<p><strong>ಕುದೂರು</strong>: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಹುಟ್ಟೂರಾದ ಮಾಗಡಿ ತಾಲ್ಲೂಕಿನ ವೀರಾಪುರ ಇನ್ನೂ ಕುಗ್ರಾಮವಾಗಿರುವುದು ಬೇಸರದ ಸಂಗತಿ. ಸರ್ಕಾರ ಕೂಡಲೇ ಈ ಗ್ರಾಮವನ್ನು ಅಭಿವೃದ್ಧಿಪಡಿಸುವ ಮೂಲಕ ಗ್ರಾಮಕ್ಕೆ ಅನುಕೂಲತೆ ಮಾಡಿಕೊಡಬೇಕು ಎಂದು ತುಮಕೂರು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಸಲಹೆ ಮಾಡಿದರು.</p>.<p>ಕುದೂರು ಹೋಬಳಿಯ ವೀರಾಪುರದಲ್ಲಿ ಡಾ.ಶಿವಕುಮಾರ ಸ್ವಾಮೀಜಿಯ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಡಾ.ಶಿವಕುಮಾರ ಸ್ವಾಮೀಜಿ ಪ್ರತಿಮೆ ನಿರ್ಮಾಣಕ್ಕೆ ₹25 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಇದೇ ಸಮಯದಲ್ಲಿ ಆದಿಚುಂಚನಗಿರಿ ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರಾದ ಬಾನಂದೂರು ಅಭಿವೃದ್ಧಿಗೂ ಕೂಡ ₹25 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಎರಡೂ ಕಾಮಗಾರಿ ಒಂದೇ ಸಮಯಕ್ಕೆ ಮುಗಿಬೇಕಾಗಿತ್ತು. ಈ ಕಾಮಗಾರಿ ಮುಗಿದು ಐದು ವರ್ಷ ಆಗಬೇಕಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಸಿದ್ಧಗಂಗಾ ಶ್ರೀ ಪುತ್ಥಳಿ ನಿರ್ಮಾಣ ಕಾಮಗಾರಿ ಕುಂಠಿತಗೊಂಡಿದೆ ಎಂದರು.</p>.<p>ವೀರಾಪುರ ಗ್ರಾಮ ಅಭಿವೃದ್ಧಿಯಾದರೆ ಮುಂದಿನ ದಿನಗಳಲ್ಲಿ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರ ಆಗುವುದರಲ್ಲಿ ಅನುಮಾನವಿಲ್ಲ. ಪ್ರತಿಮೆ ಸಣ್ಣಪುಟ್ಟ ಕೆಲಸ ಬಾಕಿಯಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿ. ಸರ್ಕಾರ ಆಸಕ್ತಿ ತೋರಿದಾಗ ಮಾತ್ರ ಇಂತಹ ಕಾಮಗಾರಿ ಪೂರ್ಣ ಆಗಲು ಸಾಧ್ಯ ಎಂದರು.</p>.<p>ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ವೇಳೆ ವೀರಾಪುರ ಹಾಗೂ ಬಾನಂದೂರು ಗ್ರಾಮಗಳನ್ನು ಸರ್ಕಾರ ದತ್ತು ಪಡೆದಿತ್ತು ಎಂದು ಕೆಆರ್ಐಡಿಎಲ್ ಮಾಜಿ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು.</p>.<p>ವೀರಾಪುರಕ್ಕೆ ಸಂಪರ್ಕಿಸುವ ಅರಸನಕುಂಟಿ ಹಾಗೂ ಪಾಲನಹಳ್ಳಿ ರಸ್ತೆಗಳ ಅಭಿವೃದ್ಧಿ ಜತೆಗೆ ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ತೆಗೆದುಕೊಂಡು ಅವರಿಗೆ ಬದಲಿ ಜಾಗ ನೀಡಲು ಕ್ರಮವಹಿಸಲಾಗುವುದು ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಭರವಸೆ ನೀಡಿದರು.</p>.<p>ಪ್ರತಿಮೆ ಕಾಮಗಾರಿ ಹಾಗೂ ಶ್ರೀಗಳ ಮನೆ ವೀಕ್ಷಣೆ ಬಳಿಕ ಸ್ವಾಮೀಜಿ ತಂದೆ, ತಾಯಿಯ ಸಮಾಧಿಗೆ ಪೂಜೆ ಸಲ್ಲಿಸಲಾಯಿತು.</p>.<p>ಜಿಲ್ಲಾಧ್ಯಕ್ಷ ಯಶವಂತ್, ತಾಲ್ಲೂಕು ಟಿಎಪಿಸಿಎಂಎಸ್ ಅಧ್ಯಕ್ಷ ಹೊನ್ನಾಪುರ ಶಿವಪ್ರಸಾದ್, ಪೊಲೀಸ್ ವಿಜಯಕುಮಾರ್, ಕಾಗಿಮಡು ದೀಪು, ತಟ್ಟಿಕೆರೆ ಬಾಬು, ಶ್ರೀಗಿರಿಪುರ ಪ್ರಕಾಶ್, ಪರಮಣ್ಣ, ಶಿವರುದ್ರಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು</strong>: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಹುಟ್ಟೂರಾದ ಮಾಗಡಿ ತಾಲ್ಲೂಕಿನ ವೀರಾಪುರ ಇನ್ನೂ ಕುಗ್ರಾಮವಾಗಿರುವುದು ಬೇಸರದ ಸಂಗತಿ. ಸರ್ಕಾರ ಕೂಡಲೇ ಈ ಗ್ರಾಮವನ್ನು ಅಭಿವೃದ್ಧಿಪಡಿಸುವ ಮೂಲಕ ಗ್ರಾಮಕ್ಕೆ ಅನುಕೂಲತೆ ಮಾಡಿಕೊಡಬೇಕು ಎಂದು ತುಮಕೂರು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಸಲಹೆ ಮಾಡಿದರು.</p>.<p>ಕುದೂರು ಹೋಬಳಿಯ ವೀರಾಪುರದಲ್ಲಿ ಡಾ.ಶಿವಕುಮಾರ ಸ್ವಾಮೀಜಿಯ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಡಾ.ಶಿವಕುಮಾರ ಸ್ವಾಮೀಜಿ ಪ್ರತಿಮೆ ನಿರ್ಮಾಣಕ್ಕೆ ₹25 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಇದೇ ಸಮಯದಲ್ಲಿ ಆದಿಚುಂಚನಗಿರಿ ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರಾದ ಬಾನಂದೂರು ಅಭಿವೃದ್ಧಿಗೂ ಕೂಡ ₹25 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಎರಡೂ ಕಾಮಗಾರಿ ಒಂದೇ ಸಮಯಕ್ಕೆ ಮುಗಿಬೇಕಾಗಿತ್ತು. ಈ ಕಾಮಗಾರಿ ಮುಗಿದು ಐದು ವರ್ಷ ಆಗಬೇಕಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಸಿದ್ಧಗಂಗಾ ಶ್ರೀ ಪುತ್ಥಳಿ ನಿರ್ಮಾಣ ಕಾಮಗಾರಿ ಕುಂಠಿತಗೊಂಡಿದೆ ಎಂದರು.</p>.<p>ವೀರಾಪುರ ಗ್ರಾಮ ಅಭಿವೃದ್ಧಿಯಾದರೆ ಮುಂದಿನ ದಿನಗಳಲ್ಲಿ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರ ಆಗುವುದರಲ್ಲಿ ಅನುಮಾನವಿಲ್ಲ. ಪ್ರತಿಮೆ ಸಣ್ಣಪುಟ್ಟ ಕೆಲಸ ಬಾಕಿಯಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿ. ಸರ್ಕಾರ ಆಸಕ್ತಿ ತೋರಿದಾಗ ಮಾತ್ರ ಇಂತಹ ಕಾಮಗಾರಿ ಪೂರ್ಣ ಆಗಲು ಸಾಧ್ಯ ಎಂದರು.</p>.<p>ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ವೇಳೆ ವೀರಾಪುರ ಹಾಗೂ ಬಾನಂದೂರು ಗ್ರಾಮಗಳನ್ನು ಸರ್ಕಾರ ದತ್ತು ಪಡೆದಿತ್ತು ಎಂದು ಕೆಆರ್ಐಡಿಎಲ್ ಮಾಜಿ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು.</p>.<p>ವೀರಾಪುರಕ್ಕೆ ಸಂಪರ್ಕಿಸುವ ಅರಸನಕುಂಟಿ ಹಾಗೂ ಪಾಲನಹಳ್ಳಿ ರಸ್ತೆಗಳ ಅಭಿವೃದ್ಧಿ ಜತೆಗೆ ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ತೆಗೆದುಕೊಂಡು ಅವರಿಗೆ ಬದಲಿ ಜಾಗ ನೀಡಲು ಕ್ರಮವಹಿಸಲಾಗುವುದು ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಭರವಸೆ ನೀಡಿದರು.</p>.<p>ಪ್ರತಿಮೆ ಕಾಮಗಾರಿ ಹಾಗೂ ಶ್ರೀಗಳ ಮನೆ ವೀಕ್ಷಣೆ ಬಳಿಕ ಸ್ವಾಮೀಜಿ ತಂದೆ, ತಾಯಿಯ ಸಮಾಧಿಗೆ ಪೂಜೆ ಸಲ್ಲಿಸಲಾಯಿತು.</p>.<p>ಜಿಲ್ಲಾಧ್ಯಕ್ಷ ಯಶವಂತ್, ತಾಲ್ಲೂಕು ಟಿಎಪಿಸಿಎಂಎಸ್ ಅಧ್ಯಕ್ಷ ಹೊನ್ನಾಪುರ ಶಿವಪ್ರಸಾದ್, ಪೊಲೀಸ್ ವಿಜಯಕುಮಾರ್, ಕಾಗಿಮಡು ದೀಪು, ತಟ್ಟಿಕೆರೆ ಬಾಬು, ಶ್ರೀಗಿರಿಪುರ ಪ್ರಕಾಶ್, ಪರಮಣ್ಣ, ಶಿವರುದ್ರಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>