ಘಟನೆಗೆ ಸಂಬಂಧಿಸಿದಂತೆ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಭಾಸ್ಕರ್ ‘ನಾನು ಮುಖ್ಯಮಂತ್ರಿ ಬೊಮ್ಮಾಯಿ, ಸಚಿವ ಸಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಕರೆ ಮಾಡಿದ್ದೆ. ಆದರೆ, ಅವರು ಯಾರು ಕರೆ ಸ್ವೀಕರಿಸಲಿಲ್ಲ. ಸಚಿವ ಮಾಧುಸ್ವಾಮಿ ಮಾತ್ರ ಕರೆ ಸ್ವೀಕರಿಸಿದರು’ ಎಂದು ಮಾಹಿತಿ ನೀಡಿದರು.