‘ಪಂಡಿತ್ ದೀನ್ ದಯಾಳ ಉಪಾಧ್ಯಾಯ, ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರವರೆಗೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. 17ರಿಂದ 20ರವರೆಗೆ ಮೋದಿ ಜನ್ಮದಿನಾಚರಣೆ ಅಂಗವಾಗಿ ಸೇವಾ ಸಪ್ತಾಹ ನಡೆಯಲಿದೆ. ಜಿಲ್ಲೆಯ 70 ಅಂಗವಿಕಲರಿಗೆ ಅಂಗಜೋಡಣೆ ಉಪಕರಣ, 70 ಬಡವರಿಗೆ ಉಚಿತ ಕನ್ನಡಕಗಳ ವಿತರಣೆ ಮಾಡಲಾಗುವುದು. ಅಂತೆಯೇ ಸರ್ಕಾರಿ ಆಸ್ಪತ್ರೆಗಳಲ್ಲಿ ಒಳರೋಗಿಗಳು ಮತ್ತು ಬಡವರಿಗೆ ಹಣ್ಣು ವಿತರಣೆ, ಜಿಲ್ಲೆಯಲ್ಲಿ ಕೋವಿಡ್ ಪೀಡಿತರ ಪೈಕಿ 70 ಮಂದಿಗೆ ಪ್ಲಾಸ್ಮ ಚಿಕಿತ್ಸೆ ಕೊಡಿಸುವುದು, ರಕ್ತದಾನ ಶಿಬಿರ ಏರ್ಪಡಿಸುವುದು, ಪ್ರತಿ ಬೂತ್ ವ್ಯಾಪ್ತಿಯಲ್ಲಿ 70 ವೃಕ್ಷಾರೋಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.