ಕುಮಾರ್ನನ್ನು ಬಂಧಿಸಲು ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ, ಪ್ರತಿ ದಿನ ಕುಡಿಯಲು 500 ರೂಪಾಯಿ ದುಡ್ಡು ಕೇಳ್ತಾರೆ. ಬಟ್ಟೆ, ಊಟ ಕೊಡಬಹುದು. ಆದರೆ ಕುಡಿಯುವುದಕ್ಕೆ ದುಡ್ಡು ಎಲ್ಲಿಂದ ತರಬೇಕು? ಎಂದು ಪುತ್ರ ಕುಮಾರ್ ಸುಳ್ಳು ದೂರು ಹೇಳುವ ಪ್ರಯತ್ನ ಮಾಡಿದ್ದ. 'ಒಂದೇ ಒಂದು ರೂಪಾಯಿ ಕೊಟ್ಟಿದ್ದೇನೆ ಎಂದು ತನ್ನ ಮಕ್ಕಳನ್ನು ಮುಟ್ಟಿ ಹೇಳು' ಎಂದು ತಂದೆ ತಿಮ್ಮಯ್ಯ ಹೇಳಿದಾಗ ದುಡ್ಡು ಕೊಟ್ಟಿಲ್ಲವೆಂದು ಪುತ್ರ ಕುಮಾರ್ ಒಪ್ಪಿಕೊಂಡಿದ್ದಾನೆ.