ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಣು ಬಿಗಿದ ಸ್ಥಿತಿಯಲ್ಲಿ ಸೋಲೂರು ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿ ದೇಹ ಪತ್ತೆ

Last Updated 20 ಡಿಸೆಂಬರ್ 2021, 18:38 IST
ಅಕ್ಷರ ಗಾತ್ರ

ಮಾಗಡಿ (ರಾಮನಗರ): ತಾಲ್ಲೂಕಿನ ಸೋಲೂರಿನ ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿ (62) ಅವರ ಶವವು ಸೋಮವಾರ ಬೆಳಿಗ್ಗೆ ಮಠದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮುಂಜಾನೆ ಎಂದಿನಂತೆ ಧನುರ್ಮಾಸದ ಪೂಜೆ ಹಾಗೂ ಲಿಂಗಪೂಜೆಗೆ ಸಿದ್ಧತೆ ನಡೆಸಿದ್ದ ಶ್ರೀಗಳು ಬಳಿಕ ಮಠದ ಕೊಠಡಿಯೊಂದರ ಕಿಟಕಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀಗಳು ಭಕ್ತರೊಬ್ಬರ ಮನೆಯಲ್ಲಿ ಪೂಜೆ ಮುಗಿಸಿ ಭಾನುವಾರ ರಾತ್ರಿ ಮಠಕ್ಕೆ ವಾಪಸ್‌ ಆಗಿದ್ದರು. ನಂತರದಲ್ಲಿ ಏಕಾಏಕಿ ಸಾವನ್ನಪ್ಪಿರುವುದು ಭಕ್ತರಲ್ಲಿ ದಿಗ್ರ್ಭಮೆ ಮೂಡಿಸಿದೆ. ಶ್ರೀಗಳು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT