<p><strong>ಕನಕಪುರ</strong>: ಇಲ್ಲಿನ ರೂರಲ್ ಪದವಿ ಕಾಲೇಜಿನ ದೂಂತೂರು ಮಾರೇಗೌಡ ಸಭಾಂಗಣದಲ್ಲಿ ಎಸ್.ಕರಿಯಪ್ಪ ರೂರಲ್ ಸ್ನಾತಕೋತರ ಪದವಿ ಅಧ್ಯಯನ ಕೇಂದ್ರದಿಂದ ವಿವೇಕಾನಂದ ಜಯಂತಿ ಹಾಗೂ ಯುವ ದಿನಾಚರಣೆ ಸೋಮವಾರ ಆಚರಿಸಲಾಯಿತು.</p>.<p>ಕನಕಪುರ ಆದಿತ್ಯಾಸ್ ಕಾಲೇಜು ಉಪನ್ಯಾಸಕ ಶ್ರೀಧರ್ ಮಾತನಾಡಿ, ಯಾವುದೇ ಉದ್ಯೋಗ ಮಾಡಬೇಕಾದರೂ ನಮಗೆ ಕೌಶಲ ಬೇಕಾಗುತ್ತದೆ. ಅದಕ್ಕಾಗಿ ವೃತ್ತಿ ಕೌಶಲತೆ ಬೆಳೆಸಿಕೊಳ್ಳಬೇಕಿದೆ ಎಂದು ತಿಳಿಸಿದರು.</p>.<p>ರೂರಲ್ ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಟಿ.ಬಾಲಕೃಷ್ಣ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗ ಮುಖ್ಯವಾಗುತ್ತದೆ. ಖಾಸಗಿಯಾಗಲಿ, ಸರ್ಕಾರದಾಗಲಿ, ಸ್ವಯಂ ಉದ್ಯೋಗವಾಗಲಿ ನಾವು ರೂಪಿಸಿಕೊಂಡಾಗ ಮಾತ್ರ ಜೀವನ ರೂಪಿತವಾಗುತ್ತದೆ ಎಂದರು.</p>.<p>ಉಪನ್ಯಾಸಕ ಪಾರ್ಥಸಾರಥಿ ಮಾತನಾಡಿ, ಸಮಾಜದಲ್ಲಿ ಎದರಾಗುವ ಸವಾಲುಗಳಿಗೆ ಎದೆಗುಂದದೆ ವಿವೇಕಾನಂದ ಅವರನ್ನು ಆದರ್ಶವಾಗಿಟ್ಟುಕೊಂಡು ಜೀವನದಲ್ಲಿ ಮುನ್ನಡೆಯಬೇಕು ಎಂದರು.</p>.<p>ಆರ್ಇಎಸ್ ನಿರ್ದೇಶಕ ಕೆ.ಬಿ ನಾಗರಾಜು, ವಿವೇಕಾನಂದರ ಆದರ್ಶ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.</p>.<p>ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಮೊದಲನೇ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಆರ್ಇಎಸ್ ಕಾರ್ಯದರ್ಶಿ ಪುಟ್ಟಸ್ವಾಮಿ, ಖಜಾಂಚಿ ಮಂಜುನಾಥ್, ರೂರಲ್ ಪದವಿ ಕಾಲೇಜು ಉಪ ಪ್ರಾಂಶುಪಾಲ ಕೆಂಪೇಗೌಡ, ಉಪನ್ಯಾಸಕ ಕೆ.ಪಿ ಪ್ರಕಾಶ್ ಹಾಗೂ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಇಲ್ಲಿನ ರೂರಲ್ ಪದವಿ ಕಾಲೇಜಿನ ದೂಂತೂರು ಮಾರೇಗೌಡ ಸಭಾಂಗಣದಲ್ಲಿ ಎಸ್.ಕರಿಯಪ್ಪ ರೂರಲ್ ಸ್ನಾತಕೋತರ ಪದವಿ ಅಧ್ಯಯನ ಕೇಂದ್ರದಿಂದ ವಿವೇಕಾನಂದ ಜಯಂತಿ ಹಾಗೂ ಯುವ ದಿನಾಚರಣೆ ಸೋಮವಾರ ಆಚರಿಸಲಾಯಿತು.</p>.<p>ಕನಕಪುರ ಆದಿತ್ಯಾಸ್ ಕಾಲೇಜು ಉಪನ್ಯಾಸಕ ಶ್ರೀಧರ್ ಮಾತನಾಡಿ, ಯಾವುದೇ ಉದ್ಯೋಗ ಮಾಡಬೇಕಾದರೂ ನಮಗೆ ಕೌಶಲ ಬೇಕಾಗುತ್ತದೆ. ಅದಕ್ಕಾಗಿ ವೃತ್ತಿ ಕೌಶಲತೆ ಬೆಳೆಸಿಕೊಳ್ಳಬೇಕಿದೆ ಎಂದು ತಿಳಿಸಿದರು.</p>.<p>ರೂರಲ್ ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಟಿ.ಬಾಲಕೃಷ್ಣ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗ ಮುಖ್ಯವಾಗುತ್ತದೆ. ಖಾಸಗಿಯಾಗಲಿ, ಸರ್ಕಾರದಾಗಲಿ, ಸ್ವಯಂ ಉದ್ಯೋಗವಾಗಲಿ ನಾವು ರೂಪಿಸಿಕೊಂಡಾಗ ಮಾತ್ರ ಜೀವನ ರೂಪಿತವಾಗುತ್ತದೆ ಎಂದರು.</p>.<p>ಉಪನ್ಯಾಸಕ ಪಾರ್ಥಸಾರಥಿ ಮಾತನಾಡಿ, ಸಮಾಜದಲ್ಲಿ ಎದರಾಗುವ ಸವಾಲುಗಳಿಗೆ ಎದೆಗುಂದದೆ ವಿವೇಕಾನಂದ ಅವರನ್ನು ಆದರ್ಶವಾಗಿಟ್ಟುಕೊಂಡು ಜೀವನದಲ್ಲಿ ಮುನ್ನಡೆಯಬೇಕು ಎಂದರು.</p>.<p>ಆರ್ಇಎಸ್ ನಿರ್ದೇಶಕ ಕೆ.ಬಿ ನಾಗರಾಜು, ವಿವೇಕಾನಂದರ ಆದರ್ಶ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.</p>.<p>ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಮೊದಲನೇ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಆರ್ಇಎಸ್ ಕಾರ್ಯದರ್ಶಿ ಪುಟ್ಟಸ್ವಾಮಿ, ಖಜಾಂಚಿ ಮಂಜುನಾಥ್, ರೂರಲ್ ಪದವಿ ಕಾಲೇಜು ಉಪ ಪ್ರಾಂಶುಪಾಲ ಕೆಂಪೇಗೌಡ, ಉಪನ್ಯಾಸಕ ಕೆ.ಪಿ ಪ್ರಕಾಶ್ ಹಾಗೂ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>