<p>ಚನ್ನಪಟ್ಟಣ: ತಾಲ್ಲೂಕಿನ ಸಿಂಗರಾಜಿಪುರ ಗ್ರಾಮದಲ್ಲಿ ಸುಮಾರು ₹60 ಲಕ್ಷ ವೆಚ್ಚದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಬಮೂಲ್ ನಿರ್ದೇಶಕ ಎಸ್. ಲಿಂಗೇಶ್ ಕುಮಾರ್ ಅವರು ಭಾನುವಾರ ಭೂಮಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಲು ತಾಲ್ಲೂಕಿನ ಸಿಂಗರಾಜಿಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸುಮಾರು 10 ಸಾವಿರ ಲೀಟರ್ ಹಾಲಿನ ಸಾಮರ್ಥ್ಯದ ಬಿಎಂಸಿ ಹಾಗೂ ₹60 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಎರಡು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಮುಂದಿನ 6 ತಿಂಗಳಿನಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಸಂಘದ ಕಟ್ಟಡ ನಿರ್ಮಾಣಕ್ಕೆ ಕೆಎಂಎಫ್ ನಿಂದ ₹10 ಲಕ್ಷ ವಿಶೇಷ ಅನುದಾನ, ಬಮೂಲ್ನಿಂದ ₹4.5 ಲಕ್ಷ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ₹2 ಲಕ್ಷ ಹಾಗೂ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ ₹5 ಲಕ್ಷ, ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ₹5 ಲಕ್ಷ ಅನುದಾನ ದೊರೆತಿದೆ ಎಂದರು.</p>.<p>ಚನ್ನಪಟ್ಟಣ ಬಮೂಲ್ ಶಿಬಿರ ಕಚೇರಿಯ ಡಾ. ಸಿ.ಆರ್.ಕಿರಣ್, ಹೊನ್ನಪ್ಪ ಪೂಜಾರಿ, ಎಸ್.ಪಿ. ಪ್ರಸನ್ನಕುಮಾರ್, ಎಸ್.ಎ. ಶಿವಕುಮಾರ್, ಬಿ.ಎಸ್. ಗೀತಾ, ಎಸ್.ಸಿ.ರವಿಶಂಕರ್, ಚಾಮರಾಜು, ನಾಗರಾಜು, ಸಿದ್ದೇಗೌಡ, ಕೆ.ಶಿವಣ್ಣ, ಶಶಿಕಲಾ, ಮಂಗಳ ರವಿಕುಮಾರ್, ರಾಜೇಶ್, ಸಿದ್ದೇಗೌಡ, ಶಿವಕುಮಾರ್, ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ತಾಲ್ಲೂಕಿನ ಸಿಂಗರಾಜಿಪುರ ಗ್ರಾಮದಲ್ಲಿ ಸುಮಾರು ₹60 ಲಕ್ಷ ವೆಚ್ಚದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಬಮೂಲ್ ನಿರ್ದೇಶಕ ಎಸ್. ಲಿಂಗೇಶ್ ಕುಮಾರ್ ಅವರು ಭಾನುವಾರ ಭೂಮಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಲು ತಾಲ್ಲೂಕಿನ ಸಿಂಗರಾಜಿಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸುಮಾರು 10 ಸಾವಿರ ಲೀಟರ್ ಹಾಲಿನ ಸಾಮರ್ಥ್ಯದ ಬಿಎಂಸಿ ಹಾಗೂ ₹60 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಎರಡು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಮುಂದಿನ 6 ತಿಂಗಳಿನಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಸಂಘದ ಕಟ್ಟಡ ನಿರ್ಮಾಣಕ್ಕೆ ಕೆಎಂಎಫ್ ನಿಂದ ₹10 ಲಕ್ಷ ವಿಶೇಷ ಅನುದಾನ, ಬಮೂಲ್ನಿಂದ ₹4.5 ಲಕ್ಷ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ₹2 ಲಕ್ಷ ಹಾಗೂ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ ₹5 ಲಕ್ಷ, ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ₹5 ಲಕ್ಷ ಅನುದಾನ ದೊರೆತಿದೆ ಎಂದರು.</p>.<p>ಚನ್ನಪಟ್ಟಣ ಬಮೂಲ್ ಶಿಬಿರ ಕಚೇರಿಯ ಡಾ. ಸಿ.ಆರ್.ಕಿರಣ್, ಹೊನ್ನಪ್ಪ ಪೂಜಾರಿ, ಎಸ್.ಪಿ. ಪ್ರಸನ್ನಕುಮಾರ್, ಎಸ್.ಎ. ಶಿವಕುಮಾರ್, ಬಿ.ಎಸ್. ಗೀತಾ, ಎಸ್.ಸಿ.ರವಿಶಂಕರ್, ಚಾಮರಾಜು, ನಾಗರಾಜು, ಸಿದ್ದೇಗೌಡ, ಕೆ.ಶಿವಣ್ಣ, ಶಶಿಕಲಾ, ಮಂಗಳ ರವಿಕುಮಾರ್, ರಾಜೇಶ್, ಸಿದ್ದೇಗೌಡ, ಶಿವಕುಮಾರ್, ಕಾರ್ಯದರ್ಶಿ ರವಿಕುಮಾರ್, ಖಜಾಂಚಿ ಕೃಷ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>