ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

SSLC | ಆತಂಕ ದೂರಾಗಿಸಿ, ಆತ್ಮವಿಶ್ವಾಸ ಹೆಚ್ಚಿಸಿದ ಕಾರ್ಯಾಗಾರ

‘ಪ್ರಜಾವಾಣಿ’–‘ಡೆಕ್ಕನ್ ಹೆರಾಲ್ಡ್’ನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ‘ಪ್ರೇರಣಾ ಕಾರ್ಯಾಗಾರ
Published : 21 ಫೆಬ್ರುವರಿ 2025, 12:14 IST
Last Updated : 21 ಫೆಬ್ರುವರಿ 2025, 12:14 IST
ಫಾಲೋ ಮಾಡಿ
Comments
‘ಪ್ರಜಾವಾಣಿ’–‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಬಳಗವು ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ರಾಮನಗರದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಗುರುವಾರ ಹಮ್ಮಿಕೊಂಡಿದ್ದ ‘ಪ್ರೇರಣಾ ಕಾರ್ಯಾಗಾರ’ದಲ್ಲಿ ಈ ಬಾರಿ ಜಿಲ್ಲೆಗೆ ಅತ್ಯುತ್ತಮ ಫಲಿತಾಂಶ ತರುವುದಾಗಿ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು 
‘ಪ್ರಜಾವಾಣಿ’–‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಬಳಗವು ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ರಾಮನಗರದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಗುರುವಾರ ಹಮ್ಮಿಕೊಂಡಿದ್ದ ‘ಪ್ರೇರಣಾ ಕಾರ್ಯಾಗಾರ’ದಲ್ಲಿ ಈ ಬಾರಿ ಜಿಲ್ಲೆಗೆ ಅತ್ಯುತ್ತಮ ಫಲಿತಾಂಶ ತರುವುದಾಗಿ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು 
‘ಪ್ರೇರಣಾ ಕಾರ್ಯಾಗಾರ’ದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಯಲ್ಲಿ ಓದುವುದರಲ್ಲಿ ನಿರತರಾಗಿದ್ದರು
‘ಪ್ರೇರಣಾ ಕಾರ್ಯಾಗಾರ’ದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಯಲ್ಲಿ ಓದುವುದರಲ್ಲಿ ನಿರತರಾಗಿದ್ದರು
‘ಪ್ರಜಾವಾಣಿ’ಯಲ್ಲಿ ಬರುವ ಎಸ್‌ಎಸ್ಎಲ್‌ಸಿ ಪರೀಕ್ಷಾ ದಿಕ್ಸೂಚಿಯನ್ನು ನಾನು ತಪ್ಪದೆ ಓದುತ್ತೇನೆ. ಪರೀಕ್ಷೆ ತಯಾರಿಗೆ ದಿಕ್ಸೂಚಿ ಜೊತೆಗೆ ಈ ಕಾರ್ಯಾಗಾರವು ಪರೀಕ್ಷಾ ಸಾಧನೆಗೆ ನನಗೆ ಮತ್ತಷ್ಟು ಪ್ರೇರಣೆ ನೀಡಿತು. ಈ ಸಲ ಅತಿ ಹೆಚ್ಚು ಅಂಕಗಳನ್ನು ಗಳಿಸುವೆ
ಕೀರ್ತನ ಪಟೇಲ್ ಪಬ್ಲಿಕ್ ಆಂಗ್ಲ ಶಾಲೆ ರಾಮನಗರ
ಪರೀಕ್ಷೆ ದಿನ ಹತ್ತಿರವಾಗುತ್ತಿದ್ದಂತೆ ನನ್ನಲ್ಲಿದ್ದ ಆತಂಕದ ಜೊತೆಗೆ ಒತ್ತಡವೂ ಹೆಚ್ಚಾಗುತ್ತಿತ್ತು. ಕಾರ್ಯಾಗಾರದಲ್ಲಿ ಭಾಗವಹಿಸಿದ ಬಳಿಕ ಒತ್ತಡವು ಕಡಿಮೆಯಾಗಿದೆ. ಸಂಪನ್ಮೂಲ ವ್ಯಕ್ತಿಗಳ ಮಾತು ಹಾಗೂ ಸಲಹೆಗಳು ನನ್ನಲ್ಲಿದ್ದ ಆತಂಕವನ್ನು ದೂರಾಗಿಸಿತು
ಅಬ್ದುಲ್ ಸೂಫಿಯನ್ ಲಿಟಲ್ ಪ್ರೆಟಿ ಆಂಗ್ಲ ಶಾಲೆ ರಾಮನಗರ
ಪರೀಕ್ಷೆಗೆ ವ್ಯವಸ್ಥಿತವಾಗಿ ಯೋಜನೆ ಹಾಕಿಕೊಂಡು ಒತ್ತಡ ಮಾಡಿಕೊಳ್ಳದೆ ಹೇಗೆ ಓದಬೇಕು ಎಂಬುದು ಗೊತ್ತಾಯಿತು. ಇಂತಹದ್ದೊಂದು ಕಾರ್ಯಾಗಾರ ಆಯೋಜಿಸಿದ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಹಾಗೂ ಶಿಕ್ಷಣ ಇಲಾಖೆಗೆ ಎಷ್ಟು ಕೃತಜ್ಞತೆ ಹೇಳಿದರು ಸಾಲದು
ಶ್ರೀಲಕ್ಷ್ಮಿ ಭಾರತೀಯ ಸಂಸ್ಕೃತಿ ವಿದ್ಯಾಪೀಠ ಪ್ರೌಢಶಾಲೆ ರಾಮನಗರ
ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಡಿಸಿ ಸರ್ ಜಿಲ್ಲಾ ಪಂಚಾಯಿತಿ ಸಿಇಒ ಸರ್ ಎಸ್‌ಪಿ ಸರ್ ಅವರು ನಮ್ಮೊಂದಿಗೆ ಮುಕ್ತವಾಗಿ ಆಡಿದ ಮಾತುಗಳು ನನಗೆ ಸ್ಫೂರ್ತಿ ತುಂಬಿದವು. ವಿಷಯವಾರು ಉಪನ್ಯಾಸದಿಂದ ಹೆಚ್ಚು ಅಂಕ ಗಳಿಸುವುದು ಹೇಗೆಂದು ಗೊತ್ತಾಯಿತು
ಮಹಮ್ಮದ್ ರಾಕೀಬ್ ಸರ್ಕಾರಿ ಪ್ರೌಢಶಾಲೆ ಐಜೂರು ರಾಮನಗರ
ಕಾರ್ಯಾಗಾರದಲ್ಲಿ ಭಾಗವಹಿಸಿದ ಬಳಿಕ ನನ್ನಲ್ಲಿದ್ದ ಪರೀಕ್ಷಾ ಭಯ ದೂರವಾಗಿದೆ. ಯಾವುದೇ ಆತಂಕವಿಲ್ಲದೆ ನಿರಾಳವಾಗಿ ಪರೀಕ್ಷೆ ಎದುರಿಸಲು ಕಾರ್ಯಾಗಾರದಲ್ಲಿ ಹಲವು ಟಿಪ್ಸ್‌ಗಳು ಸಿಕ್ಕಿವೆ. ಆ ಮೇರೆಗೆ ಚನ್ನಾಗಿ ಓದಿ ಉತ್ತಮ ಅಂಕಗಳನ್ನು ಪಡೆಯುವೆ
ನಿಶಾಜ್ ಖಾನಂ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ರಾಮನಗರ
ತರಗತಿಯಲ್ಲಿ ನಮ್ಮ ಶಿಕ್ಷಕರು ಪರೀಕ್ಷೆ ತಯಾರಿಗೆ ವಿಷಯವಾರು ಸಲಹೆ–ಸೂಚನೆಗಳನ್ನು ನೀಡಿ ಅಣಿಗೊಳಿಸುತ್ತಲೇ ಇದ್ದಾರೆ. ಅದಕ್ಕೆ ಪೂರಕವಾಗಿ ಈ ಕಾರ್ಯಾಗಾರದಲ್ಲಿ ಸಾಧನೆಗೆ ಪ್ರೇರಣೆ ಸಿಕ್ಕಿದೆ. ಚನ್ನಾಗಿ ಪರೀಕ್ಷೆ ಎದುರಿಸಿ ಅತಿ ಹೆಚ್ಚು ಅಂಕ ಪಡೆಯುವ ಆತ್ಮವಿಶ್ವಾಸ ಮೂಡಿದೆ
ಬಸಂತ್ ನೇತಾಜಿ ಪಾಪ್ಯುಲರ್ ಆಂಗ್ಲ ಶಾಲೆ ರಾಮನಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT