<p><strong>ಮಾಗಡಿ:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಉತ್ತರಾಧಿಕಾರಿಗೆ ನಾಯಕತ್ವ ಬಿಟ್ಟುಕೊಟ್ಟರೆ ಮುಂದಿನ 15 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರಲಿದೆ’ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.</p>.<p>‘ನಾಳೆಯೇ ಅಧಿಕಾರ ಬಿಟ್ಟು ಕೊಡಲಿ ಎಂದು ನಾನು ಕೇಳುತ್ತಿಲ್ಲ. ಆದರೆ, ಒಳ್ಳೆಯ ಉತ್ತರಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರೆ ಮತ್ತಷ್ಟು ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮುಂದುವರೆಯಲಿದೆ ಎನ್ನುವ ಆಶಯದೊಂದಿಗೆ ಈ ಮಾತು ಹೇಳುತ್ತಿರುವೆ’ ಎಂದರು. </p>.<p>ತಾಲ್ಲೂಕಿನ ಬಾಚೇನಹಟ್ಟಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ನನಗೆ ಇರುವ ಮಾಹಿತಿ ಪ್ರಕಾರ ಹೈಕಮಾಂಡ್ ಶೀಘ್ರದಲ್ಲೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುವ ಸಾಧ್ಯತೆ ಇದೆ. ಆ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ತೀರ್ಮಾನವಾಗಲಿದೆ’ ಎಂದರು.</p>.<p>ಸಿದ್ದರಾಮಯ್ಯ ಅವರಿಗೆ ಅವರೇ ಸಾಟಿ. ಅವರು ನಮ್ಮ ಪ್ರಶ್ನಾತೀತ ನಾಯಕ. ಪಕ್ಷ ಅವರಿಗೆ ಮಹತ್ವದ ಹುದ್ದೆಗಳನ್ನು ನೀಡಿದೆ. ಅವರು ತಮ್ಮ ನಾಯಕತ್ವದಲ್ಲಿಯೇ ಸಮರ್ಪಕ ಉತ್ತರಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕು. ಪಕ್ಷಕ್ಕೆ ಮಾರ್ಗದರ್ಶನ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಉತ್ತರಾಧಿಕಾರಿಗೆ ನಾಯಕತ್ವ ಬಿಟ್ಟುಕೊಟ್ಟರೆ ಮುಂದಿನ 15 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರಲಿದೆ’ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.</p>.<p>‘ನಾಳೆಯೇ ಅಧಿಕಾರ ಬಿಟ್ಟು ಕೊಡಲಿ ಎಂದು ನಾನು ಕೇಳುತ್ತಿಲ್ಲ. ಆದರೆ, ಒಳ್ಳೆಯ ಉತ್ತರಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರೆ ಮತ್ತಷ್ಟು ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮುಂದುವರೆಯಲಿದೆ ಎನ್ನುವ ಆಶಯದೊಂದಿಗೆ ಈ ಮಾತು ಹೇಳುತ್ತಿರುವೆ’ ಎಂದರು. </p>.<p>ತಾಲ್ಲೂಕಿನ ಬಾಚೇನಹಟ್ಟಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ನನಗೆ ಇರುವ ಮಾಹಿತಿ ಪ್ರಕಾರ ಹೈಕಮಾಂಡ್ ಶೀಘ್ರದಲ್ಲೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುವ ಸಾಧ್ಯತೆ ಇದೆ. ಆ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ತೀರ್ಮಾನವಾಗಲಿದೆ’ ಎಂದರು.</p>.<p>ಸಿದ್ದರಾಮಯ್ಯ ಅವರಿಗೆ ಅವರೇ ಸಾಟಿ. ಅವರು ನಮ್ಮ ಪ್ರಶ್ನಾತೀತ ನಾಯಕ. ಪಕ್ಷ ಅವರಿಗೆ ಮಹತ್ವದ ಹುದ್ದೆಗಳನ್ನು ನೀಡಿದೆ. ಅವರು ತಮ್ಮ ನಾಯಕತ್ವದಲ್ಲಿಯೇ ಸಮರ್ಪಕ ಉತ್ತರಾಧಿಕಾರಿಗೆ ಅಧಿಕಾರ ಹಸ್ತಾಂತರಿಸಬೇಕು. ಪಕ್ಷಕ್ಕೆ ಮಾರ್ಗದರ್ಶನ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>