ಸರ್ಕಾರಿ ಶಾಲೆಯ ಎಸ್.ಎಸ್.ಎಲ್.ಸಿ .ವಿದ್ಯಾರ್ಥಿನಿಯರ ಭವಿಷ್ಯವನ್ನು ಉಜ್ವಲಗೊಳಿಸಲು, ಆದಿತ್ಯ ಬಿರ್ಲಾ ಹಾಗೂ ಜನ ಕಲ್ಯಾಣ ಟ್ರಸ್ಟ್, ಜ್ಞಾನಾರ್ಜನ್ ಶೈಕ್ಷಣಿಕ ಯೋಜನೆಯಡಿ ಮುಂದಾಗಿರುವುದು ಪ್ರಶಂಸನೀಯ. ವಿದ್ಯಾರ್ಥಿನಿಯರಿಗೆ ಪರೀಕ್ಷೆಯನ್ನು ಯಾವ ರೀತಿ ಎದುರಿಸಬೇಕು ಎಂಬುದರ ಬಗ್ಗೆ ಧೈರ್ಯ ತುಂಬುವುದರ ಜೊತೆಗೆ, ವಿಶೇಷ ತರಗತಿಗಳನ್ನು ತೆಗೆದುಕೊಂಡು ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿರುವುದು ಸ್ವಾಗತಾರ್ಹ. ಮುಖ್ಯ ಪರೀಕ್ಷೆಗಳು ಕೆಲವೇ ತಿಂಗಳುಗಳಿದ್ದು, ವಿದ್ಯಾರ್ಥಿಗಳು ಒಂದು ನಿಮಿಷವನ್ನು ವ್ಯರ್ಥ ಮಾಡದೆ ವ್ಯಾಸಂಗದತ್ತ ಗಮನ ಹರಿಸಬೇಕು. ಮೊಬೈಲ್, ಟಿವಿಯಿಂದ ದೂರವಿರಬೇಕು ಎಂದರು