<p><strong>ಕನಕಪುರ:</strong> ತಾಲ್ಲೂಕಿನ ಹುಲಿಬಲೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಯನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಶಿಕ್ಷಕರ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ.</p>.<p>ಶಾಲೆಯ ಐವರು ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕರು ಶನಿವಾರ ನೀರಿನ ತೊಟ್ಟಿಗೆ ಇಳಿಸಿ ಸ್ವಚ್ಛಗೊಳಿಸಿದ್ದಾರೆ ಎಂದು ಪೋಷಕರು ದೂರಿದ್ದಾರೆ. </p>.<p>ಕೊಳವೆ ಆಕಾರದ ಸಿಮೆಂಟ್ ಟ್ಯಾಂಕ್ಗೆ ಏಣಿ ಸಹಾಯದಿಂದ ಮಕ್ಕಳನ್ನು ಒಳಗಡೆ ಇಳಿಸಿ ಸ್ವಚ್ಛಗೊಳಿಸುವಂತೆ ಮುಖ್ಯ ಶಿಕ್ಷಕರು ಸೂಚಿಸಿದ್ದಾರೆ. ಈ ವಿಷಯ ಗೊತ್ತಾಗುತ್ತಲೇ ಶಾಲೆಗೆ ಧಾವಿಸಿದ ಪೋಷಕರು ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>‘ನೀರಿನ ತೊಟ್ಟಿ ಸ್ವಚ್ಛಗೊಳಿಸಲು ಶಾಲೆಯ ಸಿಬ್ಬಂದಿಗೆ ಸೂಚಿಸಲಾಗಿತ್ತು. ಅವರು ತಮ್ಮ ಜತೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿರುವುದು ಗೊತ್ತಿಲ್ಲ’ ಎಂದು ಮುಖ್ಯ ಶಿಕ್ಷಕಿ ರಾಜಲಕ್ಷ್ಮ ಅವರು ಪೋಷಕರನ್ನು ಸಮಾಧಾನಪಡಿಸಲು ಯತ್ನಿಸಿದರು.</p>.<p>ಇದರಿಂದ ಸಮಾಧಾನಗೊಳ್ಳದ ಪೋಷಕರು, ಮುಖ್ಯ ಶಿಕ್ಷಕಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಅವರಿಗೆ ಕರೆ ಮಾಡಿ ಒತ್ತಾಯಿಸಿದರು.</p>.<p>ಹತ್ತು ಅಡಿ ಎತ್ತರದ ನೀರಿನ ತೊಟ್ಟಿಗೆ ಮಕ್ಕಳನ್ನು ಇಳಿಸಿ ಕೆಲಸ ಮಾಡಿಸಿದ್ದಾರೆ. ಒಂದು ವೇಳೆ ಏನಾದರೂ ಅನಾಹುತ ಆಗಿದ್ದರೆ ಅದಕ್ಕೆ ಯಾರು ಜವಾಬ್ದಾರರು ಎಂದು ಪೋಷಕರಾದ ತಿಮ್ಮೇಗೌಡ, ಕಾವ್ಯ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಲೆಯಲ್ಲಿ ಶಿಕ್ಷಕರ ನಡುವೆ ಹೊಂದಾಣಿಕೆ ಕೊರತೆ ಇದೆ. ಇದರಿಂದ ಸಮಸ್ಯೆ ಉಲ್ಬಣಿಸಿದೆ. ಮಕ್ಕಳನ್ನು ಟ್ಯಾಂಕ್ಗೆ ಇಳಿಸಿದ ವಿಷಯ ವಿವಾದದ ಸ್ವರೂಪ ಪಡೆದಿದೆ. ಮುಂದೆ ಈ ರೀತಿ ಆಗದಂತೆ ಗಮನ ಹರಿಸಲಾಗುವುದು ಎಂದು ಮುಖ್ಯ ಶಿಕ್ಷಕಿ ರಾಜಲಕ್ಷ್ಮಿ ಭರವಸೆ ನೀಡಿದರು.</p>.<p>ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳ ಮಹಜರು ಮಾಡಲಿದ್ದಾರೆ. ಶಿಕ್ಷಕರು ಮತ್ತು ಪೋಷಕರಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ.ರಾಮಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ತಾಲ್ಲೂಕಿನ ಹುಲಿಬಲೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಯನ್ನು ಸ್ವಚ್ಛಗೊಳಿಸಲು ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಶಿಕ್ಷಕರ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ.</p>.<p>ಶಾಲೆಯ ಐವರು ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕರು ಶನಿವಾರ ನೀರಿನ ತೊಟ್ಟಿಗೆ ಇಳಿಸಿ ಸ್ವಚ್ಛಗೊಳಿಸಿದ್ದಾರೆ ಎಂದು ಪೋಷಕರು ದೂರಿದ್ದಾರೆ. </p>.<p>ಕೊಳವೆ ಆಕಾರದ ಸಿಮೆಂಟ್ ಟ್ಯಾಂಕ್ಗೆ ಏಣಿ ಸಹಾಯದಿಂದ ಮಕ್ಕಳನ್ನು ಒಳಗಡೆ ಇಳಿಸಿ ಸ್ವಚ್ಛಗೊಳಿಸುವಂತೆ ಮುಖ್ಯ ಶಿಕ್ಷಕರು ಸೂಚಿಸಿದ್ದಾರೆ. ಈ ವಿಷಯ ಗೊತ್ತಾಗುತ್ತಲೇ ಶಾಲೆಗೆ ಧಾವಿಸಿದ ಪೋಷಕರು ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>‘ನೀರಿನ ತೊಟ್ಟಿ ಸ್ವಚ್ಛಗೊಳಿಸಲು ಶಾಲೆಯ ಸಿಬ್ಬಂದಿಗೆ ಸೂಚಿಸಲಾಗಿತ್ತು. ಅವರು ತಮ್ಮ ಜತೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿರುವುದು ಗೊತ್ತಿಲ್ಲ’ ಎಂದು ಮುಖ್ಯ ಶಿಕ್ಷಕಿ ರಾಜಲಕ್ಷ್ಮ ಅವರು ಪೋಷಕರನ್ನು ಸಮಾಧಾನಪಡಿಸಲು ಯತ್ನಿಸಿದರು.</p>.<p>ಇದರಿಂದ ಸಮಾಧಾನಗೊಳ್ಳದ ಪೋಷಕರು, ಮುಖ್ಯ ಶಿಕ್ಷಕಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಅವರಿಗೆ ಕರೆ ಮಾಡಿ ಒತ್ತಾಯಿಸಿದರು.</p>.<p>ಹತ್ತು ಅಡಿ ಎತ್ತರದ ನೀರಿನ ತೊಟ್ಟಿಗೆ ಮಕ್ಕಳನ್ನು ಇಳಿಸಿ ಕೆಲಸ ಮಾಡಿಸಿದ್ದಾರೆ. ಒಂದು ವೇಳೆ ಏನಾದರೂ ಅನಾಹುತ ಆಗಿದ್ದರೆ ಅದಕ್ಕೆ ಯಾರು ಜವಾಬ್ದಾರರು ಎಂದು ಪೋಷಕರಾದ ತಿಮ್ಮೇಗೌಡ, ಕಾವ್ಯ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಲೆಯಲ್ಲಿ ಶಿಕ್ಷಕರ ನಡುವೆ ಹೊಂದಾಣಿಕೆ ಕೊರತೆ ಇದೆ. ಇದರಿಂದ ಸಮಸ್ಯೆ ಉಲ್ಬಣಿಸಿದೆ. ಮಕ್ಕಳನ್ನು ಟ್ಯಾಂಕ್ಗೆ ಇಳಿಸಿದ ವಿಷಯ ವಿವಾದದ ಸ್ವರೂಪ ಪಡೆದಿದೆ. ಮುಂದೆ ಈ ರೀತಿ ಆಗದಂತೆ ಗಮನ ಹರಿಸಲಾಗುವುದು ಎಂದು ಮುಖ್ಯ ಶಿಕ್ಷಕಿ ರಾಜಲಕ್ಷ್ಮಿ ಭರವಸೆ ನೀಡಿದರು.</p>.<p>ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳ ಮಹಜರು ಮಾಡಲಿದ್ದಾರೆ. ಶಿಕ್ಷಕರು ಮತ್ತು ಪೋಷಕರಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ.ರಾಮಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>