<p><strong>ರಾಮನಗರ</strong>: ‘ಕೇಂದ್ರ ಸಚಿವ ಸಂಪುಟದ ಅನುಮೋದನೆ ಸಿಕ್ಕಿರುವ ಸ್ಯಾಟಲೈಟ್ ಟೌನ್ ರಿಂಗ್ ರೋಡ್(ಎಸ್ಟಿಆರ್ಆರ್) ಯೋಜನೆಯು ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಪರಿಹಾರ ಪಾವತಿಸಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದರು.</p>.<p>ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಕಲ್ಯಾಣಪುರಿ ವೈದಿಕ ಸಭಾ ವತಿಯಿಂದ ವೇದನಾದ ಗುರುಕುಲ ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯೋಜನೆ ಭೂಸ್ವಾಧೀನಕ್ಕೆ ಗುರುತಿಸಿರುವ ಭೂಮಿಯನ್ನು ಇನ್ನೂ ಸ್ವಾಧೀನ ಮಾಡಿಕೊಂಡಿಲ್ಲ. ರೈತರೇ ಅಲ್ಲಿ ಕೃಷಿ ಮಾಡುತ್ತಿದ್ದಾರೆ’ ಎಂದರು.</p>.<p>‘ಭೂ ಸ್ವಾಧೀನ ಪ್ರಕ್ರಿಯೆ ತಡವಾಗಿರುವ ಕಾರಣಕ್ಕೆ ಯೋಜನೆಯೇ ನಿಂತು ಹೋಗಿದೆ ಎಂದು ರೈತರು ಆತಂಕಗೊಂಡಿದ್ದಾರೆ. ಯಾವುದೇ ಕಾರಣಕ್ಕೂ ಯೋಜನೆ ನಿಲ್ಲುವುದಿಲ್ಲ. ಭೂಸ್ವಾಧೀನ ಪ್ರಕ್ರಿಯೆ ಶುರುವಾಗುತ್ತಿದ್ದಂತೆ ಪರಿಹಾರ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಪರಿಹಾರ ಕುರಿತು ಸಂಬಂಧಪಟ್ಟ ಇಲಾಖೆ ನಿರ್ಧಾರ ಕೈಗೊಳ್ಳುತ್ತದೆ’ ಎಂದು ತಿಳಿಸಿದರು.</p>.<p>‘ಯೋಜನೆ ಬಗ್ಗೆ ಇಲ್ಲಿನ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಈಗಾಗಲೇ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಯೋಜನೆಗೆ ಸಂಬಂಧಿಸಿದ ಪರಿಹಾರ ಸೇರಿದಂತೆ ರೈತರು ವ್ಯಕ್ತಪಡಿಸುತ್ತಿರುವ ಆತಂಕವನ್ನು ಸಚಿವರ ಗಮನಕ್ಕೆ ತಂದಿದ್ದಾರೆ. ಯಾವುದೇ ಕಾರಣಕ್ಕೂ ಯೋಜನೆ ರದ್ದಾಗುವುದಿಲ್ಲ. ರೈತರಿಗೆ ಈ ವಿಷಯದಲ್ಲಿ ಗೊಂದಲ ಬೇಡ’ ಎಂದು ಹೇಳಿದರು.</p>
<p><strong>ರಾಮನಗರ</strong>: ‘ಕೇಂದ್ರ ಸಚಿವ ಸಂಪುಟದ ಅನುಮೋದನೆ ಸಿಕ್ಕಿರುವ ಸ್ಯಾಟಲೈಟ್ ಟೌನ್ ರಿಂಗ್ ರೋಡ್(ಎಸ್ಟಿಆರ್ಆರ್) ಯೋಜನೆಯು ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಪರಿಹಾರ ಪಾವತಿಸಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದರು.</p>.<p>ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಕಲ್ಯಾಣಪುರಿ ವೈದಿಕ ಸಭಾ ವತಿಯಿಂದ ವೇದನಾದ ಗುರುಕುಲ ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯೋಜನೆ ಭೂಸ್ವಾಧೀನಕ್ಕೆ ಗುರುತಿಸಿರುವ ಭೂಮಿಯನ್ನು ಇನ್ನೂ ಸ್ವಾಧೀನ ಮಾಡಿಕೊಂಡಿಲ್ಲ. ರೈತರೇ ಅಲ್ಲಿ ಕೃಷಿ ಮಾಡುತ್ತಿದ್ದಾರೆ’ ಎಂದರು.</p>.<p>‘ಭೂ ಸ್ವಾಧೀನ ಪ್ರಕ್ರಿಯೆ ತಡವಾಗಿರುವ ಕಾರಣಕ್ಕೆ ಯೋಜನೆಯೇ ನಿಂತು ಹೋಗಿದೆ ಎಂದು ರೈತರು ಆತಂಕಗೊಂಡಿದ್ದಾರೆ. ಯಾವುದೇ ಕಾರಣಕ್ಕೂ ಯೋಜನೆ ನಿಲ್ಲುವುದಿಲ್ಲ. ಭೂಸ್ವಾಧೀನ ಪ್ರಕ್ರಿಯೆ ಶುರುವಾಗುತ್ತಿದ್ದಂತೆ ಪರಿಹಾರ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಪರಿಹಾರ ಕುರಿತು ಸಂಬಂಧಪಟ್ಟ ಇಲಾಖೆ ನಿರ್ಧಾರ ಕೈಗೊಳ್ಳುತ್ತದೆ’ ಎಂದು ತಿಳಿಸಿದರು.</p>.<p>‘ಯೋಜನೆ ಬಗ್ಗೆ ಇಲ್ಲಿನ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಈಗಾಗಲೇ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಯೋಜನೆಗೆ ಸಂಬಂಧಿಸಿದ ಪರಿಹಾರ ಸೇರಿದಂತೆ ರೈತರು ವ್ಯಕ್ತಪಡಿಸುತ್ತಿರುವ ಆತಂಕವನ್ನು ಸಚಿವರ ಗಮನಕ್ಕೆ ತಂದಿದ್ದಾರೆ. ಯಾವುದೇ ಕಾರಣಕ್ಕೂ ಯೋಜನೆ ರದ್ದಾಗುವುದಿಲ್ಲ. ರೈತರಿಗೆ ಈ ವಿಷಯದಲ್ಲಿ ಗೊಂದಲ ಬೇಡ’ ಎಂದು ಹೇಳಿದರು.</p>