<p><strong>ರಾಮನಗರ: </strong>ನಾ.ಸು. ಹರ್ಡಿಕರ್ ಭಾರತ ಸೇವಾದಳದ ಮೂಲಕ ಸ್ವಾತಂತ್ರ್ಯ ಚಳವಳಿಗೆ ಯುವ ಸಮುದಾಯವನ್ನು ಪ್ರೇರೇಪಿಸಿದ ಸ್ವಾತಂತ್ರ್ಯ ಹೋರಾಟಗಾರ ಎಂದು ಭಾರತ ಸೇವಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರಸ್ವಾಮಿ ಹೇಳಿದರು.</p>.<p>ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಶನಿವಾರ ಡಾ ನಾ.ಸು. ಹರ್ಡಿಕರ್ ಅವರ 132ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಬ್ರಿಟಿಷ್ ಸರ್ಕಾರದ ವಿರುದ್ಧ ಹಮ್ಮಿ ಕೊಂಡಿದ್ದ ನಾಗರಿಕ ಅವಿಧೇಯ ಚಳವಳಿಯಲ್ಲಿ ಸೇವಾದಳದ ಕಾರ್ಯ ಕರ್ತರು ಮಹತ್ತರ ಪಾತ್ರ ವಹಿಸಿದ್ದರು. ಯುವ ಸಮುದಾಯವನ್ನು ಭಾರತ ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿಸಿದ ಕೀರ್ತಿ ಭಾರತ ಸೇವಾದಳಕ್ಕಿದೆ ಎಂದರು.</p>.<p>ಸ್ವಾತಂತ್ರ್ಯಾ ನಂತರವು ಭಾರತ ಸೇವಾದಳ ನಾಗರಿಕರಿಗೆ ಸಹಕಾರ ನೀಡುತ್ತಿದೆ. ಪ್ರಕೃತಿ ವಿಕೋಪದ ವೇಳೆ ನಾಗರಿಕರ ರಕ್ಷಣೆಯಲ್ಲಿ ತೊಡಗಿಸಿಕೊಳ್ಳುತ್ತಿದೆ ಎಂದು<br />ತಿಳಿಸಿದರು.</p>.<p>ಸೇವಾದಳದ ರಾಜ್ಯ ಘಟಕದ ಪ್ರತಿನಿಧಿ ಕಲ್ಪನಾ ಶಿವಣ್ಣ ಮಾತನಾಡಿ, ಭಾರತ ಸೇವಾದಳ ಒಂದು ಸ್ವಯಂಸೇವಾ ಸಂಸ್ಥೆ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಡಾ.ನಾ.ಸು. ಹರ್ಡಿಕರ್ ಅವರ ಉದ್ದೇಶಗಳನ್ನು ಸಾರ್ಥಕಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.</p>.<p>ಪೌರ ಕಾರ್ಮಿಕರು ನಗರದ ನಾಗರಿಕರ ರಕ್ಷಣೆಗೆ ಶ್ರಮಿಸುತ್ತಿದ್ದಾರೆ. ಇಂದು ರಾಮನಗರ ಜಿಲ್ಲಾ ಘಟಕದಿಂದ ಹರ್ಡಿಕರ್ ಅವರ ಸ್ಮರಣಾರ್ಥ ಪೌರ ಕಾರ್ಮಿಕರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಸಹ ವಿತರಿಸಲಾಗುತ್ತಿದೆ ಎಂದರು.</p>.<p>ನಗರಸಭೆ ಅಧ್ಯಕ್ಷೆ ಬಿ.ಸಿ. ಪಾರ್ವತಮ್ಮ, ಭಾರತ ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್ ಮಾತನಾಡಿದರು. ಜಿಲ್ಲಾ ಘಟಕದ ಸಂಘಟಕರಾದ ಶಿವಕುಮಾರ್ ಮತ್ತು ರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ನಾ.ಸು. ಹರ್ಡಿಕರ್ ಭಾರತ ಸೇವಾದಳದ ಮೂಲಕ ಸ್ವಾತಂತ್ರ್ಯ ಚಳವಳಿಗೆ ಯುವ ಸಮುದಾಯವನ್ನು ಪ್ರೇರೇಪಿಸಿದ ಸ್ವಾತಂತ್ರ್ಯ ಹೋರಾಟಗಾರ ಎಂದು ಭಾರತ ಸೇವಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರಸ್ವಾಮಿ ಹೇಳಿದರು.</p>.<p>ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಶನಿವಾರ ಡಾ ನಾ.ಸು. ಹರ್ಡಿಕರ್ ಅವರ 132ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಬ್ರಿಟಿಷ್ ಸರ್ಕಾರದ ವಿರುದ್ಧ ಹಮ್ಮಿ ಕೊಂಡಿದ್ದ ನಾಗರಿಕ ಅವಿಧೇಯ ಚಳವಳಿಯಲ್ಲಿ ಸೇವಾದಳದ ಕಾರ್ಯ ಕರ್ತರು ಮಹತ್ತರ ಪಾತ್ರ ವಹಿಸಿದ್ದರು. ಯುವ ಸಮುದಾಯವನ್ನು ಭಾರತ ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿಸಿದ ಕೀರ್ತಿ ಭಾರತ ಸೇವಾದಳಕ್ಕಿದೆ ಎಂದರು.</p>.<p>ಸ್ವಾತಂತ್ರ್ಯಾ ನಂತರವು ಭಾರತ ಸೇವಾದಳ ನಾಗರಿಕರಿಗೆ ಸಹಕಾರ ನೀಡುತ್ತಿದೆ. ಪ್ರಕೃತಿ ವಿಕೋಪದ ವೇಳೆ ನಾಗರಿಕರ ರಕ್ಷಣೆಯಲ್ಲಿ ತೊಡಗಿಸಿಕೊಳ್ಳುತ್ತಿದೆ ಎಂದು<br />ತಿಳಿಸಿದರು.</p>.<p>ಸೇವಾದಳದ ರಾಜ್ಯ ಘಟಕದ ಪ್ರತಿನಿಧಿ ಕಲ್ಪನಾ ಶಿವಣ್ಣ ಮಾತನಾಡಿ, ಭಾರತ ಸೇವಾದಳ ಒಂದು ಸ್ವಯಂಸೇವಾ ಸಂಸ್ಥೆ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಡಾ.ನಾ.ಸು. ಹರ್ಡಿಕರ್ ಅವರ ಉದ್ದೇಶಗಳನ್ನು ಸಾರ್ಥಕಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.</p>.<p>ಪೌರ ಕಾರ್ಮಿಕರು ನಗರದ ನಾಗರಿಕರ ರಕ್ಷಣೆಗೆ ಶ್ರಮಿಸುತ್ತಿದ್ದಾರೆ. ಇಂದು ರಾಮನಗರ ಜಿಲ್ಲಾ ಘಟಕದಿಂದ ಹರ್ಡಿಕರ್ ಅವರ ಸ್ಮರಣಾರ್ಥ ಪೌರ ಕಾರ್ಮಿಕರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಸಹ ವಿತರಿಸಲಾಗುತ್ತಿದೆ ಎಂದರು.</p>.<p>ನಗರಸಭೆ ಅಧ್ಯಕ್ಷೆ ಬಿ.ಸಿ. ಪಾರ್ವತಮ್ಮ, ಭಾರತ ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ್ ಮಾತನಾಡಿದರು. ಜಿಲ್ಲಾ ಘಟಕದ ಸಂಘಟಕರಾದ ಶಿವಕುಮಾರ್ ಮತ್ತು ರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>