<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಕಲ್ಲಾಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಹನ್ನೊಂದು ಮಂದಿ ನೂತನ ನಿರ್ದೇಶಕರಾಗಿ ಆಯ್ಕೆಯಾದರು.</p>.<p>ಶುಕ್ರವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ಸ್ಥಾನದ ನಿರ್ದೇಶಕರಾಗಿ ಕೃಷ್ಣಪ್ಪ, ಕೆ.ಸಿ. ಲೋಕೇಶ್, ಚಿಕ್ಕಯಲ್ಲ ಬೋವಿ, ಸ್ವಾಮಿ, ತಿಮ್ಮಯ್ಯ, ಮಹದೇವ, ಕೆ. ರಾಮಕೃಷ್ಣ ತಮ್ಮ<br />ಪ್ರತಿಸ್ಪರ್ಧಿಗಳಿಗಿಂತ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾದರು.</p>.<p>ಹಾಗೆಯೇ ಮಹಿಳಾ ಮೀಸಲು ಸ್ಥಾನದಿಂದ ಜ್ಯೋತಿ, ನಿರ್ಮಲಾ, ಹಿಂದುಳಿದ ವರ್ಗ ‘ಬಿ’ ಸ್ಥಾನದಿಂದ ಕೆ.ಸಿ. ರಮೇಶ್, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ವೀರಭದ್ರಯ್ಯ ಅವಿರೋಧವಾಗಿ ಆಯ್ಕೆಯಾದರು.</p>.<p>ಸಂಘದಲ್ಲಿ ಒಟ್ಟು 13 ನಿರ್ದೇಶಕ ಸ್ಥಾನಗಳಿದ್ದು, ಹನ್ನೊಂದು ಸ್ಥಾನಗಳಿಗೆ ಆಯ್ಕೆ ನಡೆದಿದೆ. ಉಳಿದಂತೆ ಹಿಂದುಳಿದ ವರ್ಗ ‘ಎ’ ಸ್ಥಾನ ಹಾಗೂ ಪರಿಶಿಷ್ಟ ಪಂಗಡ ಮೀಸಲು ಸ್ಥಾನಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಆ ಎರಡು ಸ್ಥಾನಗಳು ಖಾಲಿ ಉಳಿದಿವೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ಬಿ. ರಮ್ಯಶ್ರೀ ತಿಳಿಸಿದರು.</p>.<p>ಚುನಾವಣಾ ಸಹಾಯಕರಾಗಿ ಶ್ರೀಧರಮೂರ್ತಿ, ಬಸವರಾಜು, ಸಂಘದ ಸಿಇಒ ಕೆ.ಎಸ್. ನಾಗೇಂದ್ರ ಹಾಗೂ ಹಾಲು ಪರೀಕ್ಷಕ ಸಣ್ಣೇಗೌಡ ಕಾರ್ಯ ನಿರ್ವಹಿಸಿದರು.</p>.<p>ನಿರ್ದೇಶಕರನ್ನು ಗ್ರಾಮದ ಮುಖಂಡರು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಕಲ್ಲಾಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಹನ್ನೊಂದು ಮಂದಿ ನೂತನ ನಿರ್ದೇಶಕರಾಗಿ ಆಯ್ಕೆಯಾದರು.</p>.<p>ಶುಕ್ರವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ಸ್ಥಾನದ ನಿರ್ದೇಶಕರಾಗಿ ಕೃಷ್ಣಪ್ಪ, ಕೆ.ಸಿ. ಲೋಕೇಶ್, ಚಿಕ್ಕಯಲ್ಲ ಬೋವಿ, ಸ್ವಾಮಿ, ತಿಮ್ಮಯ್ಯ, ಮಹದೇವ, ಕೆ. ರಾಮಕೃಷ್ಣ ತಮ್ಮ<br />ಪ್ರತಿಸ್ಪರ್ಧಿಗಳಿಗಿಂತ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾದರು.</p>.<p>ಹಾಗೆಯೇ ಮಹಿಳಾ ಮೀಸಲು ಸ್ಥಾನದಿಂದ ಜ್ಯೋತಿ, ನಿರ್ಮಲಾ, ಹಿಂದುಳಿದ ವರ್ಗ ‘ಬಿ’ ಸ್ಥಾನದಿಂದ ಕೆ.ಸಿ. ರಮೇಶ್, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ವೀರಭದ್ರಯ್ಯ ಅವಿರೋಧವಾಗಿ ಆಯ್ಕೆಯಾದರು.</p>.<p>ಸಂಘದಲ್ಲಿ ಒಟ್ಟು 13 ನಿರ್ದೇಶಕ ಸ್ಥಾನಗಳಿದ್ದು, ಹನ್ನೊಂದು ಸ್ಥಾನಗಳಿಗೆ ಆಯ್ಕೆ ನಡೆದಿದೆ. ಉಳಿದಂತೆ ಹಿಂದುಳಿದ ವರ್ಗ ‘ಎ’ ಸ್ಥಾನ ಹಾಗೂ ಪರಿಶಿಷ್ಟ ಪಂಗಡ ಮೀಸಲು ಸ್ಥಾನಗಳಿಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಆ ಎರಡು ಸ್ಥಾನಗಳು ಖಾಲಿ ಉಳಿದಿವೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ಬಿ. ರಮ್ಯಶ್ರೀ ತಿಳಿಸಿದರು.</p>.<p>ಚುನಾವಣಾ ಸಹಾಯಕರಾಗಿ ಶ್ರೀಧರಮೂರ್ತಿ, ಬಸವರಾಜು, ಸಂಘದ ಸಿಇಒ ಕೆ.ಎಸ್. ನಾಗೇಂದ್ರ ಹಾಗೂ ಹಾಲು ಪರೀಕ್ಷಕ ಸಣ್ಣೇಗೌಡ ಕಾರ್ಯ ನಿರ್ವಹಿಸಿದರು.</p>.<p>ನಿರ್ದೇಶಕರನ್ನು ಗ್ರಾಮದ ಮುಖಂಡರು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>