ಮಾಗಡಿ: ಸೋಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಧ್ವಜಾರೋಹಣ ನೆರವೇರಿಸಿ ಶೇಷವಾಹನ ಉತ್ಸವ ನಡೆಯಿತು.
ಆಗಮಿಕ ವಿದ್ವಾನ್ ಪ್ರವೀಣ್ ದೀಕ್ಷಿತ್ ಧರ್ಮ ಧ್ವಜಾರೋಹಣ ನೆರವೇರಿಸಿದರು. ಶೇಷವಾಹನ ಉತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ಪ್ರಾಕಾರೋತ್ಸವ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಮೂಲದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದೆ.