<p><strong>ರಾಮನಗರ:</strong> ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಫೆ. 7 ಮತ್ತು 8ರಂದು ನಗರದ ಜಾನಪದ ಲೋಕದಲ್ಲಿ ‘ವಿದ್ಯಾರ್ಥಿ ಜಾನಪದ ಲೋಕೋತ್ಸವ-2026’ ಹಮ್ಮಿಕೊಳ್ಳಲಾಗಿದೆ.</p>.<p>7ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಲೋಕೋತ್ಸವ ಉದ್ಘಾಟನೆಯ ಸಾನ್ನಿಧ್ಯವನ್ನು ಆದಿಚುಂಚನಗಿರಿ ಶಾಖಾ ಮಠಾಧೀಶ ಅನ್ನದಾನೇಶ್ವರನಾಥ ಸ್ವಾಮೀಜಿ ವಹಿಸಲಿದ್ದಾರೆ. ಸಿನಿಮಾ ನಟ ಹಾಗೂ ನಿರ್ದೇಶಕ ಟಿ.ಎಸ್. ನಾಗಾಭರಣ ಲೋಕೋತ್ಸವ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.</p>.<p>ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು ಅವರು ಕರಕುಶಲ ಮೇಳ ಉದ್ಘಾಟಿಸುವರು. ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸುವರು. ಪರಿಷತ್ತಿನ ಅಧ್ಯಕ್ಷರಾದ ಪ್ರೊ. ಹಿ.ಚಿ. ಬೋರಲಿಂಗಯ್ಯ ಪ್ರಾಸ್ತಾವಿಕ ಮಾತುಗಳನ್ನಾಡುವರು. ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಅತಿಥಿಗಳನ್ನು ಸ್ವಾಗತಿಸುವರು.</p>.<p>ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9.30ರವರೆಗೆ ಜಾನಪದ ಕಲಾ ಪ್ರದರ್ಶನ ಆಯೋಜಿಸಲಾಗಿದೆ. ರಾತ್ರಿ 8ರಿಂದ 9 ಗಂಟೆಯವರೆಗೆ ಜಾನಪದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಕೆರೆಗೆ ಹಾರ ಜಾನಪದ ರೂಪಕ ಪ್ರದರ್ಶನ ಏರ್ಪಡಿಸಲಾಗಿದೆ.</p>.<p>ಫೆ. 8ರಂದು ಬೆಳಿಗ್ಗೆ 10.30ಕ್ಕೆ ಯುವಜನರಲ್ಲಿ ಜನಪದ ಗಾಯನ ಮತ್ತು ಕಲೆಗಳ ಸಂವರ್ಧನೆ ಕುರಿತು ಸಂವಾದ ನಡೆಯಲಿದೆ. ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಪ್ರಾಸ್ತಾವಿಕವಾಗಿ ಮಾತನಾಡುವರು. ಜಾನಪದ ವಿ.ವಿ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪಗೌಡ ಆಶಯ ನುಡಿಗಳನ್ನಾಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಅಧ್ಯಕ್ಷತೆ ವಹಿಸುವರು.</p>.<p>ಮಧ್ಯಾಹ್ನ 1.30ಕ್ಕೆ ಜಾನಪದ ಗೀತೆ ಗಾಯನೋತ್ಸವ-2026 ಆಯೋಜಿಸಲಾಗಿದೆ. ಸಂಜೆ 4 ಗಂಟೆಯಿಂದ 4.30ರವರೆಗೆ ಬುಡಕಟ್ಟು ಕಲೆಗಳ ಆಕರ್ಷಣೆ ಆಯೋಜಿಸಲಾಗಿದೆ. ಸಂಜೆ 4.30 ರಿಂದ 5.30ರವರೆಗೆ ಆಧುನಿಕ ಗಾಯಕರ ಜಾನಪದ ಗೀತ ಸಂಭ್ರಮ ಏರ್ಪಡಿಸಲಾಗಿದೆ.</p>.<p>ಸಂಜೆ 5.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಪರಿಷತ್ತಿನ ಮಹಾ ಪೋಷಕರಾದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡುವರು.</p>.<p>ಆಂಧ್ರಪ್ರದೇಶದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತರು ಹಾಗೂ ಲೇಖಕ ಜಯರಾಮ್ ರಾಯ್ಪುರ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ರಾತ್ರಿ 7.30ರಿಂದ 9ರವರೆಗೆ ಮಂಡ್ಯ ಕರ್ನಾಟಕ ಸಂಘ ಪ್ರಸ್ತುತಪಡಿಸುವ ಮಕ್ಕಳ ಮೂಡಲಪಾಯ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಫೆ. 7 ಮತ್ತು 8ರಂದು ನಗರದ ಜಾನಪದ ಲೋಕದಲ್ಲಿ ‘ವಿದ್ಯಾರ್ಥಿ ಜಾನಪದ ಲೋಕೋತ್ಸವ-2026’ ಹಮ್ಮಿಕೊಳ್ಳಲಾಗಿದೆ.</p>.<p>7ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಲೋಕೋತ್ಸವ ಉದ್ಘಾಟನೆಯ ಸಾನ್ನಿಧ್ಯವನ್ನು ಆದಿಚುಂಚನಗಿರಿ ಶಾಖಾ ಮಠಾಧೀಶ ಅನ್ನದಾನೇಶ್ವರನಾಥ ಸ್ವಾಮೀಜಿ ವಹಿಸಲಿದ್ದಾರೆ. ಸಿನಿಮಾ ನಟ ಹಾಗೂ ನಿರ್ದೇಶಕ ಟಿ.ಎಸ್. ನಾಗಾಭರಣ ಲೋಕೋತ್ಸವ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.</p>.<p>ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು ಅವರು ಕರಕುಶಲ ಮೇಳ ಉದ್ಘಾಟಿಸುವರು. ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸುವರು. ಪರಿಷತ್ತಿನ ಅಧ್ಯಕ್ಷರಾದ ಪ್ರೊ. ಹಿ.ಚಿ. ಬೋರಲಿಂಗಯ್ಯ ಪ್ರಾಸ್ತಾವಿಕ ಮಾತುಗಳನ್ನಾಡುವರು. ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಅತಿಥಿಗಳನ್ನು ಸ್ವಾಗತಿಸುವರು.</p>.<p>ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9.30ರವರೆಗೆ ಜಾನಪದ ಕಲಾ ಪ್ರದರ್ಶನ ಆಯೋಜಿಸಲಾಗಿದೆ. ರಾತ್ರಿ 8ರಿಂದ 9 ಗಂಟೆಯವರೆಗೆ ಜಾನಪದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಕೆರೆಗೆ ಹಾರ ಜಾನಪದ ರೂಪಕ ಪ್ರದರ್ಶನ ಏರ್ಪಡಿಸಲಾಗಿದೆ.</p>.<p>ಫೆ. 8ರಂದು ಬೆಳಿಗ್ಗೆ 10.30ಕ್ಕೆ ಯುವಜನರಲ್ಲಿ ಜನಪದ ಗಾಯನ ಮತ್ತು ಕಲೆಗಳ ಸಂವರ್ಧನೆ ಕುರಿತು ಸಂವಾದ ನಡೆಯಲಿದೆ. ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಪ್ರಾಸ್ತಾವಿಕವಾಗಿ ಮಾತನಾಡುವರು. ಜಾನಪದ ವಿ.ವಿ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪಗೌಡ ಆಶಯ ನುಡಿಗಳನ್ನಾಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಅಧ್ಯಕ್ಷತೆ ವಹಿಸುವರು.</p>.<p>ಮಧ್ಯಾಹ್ನ 1.30ಕ್ಕೆ ಜಾನಪದ ಗೀತೆ ಗಾಯನೋತ್ಸವ-2026 ಆಯೋಜಿಸಲಾಗಿದೆ. ಸಂಜೆ 4 ಗಂಟೆಯಿಂದ 4.30ರವರೆಗೆ ಬುಡಕಟ್ಟು ಕಲೆಗಳ ಆಕರ್ಷಣೆ ಆಯೋಜಿಸಲಾಗಿದೆ. ಸಂಜೆ 4.30 ರಿಂದ 5.30ರವರೆಗೆ ಆಧುನಿಕ ಗಾಯಕರ ಜಾನಪದ ಗೀತ ಸಂಭ್ರಮ ಏರ್ಪಡಿಸಲಾಗಿದೆ.</p>.<p>ಸಂಜೆ 5.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಪರಿಷತ್ತಿನ ಮಹಾ ಪೋಷಕರಾದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡುವರು.</p>.<p>ಆಂಧ್ರಪ್ರದೇಶದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತರು ಹಾಗೂ ಲೇಖಕ ಜಯರಾಮ್ ರಾಯ್ಪುರ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ರಾತ್ರಿ 7.30ರಿಂದ 9ರವರೆಗೆ ಮಂಡ್ಯ ಕರ್ನಾಟಕ ಸಂಘ ಪ್ರಸ್ತುತಪಡಿಸುವ ಮಕ್ಕಳ ಮೂಡಲಪಾಯ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>