<p><strong>ರಾಮನಗರ:</strong> ನಮ್ಮವರು ಬಳಗದ ವತಿಯಿಂದ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ‘ಸೌಹಾರ್ದ ಭಾರತ’ ಕೃತಿಯ ಜನಾರ್ಪಣೆ ಬಿಡುಗಡೆ ಕಾರ್ಯಕ್ರಮವನ್ನು ನಗರದ ಎಂ.ಎಚ್. ಕಾಲೇಜು ಸಭಾಂಗಣದಲ್ಲಿ ಜ. 10ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಜನ ಪ್ರಕಾಶನ ಪ್ರಕಟಿಸಿರುವ ಈ ಪುಸ್ತಕದ ಜನಾರ್ಪಣೆ ಕಾರ್ಯಕ್ರಮವು ರಾಜ್ಯದಾದ್ಯಂತ ಏಕಕಾಲಕ್ಕೆ ನಡೆಯಲಿದೆ.</p>.<p>ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಮನಗರದ ಆದಿಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ, ರಾಮನಗರ-ಚನ್ನಪಟ್ಟಣದ ಕ್ರೈಸ್ತ ಸಭಾ ಪಾಲಕರಾದ ಘನ ಸ್ಯಾಮ್ಸನ್, ಪಿರಾನ್ಷಾ ವಲಿ ದರ್ಗಾದ ಶಹಬಾಜ್ ಅಲಿ ಷಾ ಚಿಸ್ತಿ ಹಾಗೂ ಬೆಂಗಳೂರಿನ ಸದಾಶಿವನಗರದ ನಾಗಸೇನ ಬುದ್ಧ ವಿಹಾರದ ಭಂತೆ ಬೋಧಿದತ್ತ ಥೇರೊ ಪುಸ್ತಕ ಜನಾರ್ಪಣೆ ಮಾಡಿ ಸೌಹಾರ್ದ ಸಂದೇಶ ನೀಡಲಿದ್ದಾರೆ.</p>.<p>ಪುಸ್ತಕ ಕುರಿತು ಸಾಹಿತಿ ಹಾಗೂ ಪ್ರಗತಿಪರ ಚಿಂತಕಿ ಕೆ. ಷರೀಫಾ ಮಾತನ್ನಾಡಲಿದ್ದಾರೆ. ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ನಮ್ಮವರು ಬಳಗದ ವತಿಯಿಂದ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ‘ಸೌಹಾರ್ದ ಭಾರತ’ ಕೃತಿಯ ಜನಾರ್ಪಣೆ ಬಿಡುಗಡೆ ಕಾರ್ಯಕ್ರಮವನ್ನು ನಗರದ ಎಂ.ಎಚ್. ಕಾಲೇಜು ಸಭಾಂಗಣದಲ್ಲಿ ಜ. 10ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಜನ ಪ್ರಕಾಶನ ಪ್ರಕಟಿಸಿರುವ ಈ ಪುಸ್ತಕದ ಜನಾರ್ಪಣೆ ಕಾರ್ಯಕ್ರಮವು ರಾಜ್ಯದಾದ್ಯಂತ ಏಕಕಾಲಕ್ಕೆ ನಡೆಯಲಿದೆ.</p>.<p>ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಮನಗರದ ಆದಿಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ, ರಾಮನಗರ-ಚನ್ನಪಟ್ಟಣದ ಕ್ರೈಸ್ತ ಸಭಾ ಪಾಲಕರಾದ ಘನ ಸ್ಯಾಮ್ಸನ್, ಪಿರಾನ್ಷಾ ವಲಿ ದರ್ಗಾದ ಶಹಬಾಜ್ ಅಲಿ ಷಾ ಚಿಸ್ತಿ ಹಾಗೂ ಬೆಂಗಳೂರಿನ ಸದಾಶಿವನಗರದ ನಾಗಸೇನ ಬುದ್ಧ ವಿಹಾರದ ಭಂತೆ ಬೋಧಿದತ್ತ ಥೇರೊ ಪುಸ್ತಕ ಜನಾರ್ಪಣೆ ಮಾಡಿ ಸೌಹಾರ್ದ ಸಂದೇಶ ನೀಡಲಿದ್ದಾರೆ.</p>.<p>ಪುಸ್ತಕ ಕುರಿತು ಸಾಹಿತಿ ಹಾಗೂ ಪ್ರಗತಿಪರ ಚಿಂತಕಿ ಕೆ. ಷರೀಫಾ ಮಾತನ್ನಾಡಲಿದ್ದಾರೆ. ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>