ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

Last Updated 26 ಮೇ 2022, 18:43 IST
ಅಕ್ಷರ ಗಾತ್ರ

ರಾಮನಗರ: ಮಾಗಡಿಯ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆದಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮ ಸಂಬಂಧ ಬಂಧಿಸಲಾದ 10 ಆರೋಪಿಗಳ ಪೈಕಿ ಏಳು ಮಂದಿಯನ್ನು ನ್ಯಾಯಾಂಗದ ವಶಕ್ಕೆ ನೀಡಲಾಗಿದ್ದು, ಉಳಿದ ಮೂವರನ್ನು ಹೆಚ್ಚಿನ ವಿಚಾರಣೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಲ್ಲ ಆರೋಪಿಗಳನ್ನು ಬುಧವಾರ ರಾತ್ರಿ ಮಾಗಡಿ ಜೆಎಂಎಫ್‌ಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.

ಈ ಪೈಕಿ ಕೆಂಪೇಗೌಡ ಶಾಲೆಯ ಕ್ಲರ್ಕ್‌ ರಂಗೇಗೌಡ, ರಂಗನಾಥ ಶಾಲೆಯ ಹಿಂದಿ ಶಿಕ್ಷಕ ಕೃಷ್ಣಮೂರ್ತಿ ಹಾಗೂ ಶಿಕ್ಷಕ ಲೋಕೇಶ್‌ ಅವರನ್ನು ಪೊಲೀಸರು ಮರಳಿ ವಶಕ್ಕೆ ಪಡೆದರು. ಕೆಂಪೇಗೌಡ ಪ್ರೌಢಶಾಲೆ ಪ್ರಾಚಾರ್ಯ ಶ್ರೀನಿವಾಸ, ವಿಷಯ ತಜ್ಞರಾದ ಸುಬ್ರಹ್ಮಣ್ಯ, ಶ್ರೀನಿವಾಸ, ಅರ್ಜುನ್, ಅಲೀಂ ಉಲ್ಲಾ, ನಾಗರಾಜು, ಸ್ಥಳೀಯ ಪತ್ರಕರ್ತ ವಿಜಯ್ ಕುಮಾರ್ ಎಂಬುವರನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT