<p><strong>ರಾಮನಗರ</strong>: ಜಿಲ್ಲೆಯಾದ್ಯಂತ ಸೋಮವಾರದಿಂದ ಹೊಸ ಶೈಕ್ಷಣಿಕ ವರ್ಷ ಆರಂಭ ಆಗಲಿದ್ದು, ಮಕ್ಕಳನ್ನು ಸ್ವಾಗತಿಸಲು ಶಾಲೆಗಳು ಸಜ್ಜಾಗಿವೆ.</p>.<p>ಸಾಮಾನ್ಯವಾಗಿ ಜೂನ್ 1ರಿಂದ ರಾಜ್ಯದಲ್ಲಿ ಶಾಲೆಗಳು ಆರಂಭ ಆಗುತ್ತಿದ್ದವು. ಆದರೆ, ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಲ್ಲಿ ಶಾಲೆಗಳು ಸರಿಯಾಗಿ ನಡೆದಿಲ್ಲ. ಇದರಿಂದ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಈ ಅಸಮತೋಲನ ತಪ್ಪಿಸಿ ಅವರನ್ನು ಕಲಿಕೆಗೆ ಸಜ್ಜುಗೊಳಿಸುವ ಸಲುವಾಗಿ ಈ ವರ್ಷ ಮೇ 16ರಿಂದಲೇ ಸರ್ಕಾರ ಶಾಲೆಗಳನ್ನು ಆರಂಭಿಸುತ್ತಿದೆ.</p>.<p><strong>ಶಿಕ್ಷಕರಿಗೆ ಶಿಬಿರ: </strong>ಶಾಲೆ ಆರಂಭದ ಮೊದಲ ಎರಡು ವಾರ ಮಕ್ಕಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮವು ನಡೆಯಲಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ಶಿಕ್ಷಣ ನೀಡಲು ಯೋಜಿಸಲಾಗಿದೆ. ಇದಕ್ಕಾಗಿ ಶಿಕ್ಷಕರಿಗೆ ಜಿಲ್ಲೆಯ ಡಯಟ್ ಕೇಂದ್ರದಲ್ಲಿ ಈಗಾಗಲೇ ತರಬೇತಿಯನ್ನೂ ನೀಡಲಾಗಿದೆ.</p>.<p><strong>ಸಿಹಿಯೂಟದ ಸ್ವಾಗತ: </strong>ಜಿಲ್ಲೆಯ ಕೆಲವು ಸರ್ಕಾರಿ ಶಾಲೆಗಳನ್ನು ಈಗಾಗಲೇ ಸ್ವಚ್ಛಗೊಳಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿದ್ಧತೆಗಳು ಆಗಿಲ್ಲದ ಕಡೆಗಳಲ್ಲಿ ಶಿಕ್ಷಕರು ಭಾನುವಾರ ತೆರಳಿ ಪ್ರಾರಂಭೋತ್ಸವಕ್ಕೆ ಅಗತ್ಯವಾದ ಚಟುವಟಿಕೆಗಳನ್ನು ಕೈಗೊಳ್ಳಲಿದ್ದಾರೆ. ಮಕ್ಕಳಿಗೆ ಬೇಕಾದ ಕುಡಿಯುವ ನೀರು, ಶೌಚಾಲಯ ಮೊದಲಾದ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ.</p>.<p>ಸೋಮವಾರ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ಮಕ್ಕಳನ್ನು ಬರಮಾಡಿಕೊಳ್ಳಲಾಗುತ್ತದೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಕ್ಕಳಿಂದ ಜಾಥಾ ನಡೆಯಲಿದೆ. ಮಧ್ಯಾಹ್ನ ವಿದ್ಯಾರ್ಥಿಗಳಿಗೆ ಸಿಹಿ ಊಟವನ್ನೂ ಉಣ ಬಡಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಜಿಲ್ಲೆಯಾದ್ಯಂತ ಸೋಮವಾರದಿಂದ ಹೊಸ ಶೈಕ್ಷಣಿಕ ವರ್ಷ ಆರಂಭ ಆಗಲಿದ್ದು, ಮಕ್ಕಳನ್ನು ಸ್ವಾಗತಿಸಲು ಶಾಲೆಗಳು ಸಜ್ಜಾಗಿವೆ.</p>.<p>ಸಾಮಾನ್ಯವಾಗಿ ಜೂನ್ 1ರಿಂದ ರಾಜ್ಯದಲ್ಲಿ ಶಾಲೆಗಳು ಆರಂಭ ಆಗುತ್ತಿದ್ದವು. ಆದರೆ, ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಲ್ಲಿ ಶಾಲೆಗಳು ಸರಿಯಾಗಿ ನಡೆದಿಲ್ಲ. ಇದರಿಂದ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಈ ಅಸಮತೋಲನ ತಪ್ಪಿಸಿ ಅವರನ್ನು ಕಲಿಕೆಗೆ ಸಜ್ಜುಗೊಳಿಸುವ ಸಲುವಾಗಿ ಈ ವರ್ಷ ಮೇ 16ರಿಂದಲೇ ಸರ್ಕಾರ ಶಾಲೆಗಳನ್ನು ಆರಂಭಿಸುತ್ತಿದೆ.</p>.<p><strong>ಶಿಕ್ಷಕರಿಗೆ ಶಿಬಿರ: </strong>ಶಾಲೆ ಆರಂಭದ ಮೊದಲ ಎರಡು ವಾರ ಮಕ್ಕಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮವು ನಡೆಯಲಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ಶಿಕ್ಷಣ ನೀಡಲು ಯೋಜಿಸಲಾಗಿದೆ. ಇದಕ್ಕಾಗಿ ಶಿಕ್ಷಕರಿಗೆ ಜಿಲ್ಲೆಯ ಡಯಟ್ ಕೇಂದ್ರದಲ್ಲಿ ಈಗಾಗಲೇ ತರಬೇತಿಯನ್ನೂ ನೀಡಲಾಗಿದೆ.</p>.<p><strong>ಸಿಹಿಯೂಟದ ಸ್ವಾಗತ: </strong>ಜಿಲ್ಲೆಯ ಕೆಲವು ಸರ್ಕಾರಿ ಶಾಲೆಗಳನ್ನು ಈಗಾಗಲೇ ಸ್ವಚ್ಛಗೊಳಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿದ್ಧತೆಗಳು ಆಗಿಲ್ಲದ ಕಡೆಗಳಲ್ಲಿ ಶಿಕ್ಷಕರು ಭಾನುವಾರ ತೆರಳಿ ಪ್ರಾರಂಭೋತ್ಸವಕ್ಕೆ ಅಗತ್ಯವಾದ ಚಟುವಟಿಕೆಗಳನ್ನು ಕೈಗೊಳ್ಳಲಿದ್ದಾರೆ. ಮಕ್ಕಳಿಗೆ ಬೇಕಾದ ಕುಡಿಯುವ ನೀರು, ಶೌಚಾಲಯ ಮೊದಲಾದ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ.</p>.<p>ಸೋಮವಾರ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ಮಕ್ಕಳನ್ನು ಬರಮಾಡಿಕೊಳ್ಳಲಾಗುತ್ತದೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಕ್ಕಳಿಂದ ಜಾಥಾ ನಡೆಯಲಿದೆ. ಮಧ್ಯಾಹ್ನ ವಿದ್ಯಾರ್ಥಿಗಳಿಗೆ ಸಿಹಿ ಊಟವನ್ನೂ ಉಣ ಬಡಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>