<p><strong>ಚನ್ನಪಟ್ಟಣ:</strong> ಕಳೆದ ನಾಲ್ಕು ತಿಂಗಳಿನಿಂದ ಸ್ಥಗಿತವಾಗಿದ್ದ ನಗರದ ಶೆಟ್ಟಿಹಳ್ಳಿ ಕೆರೆ ಪುನಃಶ್ಚೇತನ ಕಾಮಗಾರಿ ಪುನರಾರಂಭವಾಗಿದೆ. ಸೋಮವಾರ ಹಿಟಾಚಿ, ಜೆಸಿಬಿ ಯಂತ್ರಗಳು ಕೆರೆ ಅಂಗಳವನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಸಿದವು.</p>.<p>ನಗರದ ಮಧ್ಯಭಾಗದಲ್ಲಿದ್ದ ಕೆರೆಯಲ್ಲಿ ಕೊಳಚೆ ತುಂಬಿ, ಜೋಂಡು ಬೆಳೆದು, ಕೆರೆ ಅಂಗಳ ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ನಗರಸಭೆ ಹಾಗೂ ಸಿಎಸ್ಆರ್ ಅನುದಾನದಲ್ಲಿ ₹1.25ಕೋಟಿ ವೆಚ್ಚದಲ್ಲಿ 2025ರ ಜುಲೈ 14ರಂದು ಕೆರೆಯನ್ನು ಪುನಃಶ್ಚೇತನಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಲೇಕ್ ಮ್ಯಾನ್ ಖ್ಯಾತಿಯ ಕೊಪ್ಪಳ ಮೂಲದ ಆನಂದ್ ಅವರ ನೇತೃತ್ವದಲ್ಲಿ ಕಾಮಗಾರಿ ಆರಂಭವಾಗಿತ್ತು.</p>.<p>ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆಯೊಂದಿಗೆ ಆರಂಭವಾದ ಕಾಮಗಾರಿ ಎರಡು ತಿಂಗಳು ಕಾಲ ಬಿರುಸಿನಿಂದ ನಡೆದು ನಂತರ ಹಠಾತ್ತಾನೆ ಸ್ಥಗಿತವಾಗಿತ್ತು. ಸತತ ನಾಲ್ಕು ತಿಂಗಳು ಕಾಲ ಕಾಮಗಾರಿ ನಿಂತಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಸೋಮವಾರ (ಜ.5) ಸಂಚಿಕೆಯಲ್ಲಿ ವಿವರವಾದ ವರದಿ ಪ್ರಕಟವಾಗಿತ್ತು. ನಗರಸಭೆ ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಂಡು ಕಾಮಗಾರಿ ಪುನರಾರಂಭಿಸಿದ್ದಾರೆ.</p>.<p>ಮೊದಲು ಮಳೆಗಾಲದ ಹಿನ್ನೆಲೆಯಲ್ಲಿ ಕಾಮಗಾರಿ ನಿಲ್ಲಿಸಲಾಗಿತ್ತು. ನಂತರ ಕೆಲವು ತಾಂತ್ರಿಕ ತೊಂದರೆಗಳಿಂದ ಕಾಮಗಾರಿ ಆರಂಭಿಸಲು ಸಾಧ್ಯವಾಗಿರಲಿಲ್ಲ. ಈಗ ಕಾಮಗಾರಿ ಪುನರಾರಂಭವಾಗಿದೆ. ಕೆರೆ ಪುನಃಶ್ಚೇತನ ಕಾರ್ಯ ಭರದಿಂದ ಸಾಗಲಿದೆ ಎಂದು ನಗರಸಭೆ ಪೌರಾಯುಕ್ತ ಮಹೇಂದ್ರ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಕಳೆದ ನಾಲ್ಕು ತಿಂಗಳಿನಿಂದ ಸ್ಥಗಿತವಾಗಿದ್ದ ನಗರದ ಶೆಟ್ಟಿಹಳ್ಳಿ ಕೆರೆ ಪುನಃಶ್ಚೇತನ ಕಾಮಗಾರಿ ಪುನರಾರಂಭವಾಗಿದೆ. ಸೋಮವಾರ ಹಿಟಾಚಿ, ಜೆಸಿಬಿ ಯಂತ್ರಗಳು ಕೆರೆ ಅಂಗಳವನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಸಿದವು.</p>.<p>ನಗರದ ಮಧ್ಯಭಾಗದಲ್ಲಿದ್ದ ಕೆರೆಯಲ್ಲಿ ಕೊಳಚೆ ತುಂಬಿ, ಜೋಂಡು ಬೆಳೆದು, ಕೆರೆ ಅಂಗಳ ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ನಗರಸಭೆ ಹಾಗೂ ಸಿಎಸ್ಆರ್ ಅನುದಾನದಲ್ಲಿ ₹1.25ಕೋಟಿ ವೆಚ್ಚದಲ್ಲಿ 2025ರ ಜುಲೈ 14ರಂದು ಕೆರೆಯನ್ನು ಪುನಃಶ್ಚೇತನಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಲೇಕ್ ಮ್ಯಾನ್ ಖ್ಯಾತಿಯ ಕೊಪ್ಪಳ ಮೂಲದ ಆನಂದ್ ಅವರ ನೇತೃತ್ವದಲ್ಲಿ ಕಾಮಗಾರಿ ಆರಂಭವಾಗಿತ್ತು.</p>.<p>ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆಯೊಂದಿಗೆ ಆರಂಭವಾದ ಕಾಮಗಾರಿ ಎರಡು ತಿಂಗಳು ಕಾಲ ಬಿರುಸಿನಿಂದ ನಡೆದು ನಂತರ ಹಠಾತ್ತಾನೆ ಸ್ಥಗಿತವಾಗಿತ್ತು. ಸತತ ನಾಲ್ಕು ತಿಂಗಳು ಕಾಲ ಕಾಮಗಾರಿ ನಿಂತಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಸೋಮವಾರ (ಜ.5) ಸಂಚಿಕೆಯಲ್ಲಿ ವಿವರವಾದ ವರದಿ ಪ್ರಕಟವಾಗಿತ್ತು. ನಗರಸಭೆ ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಂಡು ಕಾಮಗಾರಿ ಪುನರಾರಂಭಿಸಿದ್ದಾರೆ.</p>.<p>ಮೊದಲು ಮಳೆಗಾಲದ ಹಿನ್ನೆಲೆಯಲ್ಲಿ ಕಾಮಗಾರಿ ನಿಲ್ಲಿಸಲಾಗಿತ್ತು. ನಂತರ ಕೆಲವು ತಾಂತ್ರಿಕ ತೊಂದರೆಗಳಿಂದ ಕಾಮಗಾರಿ ಆರಂಭಿಸಲು ಸಾಧ್ಯವಾಗಿರಲಿಲ್ಲ. ಈಗ ಕಾಮಗಾರಿ ಪುನರಾರಂಭವಾಗಿದೆ. ಕೆರೆ ಪುನಃಶ್ಚೇತನ ಕಾರ್ಯ ಭರದಿಂದ ಸಾಗಲಿದೆ ಎಂದು ನಗರಸಭೆ ಪೌರಾಯುಕ್ತ ಮಹೇಂದ್ರ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>