ಶಿಕ್ಷಣ ಕ್ಷೇತ್ರದಲ್ಲಿ ಸಾತನೂರು ಹೋಬಳಿ ಕೆ.ಪಾಳ್ಯ ಸಾತನೂರು ಗ್ರಾಮಾಂತರ ಪ್ರೌಢಶಾಲೆ ಮುಖ್ಯ ಶಿಕ್ಷಕ ವಿ.ರಾಜು, ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಹಾರೋಹಳ್ಳಿ ಹೋಬಳಿ ಗಬ್ಬಾಡಿ ಗ್ರಾಮದ ಜಿ.ಪಿ. ಕಾಡೇಗೌಡ, ಕ್ರೀಡಾ ಕ್ಷೇತ್ರದಲ್ಲಿ ಸಾತನೂರು ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎ. ತಿಪ್ಪೇಸ್ವಾಮಿ ಮತ್ತು ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಚಿನ್ನದ ಪದಕ ಗಳಿಸಿದ ಯುವ ಕ್ರೀಡಾಪಟು ದೊಡ್ಡಾಲಹಳ್ಳಿ ಗೋವರ್ಧನ ಅವರನ್ನು ಗೌರವಿಸಲಾಯಿತು.