ಈ ಬಾರಿ ಪರಿಸರ ಸಂರಕ್ಷಣೆಗೆ ಶ್ರಮಿಸಿದ ಶಿಕ್ಷಕರಿಗೂ ಪ್ರಶಸ್ತಿ ವಿತರಿಸಿದ್ದು ವಿಶೇಷ. ದಕ್ಷಿಣ ಕನ್ನಡ ಜಿಲ್ಲೆಯ ಡಿಕೆಝಡ್ಪಿಎಂಎಚ್ಪಿ ಶಾಲೆಯ ಭಾಸ್ಕರ್ ನಾಯಕ್ ಮೊದಲ, ಅದೇ ಜಿಲ್ಲೆಯ ಸತ್ಯಸಾಯಿ ಲೋಕ ಸೇವಾ ಶಾಲೆಯ ಸುನಿಲ್ ದ್ವಿತೀಯ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಇಗ್ಗಲೂರು ಸರ್ಕಾರಿ ಪ್ರೌಢಶಾಲೆಯ ಚಂದ್ರಶೇಖರ್ ಮೂರನೇ ಬಹುಮಾನ ಪಡೆದರು. ಇವರಿಗೆ ಕ್ರಮವಾಗಿ ₨20 ಸಾವಿರ, ₹5 ಸಾವಿರ ಹಾಗೂ ₹10 ಸಾವಿರ ನಗದು ಪುರಸ್ಕಾರ ವಿತರಿಸಲಾಯಿತು. ಜೊತೆಗೆ 30 ಶಾಲೆಗಳಿಗೆ ವಂಡರ್ಲಾ ವಿಶೇಷ ಮಾನ್ಯತಾ ಪ್ರಶಸ್ತಿ ನೀಡಲಾಯಿತು.