<p><strong>ಮಾಗಡಿ:</strong> ಚಲಿಸುತ್ತಿದ್ದ ಶಾಲಾ ಬಸ್ನಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. </p>.<p>ಎನ್ಇಎಸ್ ಬಡಾವಣೆ ಎಸ್.ಪಿ.ಎಸ್ ಶಾಲೆ ಎರಡನೇ ತರಗತಿ ವಿದ್ಯಾರ್ಥಿ ಹೊಸಪಾಳ್ಯ ಜನತಾ ಕಾಲೊನಿ ನಿವಾಸಿ ಲೋಕೇಶ್-ರಾಧಾ ದಂಪತಿ ಪುತ್ರ ರಜತ್ (7) ಮೃತ ಶಾಲಾ ವಿದ್ಯಾರ್ಥಿ.</p>.<p>ಶುಕ್ರವಾರ ಸಂಜೆ ಶಾಲೆ ಮುಗಿಸಿ ವಾಪಸ್ ಬರುತ್ತಿದ್ದಾಗ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ರಜತ್ ರಸ್ತೆಗೆ ಬಿದ್ದಿದ್ದಾನೆ. ಹಿಂದಿನ ಚಕ್ರ ಮುಖದ ಮೇಲೆ ಹರಿದ ಪರಿಣಾಮ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಚಾಲಕನ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಅತಿವೇಗ ಹಾಗೂ ಬಸ್ನ ಬಾಗಿಲು ಸರಿಯಾಗಿ ಹಾಕದ ಕಾರಣ ಬಾಗಿಲು ತೆರೆದುಕೊಂಡಿದೆ. ಇದರಿಂದ ಅವಘಡ ಸಂಭವಿಸಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>ಬಾಲಕನ ಪೋಷಕರು ಮೂಲತಃ ಕೊಳ್ಳೇಗಾಲದ ಹನ್ನೂರಿನವರು. ಕೂಲಿ ಕೆಲಸಕ್ಕೆಂದು ವಲಸೆ ಬಂದು ನೆಲೆಸಿತ್ತು. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಚಲಿಸುತ್ತಿದ್ದ ಶಾಲಾ ಬಸ್ನಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. </p>.<p>ಎನ್ಇಎಸ್ ಬಡಾವಣೆ ಎಸ್.ಪಿ.ಎಸ್ ಶಾಲೆ ಎರಡನೇ ತರಗತಿ ವಿದ್ಯಾರ್ಥಿ ಹೊಸಪಾಳ್ಯ ಜನತಾ ಕಾಲೊನಿ ನಿವಾಸಿ ಲೋಕೇಶ್-ರಾಧಾ ದಂಪತಿ ಪುತ್ರ ರಜತ್ (7) ಮೃತ ಶಾಲಾ ವಿದ್ಯಾರ್ಥಿ.</p>.<p>ಶುಕ್ರವಾರ ಸಂಜೆ ಶಾಲೆ ಮುಗಿಸಿ ವಾಪಸ್ ಬರುತ್ತಿದ್ದಾಗ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ರಜತ್ ರಸ್ತೆಗೆ ಬಿದ್ದಿದ್ದಾನೆ. ಹಿಂದಿನ ಚಕ್ರ ಮುಖದ ಮೇಲೆ ಹರಿದ ಪರಿಣಾಮ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಚಾಲಕನ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಅತಿವೇಗ ಹಾಗೂ ಬಸ್ನ ಬಾಗಿಲು ಸರಿಯಾಗಿ ಹಾಕದ ಕಾರಣ ಬಾಗಿಲು ತೆರೆದುಕೊಂಡಿದೆ. ಇದರಿಂದ ಅವಘಡ ಸಂಭವಿಸಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>ಬಾಲಕನ ಪೋಷಕರು ಮೂಲತಃ ಕೊಳ್ಳೇಗಾಲದ ಹನ್ನೂರಿನವರು. ಕೂಲಿ ಕೆಲಸಕ್ಕೆಂದು ವಲಸೆ ಬಂದು ನೆಲೆಸಿತ್ತು. ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>