<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಬೈರಾಪಟ್ಟಣ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ 'ಕುತೂಹಲ' ಶೀರ್ಷಿಕೆ ಅಡಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ತಹಶೀಲ್ದಾರ್ ಬಿ.ಎನ್.ಗಿರೀಶ್ ಚಾಲನೆ ನೀಡಿದರು. ಮಕ್ಕಳು ಪ್ರದರ್ಶಿಸಿದ ವಿಜ್ಞಾನ ಮಾದರಿ ಎಲ್ಲರ ಗಮನ ಸೆಳೆದವು.</p>.<p>ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಮೂಢನಂಬಿಕೆ ನಿವಾರಣೆ, ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋವೃತ್ತಿ ಅಭಿವೃದ್ಧಿಗೆ ವಸ್ತುಪ್ರದರ್ಶನ ನೆರವಾಗುತ್ತವೆ ಎಂದು ಅವರು ಹೇಳಿದರು.<br> <br> ಸರ್ಕಾರಿ ಶಾಲೆಯ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕು. ವಿದ್ಯಾರ್ಥಿಗಳು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗದೇ ತಂತ್ರಜ್ಞಾನ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.<br><br>ವಿಜ್ಞಾನ ವಸ್ತುಪ್ರದರ್ಶನವು ಮಕ್ಕಳಲ್ಲಿ ಕುತೂಹಲ, ಕಲ್ಪನಾಶಕ್ತಿ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ ಮಹತ್ವದ ವೇದಿಕೆ ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಹೇಳಿದರು.<br><br>ಮಕ್ಕಳಲ್ಲಿ ವಿಜ್ಞಾನದ ಅರಿವು ಮತ್ತು ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ಪ್ರತಿ ವರ್ಷ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಗುತ್ತಿದೆ ಎಂದು ಮುಖ್ಯಶಿಕ್ಷಕಿ ಕೌಶಲ್ಯ ಹೇಳಿದರು.<br><br>ಶಿಕ್ಷಕರಾದ ರಾಘವೇಂದ್ರಮಯ್ಯ, ರಾಜಶೇಖರ ಇಟಗಿ, ಸವಿತಾ, ವಿನಯ್ ಕುಮಾರ್, ಅಶ್ವಿನಿ, ಆಶಾ, ಭಾರತಿ, ಲಕ್ಷ್ಮಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಬೈರಾಪಟ್ಟಣ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ 'ಕುತೂಹಲ' ಶೀರ್ಷಿಕೆ ಅಡಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ತಹಶೀಲ್ದಾರ್ ಬಿ.ಎನ್.ಗಿರೀಶ್ ಚಾಲನೆ ನೀಡಿದರು. ಮಕ್ಕಳು ಪ್ರದರ್ಶಿಸಿದ ವಿಜ್ಞಾನ ಮಾದರಿ ಎಲ್ಲರ ಗಮನ ಸೆಳೆದವು.</p>.<p>ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಮೂಢನಂಬಿಕೆ ನಿವಾರಣೆ, ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋವೃತ್ತಿ ಅಭಿವೃದ್ಧಿಗೆ ವಸ್ತುಪ್ರದರ್ಶನ ನೆರವಾಗುತ್ತವೆ ಎಂದು ಅವರು ಹೇಳಿದರು.<br> <br> ಸರ್ಕಾರಿ ಶಾಲೆಯ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕು. ವಿದ್ಯಾರ್ಥಿಗಳು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗದೇ ತಂತ್ರಜ್ಞಾನ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.<br><br>ವಿಜ್ಞಾನ ವಸ್ತುಪ್ರದರ್ಶನವು ಮಕ್ಕಳಲ್ಲಿ ಕುತೂಹಲ, ಕಲ್ಪನಾಶಕ್ತಿ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ ಮಹತ್ವದ ವೇದಿಕೆ ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಹೇಳಿದರು.<br><br>ಮಕ್ಕಳಲ್ಲಿ ವಿಜ್ಞಾನದ ಅರಿವು ಮತ್ತು ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ಪ್ರತಿ ವರ್ಷ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಗುತ್ತಿದೆ ಎಂದು ಮುಖ್ಯಶಿಕ್ಷಕಿ ಕೌಶಲ್ಯ ಹೇಳಿದರು.<br><br>ಶಿಕ್ಷಕರಾದ ರಾಘವೇಂದ್ರಮಯ್ಯ, ರಾಜಶೇಖರ ಇಟಗಿ, ಸವಿತಾ, ವಿನಯ್ ಕುಮಾರ್, ಅಶ್ವಿನಿ, ಆಶಾ, ಭಾರತಿ, ಲಕ್ಷ್ಮಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>