<p><strong>ದೇವನಹಳ್ಳಿ: </strong>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಆರು ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ ಒಂದು ಕೋವಿಡ್-19 ಸೋಂಕು ಪ್ರಕರಣ ವರದಿಯಾಗಿವೆಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.</p>.<p>ನೆಲಮಂಗಲ ತಾಲ್ಲೂಕಿನಲ್ಲಿ, ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ (ರೋಗಿ ಸಂಖ್ಯೆ-8547) ಪ್ರಾಥಮಿಕ ಸಂಪರ್ಕ ಹೊಂದಿದ್ದ, 51 ವರ್ಷದ ಪುರುಷ (ಪಿ-9901), 21 ವರ್ಷದ ಯುವತಿ(ಪಿ-9902), 14 ವರ್ಷದ ಬಾಲಕಿ(ಪಿ-9903), 38 ವರ್ಷದ ಮಹಿಳೆ(ಪಿ-9904), 10 ವರ್ಷದ ಬಾಲಕ(ಪಿ-9905) ಹಾಗೂ 26 ವರ್ಷದ ಯುವಕನ(ಪಿ-9906), ಆರೋಗ್ಯ ತಪಾಸಣೆ ನಡೆಸಿದಾಗ ಸೋಂಕು ದೃಢಪಟ್ಟಿದೆ.</p>.<p>ದೇವನಹಳ್ಳಿ ಪಟ್ಟಣದ 22 ವರ್ಷದ ಯುವಕ(ಪಿ-9907) ಇನ್ಫ್ಲೂಯೆನ್ಜಾ ಮಾದರಿಯ ಕಾಯಿಲೆ(ಐಎಲ್ಐ)ಯಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದಾಗ ಸೋಂಕು ದೃಢಪಟ್ಟಿರುತ್ತದೆ.</p>.<p>ಸೋಂಕಿತ ವ್ಯಕ್ತಿಗಳು ಬೆಂಗಳೂರಿನ ವಿಕ್ಟೋರಿಯಾ ಹಾಗೂ ಸಿ.ವಿ.ರಾಮನ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಆರು ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ ಒಂದು ಕೋವಿಡ್-19 ಸೋಂಕು ಪ್ರಕರಣ ವರದಿಯಾಗಿವೆಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.</p>.<p>ನೆಲಮಂಗಲ ತಾಲ್ಲೂಕಿನಲ್ಲಿ, ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ (ರೋಗಿ ಸಂಖ್ಯೆ-8547) ಪ್ರಾಥಮಿಕ ಸಂಪರ್ಕ ಹೊಂದಿದ್ದ, 51 ವರ್ಷದ ಪುರುಷ (ಪಿ-9901), 21 ವರ್ಷದ ಯುವತಿ(ಪಿ-9902), 14 ವರ್ಷದ ಬಾಲಕಿ(ಪಿ-9903), 38 ವರ್ಷದ ಮಹಿಳೆ(ಪಿ-9904), 10 ವರ್ಷದ ಬಾಲಕ(ಪಿ-9905) ಹಾಗೂ 26 ವರ್ಷದ ಯುವಕನ(ಪಿ-9906), ಆರೋಗ್ಯ ತಪಾಸಣೆ ನಡೆಸಿದಾಗ ಸೋಂಕು ದೃಢಪಟ್ಟಿದೆ.</p>.<p>ದೇವನಹಳ್ಳಿ ಪಟ್ಟಣದ 22 ವರ್ಷದ ಯುವಕ(ಪಿ-9907) ಇನ್ಫ್ಲೂಯೆನ್ಜಾ ಮಾದರಿಯ ಕಾಯಿಲೆ(ಐಎಲ್ಐ)ಯಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದಾಗ ಸೋಂಕು ದೃಢಪಟ್ಟಿರುತ್ತದೆ.</p>.<p>ಸೋಂಕಿತ ವ್ಯಕ್ತಿಗಳು ಬೆಂಗಳೂರಿನ ವಿಕ್ಟೋರಿಯಾ ಹಾಗೂ ಸಿ.ವಿ.ರಾಮನ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>