<p><strong>ರಾಮನಗರ:</strong> ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇದೇ 30 ಕಡೆಯ ದಿನವಾಗಿದ್ದು, ಅದಕ್ಕೆ ಅವಶ್ಯವಾದ ಬ್ಯಾಂಕ್ ಖಾತೆ ತೆರೆಯಲು ವಿದ್ಯಾರ್ಥಿಗಳು ಹಾಗೂ ಪೋಷಕರು ಬ್ಯಾಂಕುಗಳಿಗೆ ಅಲೆಯತೊಡಗಿದ್ದಾರೆ.</p>.<p>ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಈ ಸಂಬಂಧ ಇಲಾಖೆಯು ಸುತ್ತೋಲೆ ಹೊರಡಿಸಿದ್ದು, ಈ ಸಲವತ್ತು ಪಡೆಯುವ ವಿದ್ಯಾರ್ಥಿಯು ಕಡ್ಡಾಯವಾಗಿ ತನ್ನ ಹೆಸರಿನಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು ಎಂದು ಆದೇಶಿಸಿದೆ. ಕಳೆದ ವರ್ಷ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಿಸುವಂತೆ ಸೂಚಿಸಿದೆ.</p>.<p>ಅದರಂತೆ ಪೋಷಕರು ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಲು ಬ್ಯಾಂಕಿನಿಂದ ಬ್ಯಾಂಕಿಗೆ ಅಲೆಯುತ್ತಿದ್ದಾರೆ. ಆದರೆ ಅಲ್ಲಿನ ಸಿಬ್ಬಂದಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎನ್ನುವುದು ಪೋಷಕರ ದೂರು.</p>.<p>ಸಮಸ್ಯೆ ಏನು?: ವಿದ್ಯಾರ್ಥಿವೇತನಕ್ಕೆಂದು ತೆರೆಯುವ ಖಾತೆಗಳು ಆ ಉದ್ದೇಶಕ್ಕೆ ಮಾತ್ರ ಸೀಮಿತವಾಗಿದ್ದು, ಉಳಿದಂತೆ ಖಾತೆಗಳಲ್ಲಿ ಯಾವುದೇ ಹಣಕಾಸು ವ್ಯವಹಾರ ನಡೆಯದ ಕಾರಣ ಅಂತಹ ಖಾತೆಗಳನ್ನು ತೆರೆಯಲು ಬ್ಯಾಂಕುಗಳ ಸಿಬ್ಬಂದಿ ಹಿಂದೇಟು ಹಾಕುತ್ತಿದ್ದಾರೆ. ಅರ್ಜಿಗಳ ಕೊರತೆ, ಸಿಬ್ಬಂದಿ ಕೊರತೆಯ ನೆಪವೊಡ್ಡಿ ಗ್ರಾಹಕರನ್ನು ವಾಪಸ್ ಕಳುಹಿಸುತ್ತಿದ್ದಾರೆ ಎನ್ನುವುದು ಸಾರ್ವಜನಿಕರ ದೂರು.</p>.<p>ಕೆಲವು ಬ್ಯಾಂಕುಗಳು ಅರ್ಜಿಗಳನ್ನು ಸ್ವೀಕರಿಸುತ್ತಿವೆಯಾದರೂ ಖಾತೆ ಆರಂಭಕ್ಕೆ ತಿಂಗಳ ಅವಧಿ ನೀಡುತ್ತಿವೆ. ಇನ್ನೂ ಕೆಲವು ಕಡೆ ಠೇವಣಿ ಇಡಲು ಸೂಚಿಸಲಾಗುತ್ತಿದೆ.</p>.<p><strong>ಬ್ಯಾಂಕಿನವರ ವಾದವೇನು?:</strong> ವಿದ್ಯಾರ್ಥಿ ವೇತನಕ್ಕೆಂದೇ ಸಾವಿರಾರು ಖಾತೆಗಳನ್ನು ತೆರೆದರೆ ಮುಂದೆ ಅವುಗಳ ನಿರ್ವಹಣೆಯೂ ಹೊರೆಯಾಗುತ್ತದೆ ಎನ್ನುವುದು ಬ್ಯಾಂಕ್ ಸಿಬ್ಬಂದಿಯ ವಾದವಾಗಿದೆ.</p>.<p>‘ಇಂತಹ ಖಾತೆಗಳಲ್ಲಿ ವರ್ಷಕ್ಕೆ ಒಮ್ಮೆ ಹಣ ಬರುವುದು ಬಿಟ್ಟರೆ ಬೇರೆ ವಹಿವಾಟು ಇರುವುದಿಲ್ಲ. ಶೂನ್ಯ ಠೇವಣಿ ಆಗಿಬಿಡುತ್ತದೆ. ಇದು ಬ್ಯಾಂಕ್ ವಹಿವಾಟಿನ ಮೇಲೆಯೂ ಪರಿಣಾಮ ಬೀರುತ್ತದೆ’ ಎಂದು ಬ್ಯಾಂಕ್ವೊಂದರ ಸಿಬ್ಬಂದಿ ಹೇಳುತ್ತಾರೆ.</p>.<p>ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ಜಿಲ್ಲಾಡಳಿತವು ಈ ಬಗ್ಗೆ ಬ್ಯಾಂಕ್ ಸಿಬ್ಬಂದಿಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎನ್ನುವುದು ಪೋಷಕರ ಆಗ್ರಹವಾಗಿದೆ.</p>.<p><strong>ಶಿಕ್ಷಣ ಇಲಾಖೆ ಹೇಳುವುದೇನು?</strong><br />ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಮಾರೇಗೌಡ ‘ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಇದ್ದರೆ ಸಾಕು. ಅವರ ಪೋಷಕರ ಖಾತೆ ಸಂಖ್ಯೆ ನೀಡಿದರೂ ಅಲ್ಲಿಗೆ ವಿದ್ಯಾರ್ಥಿವೇತನ ನೀಡುವ ವ್ಯವಸ್ಥೆ ಇದೆ’ ಎಂದು ಹೇಳಿದರು.<br />‘ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಮಾಡದೇ ಖಾತೆ ತೆರೆದುಕೊಡುವಂತೆ ಜಿಲ್ಲಾಧಿಕಾರಿಗಳು ಬ್ಯಾಂಕ್ ಸಿಬ್ಬಂದಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಬ್ಯಾಂಕಿನ ಸಿಬ್ಬಂದಿಯೂ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಬೇಕು’ ಎಂದು ಹೇಳಿದರು.</p>.<p><strong>ಸಮಾಜ ಕಲ್ಯಾಣ ಇಲಾಖೆ ಹೇಳುವುದೇನು?</strong><br />ವಿದ್ಯಾರ್ಥಿಗಳ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆಯುವುದು ಕಡ್ಡಾಯವಾಗಿದೆ. ಬ್ಯಾಂಕ್ ಸಿಬ್ಬಂದಿ ಸಹಕಾರ ನೀಡದಿದ್ದಲ್ಲಿ, ಖಾತೆ ತೆರೆಯಲು ನಿರಾಕರಿಸಿದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗೆ ದೂರು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಬಹುತೇಕ ಬ್ಯಾಂಕುಗಳಲ್ಲಿ ಮಕ್ಕಳ ಹೆಸರಿನಲ್ಲಿ ಖಾತೆ ಮಾಡಿಸಿಕೊಳ್ಳುತ್ತಿಲ್ಲ. ನಾಳೆ–ನಾಳಿದ್ದು ಬರುವಂತೆ ಸತಾಯಿಸುತ್ತಿದ್ದಾರೆ<br /><em><strong>-ರಮೇಶ್, ಪೋಷಕರು</strong></em></p>.<p>ವಿದ್ಯಾರ್ಥಿಗಳ ಖಾತೆ ತೆರೆಯುವ ಸಂಬಂಧ ಬ್ಯಾಂಕ್ ಸಿಬ್ಬಂದಿಗೆ ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ. ಎಲ್ಲರೂ ಸಹಕರಿಸಬೇಕು. <em><strong>-ಗಂಗಮಾರೇಗೌಡ, ಡಿಡಿಪಿಐ, ರಾಮನಗರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇದೇ 30 ಕಡೆಯ ದಿನವಾಗಿದ್ದು, ಅದಕ್ಕೆ ಅವಶ್ಯವಾದ ಬ್ಯಾಂಕ್ ಖಾತೆ ತೆರೆಯಲು ವಿದ್ಯಾರ್ಥಿಗಳು ಹಾಗೂ ಪೋಷಕರು ಬ್ಯಾಂಕುಗಳಿಗೆ ಅಲೆಯತೊಡಗಿದ್ದಾರೆ.</p>.<p>ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಈ ಸಂಬಂಧ ಇಲಾಖೆಯು ಸುತ್ತೋಲೆ ಹೊರಡಿಸಿದ್ದು, ಈ ಸಲವತ್ತು ಪಡೆಯುವ ವಿದ್ಯಾರ್ಥಿಯು ಕಡ್ಡಾಯವಾಗಿ ತನ್ನ ಹೆಸರಿನಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು ಎಂದು ಆದೇಶಿಸಿದೆ. ಕಳೆದ ವರ್ಷ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಿಸುವಂತೆ ಸೂಚಿಸಿದೆ.</p>.<p>ಅದರಂತೆ ಪೋಷಕರು ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಲು ಬ್ಯಾಂಕಿನಿಂದ ಬ್ಯಾಂಕಿಗೆ ಅಲೆಯುತ್ತಿದ್ದಾರೆ. ಆದರೆ ಅಲ್ಲಿನ ಸಿಬ್ಬಂದಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎನ್ನುವುದು ಪೋಷಕರ ದೂರು.</p>.<p>ಸಮಸ್ಯೆ ಏನು?: ವಿದ್ಯಾರ್ಥಿವೇತನಕ್ಕೆಂದು ತೆರೆಯುವ ಖಾತೆಗಳು ಆ ಉದ್ದೇಶಕ್ಕೆ ಮಾತ್ರ ಸೀಮಿತವಾಗಿದ್ದು, ಉಳಿದಂತೆ ಖಾತೆಗಳಲ್ಲಿ ಯಾವುದೇ ಹಣಕಾಸು ವ್ಯವಹಾರ ನಡೆಯದ ಕಾರಣ ಅಂತಹ ಖಾತೆಗಳನ್ನು ತೆರೆಯಲು ಬ್ಯಾಂಕುಗಳ ಸಿಬ್ಬಂದಿ ಹಿಂದೇಟು ಹಾಕುತ್ತಿದ್ದಾರೆ. ಅರ್ಜಿಗಳ ಕೊರತೆ, ಸಿಬ್ಬಂದಿ ಕೊರತೆಯ ನೆಪವೊಡ್ಡಿ ಗ್ರಾಹಕರನ್ನು ವಾಪಸ್ ಕಳುಹಿಸುತ್ತಿದ್ದಾರೆ ಎನ್ನುವುದು ಸಾರ್ವಜನಿಕರ ದೂರು.</p>.<p>ಕೆಲವು ಬ್ಯಾಂಕುಗಳು ಅರ್ಜಿಗಳನ್ನು ಸ್ವೀಕರಿಸುತ್ತಿವೆಯಾದರೂ ಖಾತೆ ಆರಂಭಕ್ಕೆ ತಿಂಗಳ ಅವಧಿ ನೀಡುತ್ತಿವೆ. ಇನ್ನೂ ಕೆಲವು ಕಡೆ ಠೇವಣಿ ಇಡಲು ಸೂಚಿಸಲಾಗುತ್ತಿದೆ.</p>.<p><strong>ಬ್ಯಾಂಕಿನವರ ವಾದವೇನು?:</strong> ವಿದ್ಯಾರ್ಥಿ ವೇತನಕ್ಕೆಂದೇ ಸಾವಿರಾರು ಖಾತೆಗಳನ್ನು ತೆರೆದರೆ ಮುಂದೆ ಅವುಗಳ ನಿರ್ವಹಣೆಯೂ ಹೊರೆಯಾಗುತ್ತದೆ ಎನ್ನುವುದು ಬ್ಯಾಂಕ್ ಸಿಬ್ಬಂದಿಯ ವಾದವಾಗಿದೆ.</p>.<p>‘ಇಂತಹ ಖಾತೆಗಳಲ್ಲಿ ವರ್ಷಕ್ಕೆ ಒಮ್ಮೆ ಹಣ ಬರುವುದು ಬಿಟ್ಟರೆ ಬೇರೆ ವಹಿವಾಟು ಇರುವುದಿಲ್ಲ. ಶೂನ್ಯ ಠೇವಣಿ ಆಗಿಬಿಡುತ್ತದೆ. ಇದು ಬ್ಯಾಂಕ್ ವಹಿವಾಟಿನ ಮೇಲೆಯೂ ಪರಿಣಾಮ ಬೀರುತ್ತದೆ’ ಎಂದು ಬ್ಯಾಂಕ್ವೊಂದರ ಸಿಬ್ಬಂದಿ ಹೇಳುತ್ತಾರೆ.</p>.<p>ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ಜಿಲ್ಲಾಡಳಿತವು ಈ ಬಗ್ಗೆ ಬ್ಯಾಂಕ್ ಸಿಬ್ಬಂದಿಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎನ್ನುವುದು ಪೋಷಕರ ಆಗ್ರಹವಾಗಿದೆ.</p>.<p><strong>ಶಿಕ್ಷಣ ಇಲಾಖೆ ಹೇಳುವುದೇನು?</strong><br />ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಮಾರೇಗೌಡ ‘ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಇದ್ದರೆ ಸಾಕು. ಅವರ ಪೋಷಕರ ಖಾತೆ ಸಂಖ್ಯೆ ನೀಡಿದರೂ ಅಲ್ಲಿಗೆ ವಿದ್ಯಾರ್ಥಿವೇತನ ನೀಡುವ ವ್ಯವಸ್ಥೆ ಇದೆ’ ಎಂದು ಹೇಳಿದರು.<br />‘ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಮಾಡದೇ ಖಾತೆ ತೆರೆದುಕೊಡುವಂತೆ ಜಿಲ್ಲಾಧಿಕಾರಿಗಳು ಬ್ಯಾಂಕ್ ಸಿಬ್ಬಂದಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಬ್ಯಾಂಕಿನ ಸಿಬ್ಬಂದಿಯೂ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸಬೇಕು’ ಎಂದು ಹೇಳಿದರು.</p>.<p><strong>ಸಮಾಜ ಕಲ್ಯಾಣ ಇಲಾಖೆ ಹೇಳುವುದೇನು?</strong><br />ವಿದ್ಯಾರ್ಥಿಗಳ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆಯುವುದು ಕಡ್ಡಾಯವಾಗಿದೆ. ಬ್ಯಾಂಕ್ ಸಿಬ್ಬಂದಿ ಸಹಕಾರ ನೀಡದಿದ್ದಲ್ಲಿ, ಖಾತೆ ತೆರೆಯಲು ನಿರಾಕರಿಸಿದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗೆ ದೂರು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಬಹುತೇಕ ಬ್ಯಾಂಕುಗಳಲ್ಲಿ ಮಕ್ಕಳ ಹೆಸರಿನಲ್ಲಿ ಖಾತೆ ಮಾಡಿಸಿಕೊಳ್ಳುತ್ತಿಲ್ಲ. ನಾಳೆ–ನಾಳಿದ್ದು ಬರುವಂತೆ ಸತಾಯಿಸುತ್ತಿದ್ದಾರೆ<br /><em><strong>-ರಮೇಶ್, ಪೋಷಕರು</strong></em></p>.<p>ವಿದ್ಯಾರ್ಥಿಗಳ ಖಾತೆ ತೆರೆಯುವ ಸಂಬಂಧ ಬ್ಯಾಂಕ್ ಸಿಬ್ಬಂದಿಗೆ ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ. ಎಲ್ಲರೂ ಸಹಕರಿಸಬೇಕು. <em><strong>-ಗಂಗಮಾರೇಗೌಡ, ಡಿಡಿಪಿಐ, ರಾಮನಗರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>