<p><strong>ಚನ್ನಪಟ್ಟಣ:</strong> ನಗರದಲ್ಲಿ ಶುಭೋದಯ ಸಾಂಸ್ಕೃತಿಕ ಬಳಗದ ವತಿಯಿಂದ ಸೋಮವಾರ ಪ್ರತಿಭಾ ಪುರಸ್ಕಾರ ಹಾಗೂ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ನಡೆಯಿತು.</p>.<p>ಎಸ್ಎಸ್ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ, ಸನ್ಮಾನಿಸಲಾಯಿತು.</p>.<p>ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಹಾಗೂ ಸೃಜನಾತ್ಮಕತೆ ಬೆಳೆಸಿದರೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ. ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವುದರ ಜೊತೆಗೆ ಅವರಿಗೆ ನೀಡುವ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸುತ್ತದೆ ಎಂದರು.</p>.<p>ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ರಾಂಪುರ ಮಲ್ಲೇಶ್ ಮಾತನಾಡಿ, ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.</p>.<p>ನಿವೃತ್ತ ಪ್ರಾಂಶುಪಾಲ ಪುಟ್ಟಲಿಂಗಯ್ಯ ಮಾತನಾಡಿ, ಪ್ರತಿಭಾವಂತರು ವ್ಯಾಸಂಗ ಮಾಡಿ ವಿದೇಶಗಳಿಗೆ ಹೋಗುವ ಬದಲು ನಮ್ಮ ದೇಶದಲ್ಲೇ ಉಳಿದರೆ ದೇಶ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.</p>.<p>ಆರ್.ಕೆ.ರಾಮಕೃಷ್ಣೇಗೌಡ, ಸಿದ್ದಪ್ಪ, ಮಹೇಶ್ವರ್, ರಾಂಪುರ ಮಲುವೇಗೌಡ, ಪೂರ್ಣಿಮಾ ಕಾರಂತ್, ಸೋಗಲ ರಾಮು, ಎಚ್.ಕೆ. ರಾಮಚಂದ್ರು, ಬಿ. ಪುಟ್ಟಲಿಂಗಯ್ಯ, ಸಿ.ಎಸ್.ಶ್ರೀಕಂಠಯ್ಯ, ಯೋಗೇಶ್ ಚಕ್ಕೆರೆ, ರಾಮಣ್ಣ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ನಗರದಲ್ಲಿ ಶುಭೋದಯ ಸಾಂಸ್ಕೃತಿಕ ಬಳಗದ ವತಿಯಿಂದ ಸೋಮವಾರ ಪ್ರತಿಭಾ ಪುರಸ್ಕಾರ ಹಾಗೂ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ನಡೆಯಿತು.</p>.<p>ಎಸ್ಎಸ್ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ, ಸನ್ಮಾನಿಸಲಾಯಿತು.</p>.<p>ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಹಾಗೂ ಸೃಜನಾತ್ಮಕತೆ ಬೆಳೆಸಿದರೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ. ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವುದರ ಜೊತೆಗೆ ಅವರಿಗೆ ನೀಡುವ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸುತ್ತದೆ ಎಂದರು.</p>.<p>ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ರಾಂಪುರ ಮಲ್ಲೇಶ್ ಮಾತನಾಡಿ, ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.</p>.<p>ನಿವೃತ್ತ ಪ್ರಾಂಶುಪಾಲ ಪುಟ್ಟಲಿಂಗಯ್ಯ ಮಾತನಾಡಿ, ಪ್ರತಿಭಾವಂತರು ವ್ಯಾಸಂಗ ಮಾಡಿ ವಿದೇಶಗಳಿಗೆ ಹೋಗುವ ಬದಲು ನಮ್ಮ ದೇಶದಲ್ಲೇ ಉಳಿದರೆ ದೇಶ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.</p>.<p>ಆರ್.ಕೆ.ರಾಮಕೃಷ್ಣೇಗೌಡ, ಸಿದ್ದಪ್ಪ, ಮಹೇಶ್ವರ್, ರಾಂಪುರ ಮಲುವೇಗೌಡ, ಪೂರ್ಣಿಮಾ ಕಾರಂತ್, ಸೋಗಲ ರಾಮು, ಎಚ್.ಕೆ. ರಾಮಚಂದ್ರು, ಬಿ. ಪುಟ್ಟಲಿಂಗಯ್ಯ, ಸಿ.ಎಸ್.ಶ್ರೀಕಂಠಯ್ಯ, ಯೋಗೇಶ್ ಚಕ್ಕೆರೆ, ರಾಮಣ್ಣ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>