<p><strong>ರಾಮನಗರ:</strong> ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ರಾಮನಗರ ಜಿಲ್ಲೆಯ 20 ಅಧಿಕಾರಿಗಳನ್ನು ಬೇರೆ ಪಂಚಾಯಿತಿಗಳಿಗೆ ನಿಯೋಜನೆ ಮಾಡಿ ಹೊರಡಿಸಿದ್ದ ಆದೇಶಕ್ಕೆ ಪಂಚಾಯತ್ ರಾಜ್ ಇಲಾಖೆ ಆಯುಕ್ತರು ತಡೆ ಒಡ್ಡಿದ್ದಾರೆ.</p>.<p>ರಾಮನಗರ ಜಿಲ್ಲೆಯ 18 ಗ್ರಾಮ ಪಂಚಾಯಿತಿಗಳ 13 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ 7 ಗ್ರೇಡ್–1 ಕಾರ್ಯದರ್ಶಿಗಳು ಸೇರಿದಂತೆ ಒಟ್ಟು 20 ಅಧಿಕಾರಿಗಳನ್ನು ಬೇರೆ ಪಂಚಾಯಿತಿಗಳಿಗೆ ನಿಯೋಜನೆ ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಇದೇ ಆಗಸ್ಟ್ 7ರಂದು ಆದೇಶ ಹೊರಡಿಸಿದ್ದರು.</p>.<p>ರಾಜ್ಯ ವೃಂದದ ಅಧಿಕಾರಿಗಳಾಗಿರುವ ಪಿಡಿಒ ಮತ್ತು ಕಾರ್ಯದರ್ಶಿಗಳ ನಿಯೋಜನೆ ಆದೇಶಕ್ಕೂ ಮುಂಚೆ ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರವೂ ಆಗಿರುವ ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದ ಗಮನಕ್ಕೆ ತರಬೇಕಿತ್ತು.</p>.<p>ಆದರೆ, ರಾಮನಗರ ಜಿ.ಪಂ ಸಿಇಒ ಬೋಡ್ಕೆ ಅವರು ಈ ವಿಷಯವನ್ನು ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದ ಗಮನಕ್ಕೆ ತಾರದೆ ಆದೇಶ ಹೊರಡಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಅರುಂಧತಿ ಚಂದ್ರಶೇಖರ್ ಆಗಸ್ಟ್ 14 ರಂದು ನಿಯೋಜನೆ ಆದೇಶಕ್ಕೆ ತಡೆ ಹಿಡಿದಿದ್ದಾರೆ.</p>.<p>ಉಪ ಚುನಾವಣೆ ಎದುರು ನೋಡುತ್ತಿರುವ ಚನ್ನಪಟ್ಟಣ ತಾಲ್ಲೂಕಿನಲ್ಲೇ ಒಂಬತ್ತು ಪಿಡಿಒ ಹಾಗೂ ಇಬ್ಬರು ಗ್ರೇಡ್–1 ಕಾರ್ಯದರ್ಶಿಗಳು, ಕನಕಪುರ ತಾಲ್ಲೂಕಿನಲ್ಲಿ ನಾಲ್ವರು ಪಿಡಿಒ ಮತ್ತು ನಾಲ್ವರು ಕಾರ್ಯದರ್ಶಿಗಳು ಹಾಗೂ ರಾಮನಗರ ತಾಲ್ಲೂಕಿನ ಒಬ್ಬ ಪಿಡಿಒ ಅನ್ನು ಬೇರೆಡೆಗೆ ನಿಯೋಜಿಸಲಾಗಿತ್ತು.</p>.<p>ಇದರಲ್ಲಿ ಏಳು ಕಾರ್ಯದರ್ಶಿಗಳಿಗೆ ಪ್ರಭಾರ ಪಿಡಿಒ ಜವಾಬ್ದಾರಿ ನೀಡಲಾಗಿತ್ತು. ಸಂಬಂಧಿಸಿದ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ನಿಯೋಜನೆ ಪಟ್ಟಿಯಲ್ಲಿರುವವರನ್ನು ತಕ್ಷಣ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ರಾಮನಗರ ಜಿಲ್ಲೆಯ 20 ಅಧಿಕಾರಿಗಳನ್ನು ಬೇರೆ ಪಂಚಾಯಿತಿಗಳಿಗೆ ನಿಯೋಜನೆ ಮಾಡಿ ಹೊರಡಿಸಿದ್ದ ಆದೇಶಕ್ಕೆ ಪಂಚಾಯತ್ ರಾಜ್ ಇಲಾಖೆ ಆಯುಕ್ತರು ತಡೆ ಒಡ್ಡಿದ್ದಾರೆ.</p>.<p>ರಾಮನಗರ ಜಿಲ್ಲೆಯ 18 ಗ್ರಾಮ ಪಂಚಾಯಿತಿಗಳ 13 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ 7 ಗ್ರೇಡ್–1 ಕಾರ್ಯದರ್ಶಿಗಳು ಸೇರಿದಂತೆ ಒಟ್ಟು 20 ಅಧಿಕಾರಿಗಳನ್ನು ಬೇರೆ ಪಂಚಾಯಿತಿಗಳಿಗೆ ನಿಯೋಜನೆ ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಇದೇ ಆಗಸ್ಟ್ 7ರಂದು ಆದೇಶ ಹೊರಡಿಸಿದ್ದರು.</p>.<p>ರಾಜ್ಯ ವೃಂದದ ಅಧಿಕಾರಿಗಳಾಗಿರುವ ಪಿಡಿಒ ಮತ್ತು ಕಾರ್ಯದರ್ಶಿಗಳ ನಿಯೋಜನೆ ಆದೇಶಕ್ಕೂ ಮುಂಚೆ ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರವೂ ಆಗಿರುವ ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದ ಗಮನಕ್ಕೆ ತರಬೇಕಿತ್ತು.</p>.<p>ಆದರೆ, ರಾಮನಗರ ಜಿ.ಪಂ ಸಿಇಒ ಬೋಡ್ಕೆ ಅವರು ಈ ವಿಷಯವನ್ನು ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದ ಗಮನಕ್ಕೆ ತಾರದೆ ಆದೇಶ ಹೊರಡಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಅರುಂಧತಿ ಚಂದ್ರಶೇಖರ್ ಆಗಸ್ಟ್ 14 ರಂದು ನಿಯೋಜನೆ ಆದೇಶಕ್ಕೆ ತಡೆ ಹಿಡಿದಿದ್ದಾರೆ.</p>.<p>ಉಪ ಚುನಾವಣೆ ಎದುರು ನೋಡುತ್ತಿರುವ ಚನ್ನಪಟ್ಟಣ ತಾಲ್ಲೂಕಿನಲ್ಲೇ ಒಂಬತ್ತು ಪಿಡಿಒ ಹಾಗೂ ಇಬ್ಬರು ಗ್ರೇಡ್–1 ಕಾರ್ಯದರ್ಶಿಗಳು, ಕನಕಪುರ ತಾಲ್ಲೂಕಿನಲ್ಲಿ ನಾಲ್ವರು ಪಿಡಿಒ ಮತ್ತು ನಾಲ್ವರು ಕಾರ್ಯದರ್ಶಿಗಳು ಹಾಗೂ ರಾಮನಗರ ತಾಲ್ಲೂಕಿನ ಒಬ್ಬ ಪಿಡಿಒ ಅನ್ನು ಬೇರೆಡೆಗೆ ನಿಯೋಜಿಸಲಾಗಿತ್ತು.</p>.<p>ಇದರಲ್ಲಿ ಏಳು ಕಾರ್ಯದರ್ಶಿಗಳಿಗೆ ಪ್ರಭಾರ ಪಿಡಿಒ ಜವಾಬ್ದಾರಿ ನೀಡಲಾಗಿತ್ತು. ಸಂಬಂಧಿಸಿದ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ನಿಯೋಜನೆ ಪಟ್ಟಿಯಲ್ಲಿರುವವರನ್ನು ತಕ್ಷಣ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>