<p><strong>ಚನ್ನಪಟ್ಟಣ:</strong> ಸಮಾಜದ ರಕ್ಷಣೆಯ ಮಹತ್ತರ ಜವಾಬ್ದಾರಿ ಹೊತ್ತಿರುವ ಪೊಲೀಸರು ಪ್ರತಿಕ್ಷಣವು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಡಿವೈಎಸ್ಪಿ ಟಿ.ಮಲ್ಲೇಶ್ ಅಭಿಪ್ರಾಯಪಟ್ಟರು.</p>.<p>ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಹನುಮಂತೇಗೌಡ ಅವರಿಗೆ ಇಲಾಖೆ ವತಿಯಿಂದ ಬುಧವಾರ ಪಟ್ಟಣದಲ್ಲಿ ಆಯೋಜಿಸಿದ್ದ ಆತ್ಮೀಯ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಠಾಣೆಯಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿದ್ದೇವೆ ಎಂಬುದಕ್ಕಿಂತ ತಮ್ಮ ಸಹ ಸಿಬ್ಬಂದಿ, ಮೇಲಧಿಕಾರಿ ಹಾಗೂ ಜನಸಾಮಾನ್ಯರ ಜೊತೆ ಹೇಗೆ ವರ್ತಿಸಿದ್ದೇವೆ ಎಂಬುದು ಬಹಳ ಮುಖ್ಯ. ಅಧಿಕಾರ ದೊಡ್ಡದಿರಲಿ ಚಿಕ್ಕದಿರಲಿ ಮೊದಲು ಪ್ರಾಮಾಣಿಕ ಸೇವೆ ಅವಶ್ಯಕ ಎಂದರು.</p>.<p>ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಮಾತನಾಡಿ, ನಿವೃತ್ತಿ ನಂತರವೂ ತಮ್ಮ ಸೇವೆಯನ್ನು ಸಮಾಜದ ಪ್ರಗತಿಗೆ ವಿನಿಯೋಗಿಸಬೇಕು ಎಂದುಹನುಮಂತೇಗೌಡ ಅವರಿಗೆ ಹೇಳಿದರು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಹನುಮಂತೇಗೌಡ, 33 ವರ್ಷಗಳ ಸುದೀರ್ಘ ಪೊಲೀಸ್ ಸೇವಾವಧಿಯಲ್ಲಿ ಹಲವಾರು ಏಳುಬೀಳುಗಳನ್ನು ಕಂಡಿದ್ದೇನೆ. ಸಮಾಜದ ರಕ್ಷಣೆಯಲ್ಲಿ ಅಳಿಲು ಸೇವೆ ಸಲ್ಲಿಸಿದ ತೃಪ್ತಿ ನನಗಿದೆ ಎಂದರು.</p>.<p>ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಶೋಕ್, ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಸಂತಕುಮಾರ್, ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಸಮಾಜದ ರಕ್ಷಣೆಯ ಮಹತ್ತರ ಜವಾಬ್ದಾರಿ ಹೊತ್ತಿರುವ ಪೊಲೀಸರು ಪ್ರತಿಕ್ಷಣವು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಡಿವೈಎಸ್ಪಿ ಟಿ.ಮಲ್ಲೇಶ್ ಅಭಿಪ್ರಾಯಪಟ್ಟರು.</p>.<p>ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಹನುಮಂತೇಗೌಡ ಅವರಿಗೆ ಇಲಾಖೆ ವತಿಯಿಂದ ಬುಧವಾರ ಪಟ್ಟಣದಲ್ಲಿ ಆಯೋಜಿಸಿದ್ದ ಆತ್ಮೀಯ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಠಾಣೆಯಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿದ್ದೇವೆ ಎಂಬುದಕ್ಕಿಂತ ತಮ್ಮ ಸಹ ಸಿಬ್ಬಂದಿ, ಮೇಲಧಿಕಾರಿ ಹಾಗೂ ಜನಸಾಮಾನ್ಯರ ಜೊತೆ ಹೇಗೆ ವರ್ತಿಸಿದ್ದೇವೆ ಎಂಬುದು ಬಹಳ ಮುಖ್ಯ. ಅಧಿಕಾರ ದೊಡ್ಡದಿರಲಿ ಚಿಕ್ಕದಿರಲಿ ಮೊದಲು ಪ್ರಾಮಾಣಿಕ ಸೇವೆ ಅವಶ್ಯಕ ಎಂದರು.</p>.<p>ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಮಾತನಾಡಿ, ನಿವೃತ್ತಿ ನಂತರವೂ ತಮ್ಮ ಸೇವೆಯನ್ನು ಸಮಾಜದ ಪ್ರಗತಿಗೆ ವಿನಿಯೋಗಿಸಬೇಕು ಎಂದುಹನುಮಂತೇಗೌಡ ಅವರಿಗೆ ಹೇಳಿದರು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಹನುಮಂತೇಗೌಡ, 33 ವರ್ಷಗಳ ಸುದೀರ್ಘ ಪೊಲೀಸ್ ಸೇವಾವಧಿಯಲ್ಲಿ ಹಲವಾರು ಏಳುಬೀಳುಗಳನ್ನು ಕಂಡಿದ್ದೇನೆ. ಸಮಾಜದ ರಕ್ಷಣೆಯಲ್ಲಿ ಅಳಿಲು ಸೇವೆ ಸಲ್ಲಿಸಿದ ತೃಪ್ತಿ ನನಗಿದೆ ಎಂದರು.</p>.<p>ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಶೋಕ್, ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಸಂತಕುಮಾರ್, ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>