ಪಟ್ಟಣದ ವ್ಯಾಪ್ತಿಯಲ್ಲಿ ಬುಧವಾರ ಸಂಜೆಯಿಂದಲೇ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಎಲ್ಲವನ್ನೂ ಮುಚ್ಚಲಾಗಿದೆ. ಶನಿವಾರ ಮತ್ತು ಭಾನುವಾರ ದಿನಸಿ, ತರಕಾರಿ, ಹಾಲು ಮಾರಾಟದ ಅಂಗಡಿಗಳು ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ತೆರೆದಿರುತ್ತವೆ. ಈ ಬಗ್ಗೆ ಪುರಸಭೆ ಅಧಿಕಾರಿಗಳು ಈಗಾಗಲೇ ಪಟ್ಟಣದ ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರೂ ಕಾರ್ಯೋನ್ಮುಖರಾಗಿದ್ದಾರೆ.