ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ಆದೇಶ ಪಾಲಿಸಲು ಸಿದ್ಧ: ಸಿದ್ದರಾಮಯ್ಯ

Last Updated 12 ಜನವರಿ 2022, 10:56 IST
ಅಕ್ಷರ ಗಾತ್ರ

ರಾಮನಗರ: ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ನೀಡುವ ಸೂಚನೆಯನ್ನು‌ ಪಾಲಿಸಲು ನಾವು ಸಿದ್ಧರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಪಾದಯಾತ್ರೆ ಬಗ್ಗೆ ಹೈಕೋರ್ಟ್ ಚಾಟಿ ಬೀಸಿರುವ ಕುರಿತು ಅವರು ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಹೈಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆಯೋ ಗೊತ್ತಿಲ್ಲ. ಕಾನೂನು‌ ರೀತಿಯಲ್ಲೂ ಹೋರಾಟ ಮುಂದುವರಿಸುತ್ತೇವೆ. ಸದ್ಯಕ್ಕೆ ಪಾದಯಾತ್ರೆ ಮುಂದುವರಿಯಲಿದೆ ಎಂದು ತಿಳಿಸಿದರು.

ಮಾಜಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ನ್ಯಾಯಾಲಯದ ಬಗ್ಗೆ ನಮಗೆ ಗೌರವ ಇದೆ. ಅದರ ಆದೇಶಕ್ಕೆ ತಲೆಬಾಗುತ್ತೇವೆ ಎಂದರು.

ಹೈಕೋರ್ಟ್‌ನಲ್ಲಿ ಪಿಐಎಲ್ ವಿಚಾರಣೆ ಹಿನ್ನೆಲೆಯಲ್ಲಿ ಮಧ್ಯಾಹ್ನ ಕೆ.ಪಿ. ದೊಡ್ಡಿ ಗ್ರಾಮದಲ್ಲಿ ಊಟದ ವಿರಾಮದ ವೇಳೆ ಕಾಂಗ್ರೆಸ್ ನಾಯಕರು ಸಭೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT