<p><strong>ರಾಮನಗರ</strong>: ‘ಜಿಲ್ಲೆಯ ಕನಕಪುರದಲ್ಲಿರುವ ರೂರಲ್ ಕಾಲೇಜಿನಲ್ಲಿ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಸುಮಾರು ₹61 ಲಕ್ಷ ವಿದ್ಯಾರ್ಥಿವೇತನ ನೀಡದೆ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಕಾಲೇಜಿನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ರಾಜ್ ಮೌರ್ಯ ಆಗ್ರಹಿಸಿದರು.</p>.<p>‘ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಕಳೆದ ಹತ್ತು ವರ್ಷಗಳಿಂದ ವಿದ್ಯಾರ್ಥಿವೇತನ ನೀಡದೆ ವಂಚಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಕಾಲಕ್ಕೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಿದರೂ ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಪಾವತಿಸಿಲ್ಲ. ಈ ಕುರಿತು ಡಿಸಿಆರ್ಇ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ಕೂಡ ದಾಖಲಾಗಿದೆ’ ಎಂದು ನಗರದಲ್ಲಿ ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘2015ರಿಂದ 2022ರವರೆಗೆ ಕಾಲೇಜಿನವರು ವಿದ್ಯಾರ್ಥಿವೇತನವನ್ನು ತಮ್ಮ ಬ್ಯಾಂಕ್ ಖಾತೆಯಲ್ಲೇ ಉಳಿಸಿಕೊಂಡು, ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಆ ಮೂಲಕ, ಕಾಲೇಜು ಆಡಳಿತ ಮಂಡಳಿ ಪರಿಶಿಷ್ಟರ ವಿರೋಧಿ ಧೋರಣೆ ಪ್ರದರ್ಶಿಸಿದೆ. ಈ ಕುರಿತು ಕಾಲೇಜು ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಪಕ್ಷದ ಜಿಲ್ಲಾ ಉಸ್ತುವಾರಿ ಟಿ. ಗೋಪಿ ಮಾತನಾಡಿ, ‘ವಿದ್ಯಾರ್ಥಿವೇತನ ದುರುಪಯೋಗಕ್ಕೆ ಸಂಬಂಧಿಸಿದಂತೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಂಬಂಧಪಟ್ಟ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಬೇಕು. ₹61 ಲಕ್ಷವನ್ನು ಬಡ್ಡಿ ಸಮೇತ ವಸೂಲಿ ಮಾಡಿ ವಿದ್ಯಾರ್ಥಿಗಳಿಗೆ ವಿತರಿಸಬೇಕು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಮಲ್ಲವೀರಯ್ಯ, ಗಣೇಶ್, ನಂಜುಂಡಯ್ಯ, ಗುರುಬಸಪ್ಪ, ಮಂಜು, ದಿಲೀಪ್ ಕುಮಾರ್, ಲೋಕೇಶ್, ಕೃಷ್ಣಮೂರ್ತಿ ಕ್ಯಾಸಾಪುರ, ಸೃಜನ್ ಕುಮಾರ್ ಹಾಗೂ ಇತರರು ಇದ್ದರು.</p>.<p> <strong>‘ಹಣ ದುರ್ಬಳಕೆಯಾಗಿಲ್ಲ’ </strong></p><p>‘ಪರಿಶಿಷ್ಟ ಮಕ್ಕಳ ವಿದ್ಯಾರ್ಥಿವೇತನವನ್ನು ಚೆಕ್ ಮೂಲಕ ಪಾವತಿಸಲಾಗಿದೆ. ಯಾರೂ ವಿದ್ಯಾರ್ಥಿವೇತನ ಪಡೆದಿಲ್ಲವೊ ಅವರ ಮೊತ್ತವನ್ನು ಸರ್ಕಾರಕ್ಕೆ ಹಿಂದಿರುಗಿಸಲಾಗಿದೆ. ಟ್ಯೂಷನ್ ಶುಲ್ಕವನ್ನು ಮಾತ್ರ ಕಾಲೇಜು ಅಭಿವೃದ್ಧಿಗೆ ಬಳಸಿಕೊಳ್ಳಲಾಗಿದೆ. ಅದನ್ನೂ ಮೀರಿ ಏನಾದರೂ ವ್ಯತ್ಯಾಸವಾಗಿದ್ದರೆ ಸರಿಪಡಿಸಲಾಗುವುದು ’ ಎಂದು ರೂರಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಚ್.ಕೆ. ಶ್ರೀಕಂಠ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ಜಿಲ್ಲೆಯ ಕನಕಪುರದಲ್ಲಿರುವ ರೂರಲ್ ಕಾಲೇಜಿನಲ್ಲಿ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಸುಮಾರು ₹61 ಲಕ್ಷ ವಿದ್ಯಾರ್ಥಿವೇತನ ನೀಡದೆ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಕಾಲೇಜಿನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ರಾಜ್ ಮೌರ್ಯ ಆಗ್ರಹಿಸಿದರು.</p>.<p>‘ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಕಳೆದ ಹತ್ತು ವರ್ಷಗಳಿಂದ ವಿದ್ಯಾರ್ಥಿವೇತನ ನೀಡದೆ ವಂಚಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಕಾಲಕ್ಕೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಿದರೂ ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಪಾವತಿಸಿಲ್ಲ. ಈ ಕುರಿತು ಡಿಸಿಆರ್ಇ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ಕೂಡ ದಾಖಲಾಗಿದೆ’ ಎಂದು ನಗರದಲ್ಲಿ ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘2015ರಿಂದ 2022ರವರೆಗೆ ಕಾಲೇಜಿನವರು ವಿದ್ಯಾರ್ಥಿವೇತನವನ್ನು ತಮ್ಮ ಬ್ಯಾಂಕ್ ಖಾತೆಯಲ್ಲೇ ಉಳಿಸಿಕೊಂಡು, ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಆ ಮೂಲಕ, ಕಾಲೇಜು ಆಡಳಿತ ಮಂಡಳಿ ಪರಿಶಿಷ್ಟರ ವಿರೋಧಿ ಧೋರಣೆ ಪ್ರದರ್ಶಿಸಿದೆ. ಈ ಕುರಿತು ಕಾಲೇಜು ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಪಕ್ಷದ ಜಿಲ್ಲಾ ಉಸ್ತುವಾರಿ ಟಿ. ಗೋಪಿ ಮಾತನಾಡಿ, ‘ವಿದ್ಯಾರ್ಥಿವೇತನ ದುರುಪಯೋಗಕ್ಕೆ ಸಂಬಂಧಿಸಿದಂತೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಂಬಂಧಪಟ್ಟ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಬೇಕು. ₹61 ಲಕ್ಷವನ್ನು ಬಡ್ಡಿ ಸಮೇತ ವಸೂಲಿ ಮಾಡಿ ವಿದ್ಯಾರ್ಥಿಗಳಿಗೆ ವಿತರಿಸಬೇಕು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಮಲ್ಲವೀರಯ್ಯ, ಗಣೇಶ್, ನಂಜುಂಡಯ್ಯ, ಗುರುಬಸಪ್ಪ, ಮಂಜು, ದಿಲೀಪ್ ಕುಮಾರ್, ಲೋಕೇಶ್, ಕೃಷ್ಣಮೂರ್ತಿ ಕ್ಯಾಸಾಪುರ, ಸೃಜನ್ ಕುಮಾರ್ ಹಾಗೂ ಇತರರು ಇದ್ದರು.</p>.<p> <strong>‘ಹಣ ದುರ್ಬಳಕೆಯಾಗಿಲ್ಲ’ </strong></p><p>‘ಪರಿಶಿಷ್ಟ ಮಕ್ಕಳ ವಿದ್ಯಾರ್ಥಿವೇತನವನ್ನು ಚೆಕ್ ಮೂಲಕ ಪಾವತಿಸಲಾಗಿದೆ. ಯಾರೂ ವಿದ್ಯಾರ್ಥಿವೇತನ ಪಡೆದಿಲ್ಲವೊ ಅವರ ಮೊತ್ತವನ್ನು ಸರ್ಕಾರಕ್ಕೆ ಹಿಂದಿರುಗಿಸಲಾಗಿದೆ. ಟ್ಯೂಷನ್ ಶುಲ್ಕವನ್ನು ಮಾತ್ರ ಕಾಲೇಜು ಅಭಿವೃದ್ಧಿಗೆ ಬಳಸಿಕೊಳ್ಳಲಾಗಿದೆ. ಅದನ್ನೂ ಮೀರಿ ಏನಾದರೂ ವ್ಯತ್ಯಾಸವಾಗಿದ್ದರೆ ಸರಿಪಡಿಸಲಾಗುವುದು ’ ಎಂದು ರೂರಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಚ್.ಕೆ. ಶ್ರೀಕಂಠ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>