<p><strong>ಚನ್ನಪಟ್ಟಣ:</strong> ಮಹಿಳೆಯರಿಗೆ ಬೇಕಾಗಿರುವುದು ಕನಿಕರವಲ್ಲ, ಸಹಕಾರ. ಮಹಿಳೆಗೆ ಅವಕಾಶ ನೀಡಿದರೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಾರೆ ಎಂದು ಶೀಲಾ ಯೋಗೇಶ್ವರ್ ಅಭಿಪ್ರಾಯಪಟ್ಟರು.<br><br>ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಭಾನುವಾರ ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗಿನಿ (ಸ್ವಯಂ ಉದ್ಯೋಗಗಳ ಉಚಿತ ತರಬೇತಿ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br><br> ಮಹಿಳೆಯರಲ್ಲಿ ಹಲವಾರು ಕೌಶಲಗಳಿವೆ. ಆದರೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ಕೊರತೆಯಿಂದ ಆ ಕೌಶಲಗಳು ಹೊರಬರುತ್ತಿಲ್ಲ ಎಂದರು.</p>.<p>ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಶ್ರೀ ಕ್ಷೇತ್ರದ ವತಿಯಿಂದ ಉದ್ಯೋಗಿನಿ ಯೋಜನೆಯ ಅಡಿ ನುರಿತ ತರಬೇತುದಾರರಿಂದ ಸ್ವಯಂ ಉದ್ಯೋಗಗಳ ಉಚಿತ ತರಬೇತಿ ನೀಡಲಾಗುತ್ತದೆ. ಶಿಬಿರಾರ್ಥಿಗಳು ತಯಾರಿಸುವ ವಸ್ತುಗಳನ್ನು ಖರೀದಿಸಿ ಉತ್ತೇಜನ ನೀಡಲಾಗುತ್ತದೆ ಎಂದು ಕ್ಷೇತ್ರದ ಧರ್ಮದರ್ಶಿ ಡಾ.ಮಲ್ಲೇಶ್ ಗುರೂಜಿ ಹೇಳಿದರು.<br /><br /> ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸಹನಾ ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಬಾಬು, ರಮ್ಯ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಜ್ಯೋತಿ ಪ್ರಕಾಶ್, ಅಭಿಲಾಷ್ ತಿಟ್ಟಮಾರನಹಳ್ಳಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಮಹಿಳೆಯರಿಗೆ ಬೇಕಾಗಿರುವುದು ಕನಿಕರವಲ್ಲ, ಸಹಕಾರ. ಮಹಿಳೆಗೆ ಅವಕಾಶ ನೀಡಿದರೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಾರೆ ಎಂದು ಶೀಲಾ ಯೋಗೇಶ್ವರ್ ಅಭಿಪ್ರಾಯಪಟ್ಟರು.<br><br>ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಭಾನುವಾರ ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗಿನಿ (ಸ್ವಯಂ ಉದ್ಯೋಗಗಳ ಉಚಿತ ತರಬೇತಿ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br><br> ಮಹಿಳೆಯರಲ್ಲಿ ಹಲವಾರು ಕೌಶಲಗಳಿವೆ. ಆದರೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ಕೊರತೆಯಿಂದ ಆ ಕೌಶಲಗಳು ಹೊರಬರುತ್ತಿಲ್ಲ ಎಂದರು.</p>.<p>ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಶ್ರೀ ಕ್ಷೇತ್ರದ ವತಿಯಿಂದ ಉದ್ಯೋಗಿನಿ ಯೋಜನೆಯ ಅಡಿ ನುರಿತ ತರಬೇತುದಾರರಿಂದ ಸ್ವಯಂ ಉದ್ಯೋಗಗಳ ಉಚಿತ ತರಬೇತಿ ನೀಡಲಾಗುತ್ತದೆ. ಶಿಬಿರಾರ್ಥಿಗಳು ತಯಾರಿಸುವ ವಸ್ತುಗಳನ್ನು ಖರೀದಿಸಿ ಉತ್ತೇಜನ ನೀಡಲಾಗುತ್ತದೆ ಎಂದು ಕ್ಷೇತ್ರದ ಧರ್ಮದರ್ಶಿ ಡಾ.ಮಲ್ಲೇಶ್ ಗುರೂಜಿ ಹೇಳಿದರು.<br /><br /> ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸಹನಾ ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಬಾಬು, ರಮ್ಯ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಜ್ಯೋತಿ ಪ್ರಕಾಶ್, ಅಭಿಲಾಷ್ ತಿಟ್ಟಮಾರನಹಳ್ಳಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>