ಯಗಳು ರಚನೆಯ ಸಂದರ್ಭದಲ್ಲಿ ಅಚ್ಚ ಕನ್ನಡದ ಪ್ರದೇಶಗಳು ತಮಿಳುನಾಡು, ಕೇರಳ, ಆಂಧ್ರಪ್ರದೇಶ ರಾಜ್ಯಗಳಿಗೆ ಸೇರ್ಪಡೆಯಾದವು. ಬೇರೆ ರಾಜ್ಯಗಳ ಆಡಳಿತವಿದ್ದರೂ ಈ ಭಾಗಗಳಲ್ಲಿ ಕನ್ನಡ ವಾತಾವರಣ, ಸಂಸ್ಕೃತಿ ಉಳಿದಿತ್ತು ಎಂದರು.</p>.<p>ಹೊಸೂರು, ಡೆಂಕಣಿಕೋಟೆ, ಬಾಗಲೂರು, ಸೂಳಗಿರಿ, ಗುಮ್ಮಳಾಪುರ, ಮದಗೊಂಡನ<br />ಹಳ್ಳಿ ತಮಿಳುನಾಡಿನಲ್ಲಿದ್ದರೂ ಕನ್ನಡ ಶಾಲೆಗಳಿದ್ದವು. ಕನ್ನಡ ಭಾಷೆಯೇ ಮಾತೃಭಾಷೆಯಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ತಮಿಳು ಪ್ರಭಾವ ಹೆಚ್ಚಾಗಿದ್ದು ಕನ್ನಡ ಭಾಷೆ, ಸಂಸ್ಕೃತಿಗೆ ತೊಡಕಾಗಿದೆ. ಇದೇ ಪರಿಸ್ಥಿತಿ ಕೇರಳದ ಕಾಸರಗೋಡಿನಲ್ಲೂ ನಿರ್ಮಾಣವಾಗಿದೆ. ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಐಎಸ್ಬಿಆರ್ ಪದವಿ ಕಾಲೇಜಿನ ಪ್ರಾಚಾರ್ಯ ತಪನ್ನಾಯಕ್ ಮಾತನಾಡಿ, ಕನ್ನಡ ಭಾಷೆ ಶ್ರೀಮಂತವಾಗಿದೆ. ಈ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ನಿವೃತ್ತ ಯೋಧ ಸಿ. ವೇಣು, ಐಎಸ್ಬಿಆರ್ ಕಾನೂನು ಕಾಲೇಜಿನ ಪ್ರಾಚಾರ್ಯ ಡಾ.ಬಲವಂತ್ ಎಸ್. ಕಳಸ್ಕರ್, ಆಡಳಿತ ಮಂಡಳಿಯ ಲಕ್ಷ್ಮೀನಾರಾಯಣ್ ಇದ್ದರು. ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>