ನಗರದಲ್ಲಿ ಮಂಗಳವಾರ ಉದ್ಯೋಗ ಮೇಳ ಉದ್ಘಾಟನೆ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಶಿವಕುಮಾರ್ ನೂರು ಜನ್ಮ ಹುಟ್ಟಿ ಬಂದರೂ ನನ್ನ ಮುಖಕ್ಕೆ ಮಸಿ ಬಳಿಯಲು ಆಗದು. ಸದ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಾನು ಆ ರೇಸ್ ನಲ್ಲೂ ಇಲ್ಲ. ಪಕ್ಷದಲ್ಲಿ ಯಾರೂ ನನಗೆ ವಿರೋಧಿಗಳಿಲ್ಲ. ಇದೆಲ್ಲ ವಿರೋಧ ಪಕ್ಷಗಳ ಕುತಂತ್ರ ಅಷ್ಟೇ ಎಂದರು.