ಸಚಿವರು ರೈತರನ್ನು ಸಮಾಧಾನಪಡಿಸಿ, ಚೀನಾದಿಂದ ಬರುತ್ತಿರುವ ರೇಷ್ಮೆಯಿಂದಾಗಿ ಇಲ್ಲಿನ ರೇಷ್ಮೆ ಬೆಳೆಗೆ ಬೆಲೆ ಕಡಿಮೆಯಾಗುತ್ತಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹೇಶ್ವರ ರಾವ್, ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಮಹೇಂದ್ರ ಕುಮಾರ್ ಭಾಗವಹಿಸಿದ್ದರು.