ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡರು, ಪಂಚಾಯಿತಿಯಲ್ಲಿ ಎಲ್ಲ ಕೆಲಸಗಳು ಕಾನೂನು ವ್ಯಾಪ್ತಿಯಲ್ಲಿ ಇಲಾಖೆ ನಿಯಮಾನುಸಾರ ನಡೆಯುತ್ತಿವೆ. ನೀವು ಸುಖಾಸುಮ್ಮನೆ ಗದ್ದಲ ಎಬ್ಬಿಸಿ, ಗೊಂದಲ ಸೃಷ್ಟಿಸುತ್ತಿದ್ದೀರಿ ಎಂದು ಜೆಡಿಎಸ್ ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಕೆಲ ಸಮಯ ಎರಡೂ ಪಕ್ಷದವರ ಮಧ್ಯೆ ಮಾತಿನ ಚಕಮಕಿ ನಡೆದು, ನಂತರ ಎರಡೂ ಕಡೆಯವರು ಪಂಚಾಯಿತಿಯಿಂದ ಹೊರನಡೆದರು.